Just In
- 1 hr ago ಮೀನ ರಾಶಿಗೆ ಮಂಗಳ ಸಂಚಾರ: ಈ 5 ರಾಶಿಯವರು ವೃತ್ತಿ ಬದುಕಿನಲ್ಲಿ ಜಾಗ್ರತೆ
- 1 hr ago ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- 2 hrs ago ಬಿಲ್ಗೇಟ್ಸ್ ಟೀ ಕೇಳಿದ್ದಕ್ಕೆ ಟೀ ಮಾಡುತ್ತಿರುವ ನಾಯಿ: ಕ್ಯೂಟ್ ವೀಡಿಯೋ ವೈರಲ್
- 4 hrs ago ಬದಲಾಯ್ತು ಡಿಡಿ ಲೋಗೋ: ಕೇಸರಿ ಬಣ್ಣಕ್ಕೆ ತಿರುಗಿರುವುದಕ್ಕೆ ಕೆಲವರ ಮೆಚ್ಚುಗೆ, ಕೆಲವರ ಟೀಕೆ
Don't Miss
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ಪೂರದಲ್ಲಿದೆ ತ್ವಚೆ ಹಾಗೂ ಕೂದಲಿನ ಸಮಸ್ಯೆಗೆ ಪರಿಹಾರ
ಕರ್ಪೂರದಲ್ಲಿ ಅನೇಕ ಔಷಧೀಯ ಗುಣಗಳಿವೆ. ಆದ್ದರಿಂದಲೇ ಇದನ್ನು ತ್ವಚೆ ಹಾಗೂ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸಲಾಗುವುದು. ಆರ್ಯುವೇದದಲ್ಲಿ ಅನೇಕ ಬ್ಯೂಟಿ ಟ್ರೀಟ್ ಮೆಂಟ್ ಗಳಿವೆ ಕರ್ಪೂರವನ್ನು ಬಳಸುತ್ತಾರೆ.
ಕರ್ಪೂರ ಮೊಡವೆ ಹೋಗಲಾಡಿಸುವಲ್ಲಂತೂ ತುಂಬಾ ಪರಿಣಾಮಕಾರಿ. ಕರ್ಪೂರ ಬಳಸಿ ತ್ವಚೆ, ಕೂದಲಿನ ಆರೈಕೆಯನ್ನು ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ:
ತ್ವಚೆಯಲ್ಲಿ ತುರಿಕೆ ಕಂಡು ಬಂದರೆ
ತ್ವಚೆಯಲ್ಲಿ ವಿಪರೀತ ತುರಿಕೆ ಕಂಡು ಬಂದರೆ ಅದನ್ನು ಕರ್ಪೂರ ಬಳಸಿ ಕಡಿಮೆಮಾಡಬಹುದು. ಕರ್ಪೂರದ ಪೇಸ್ಟ್ ಅನ್ನು ತುರಿಕೆ ಇರುವ ಕಡೆ ಹಚ್ಚಿದರೆ ತಕ್ಷಣ ಕಡಿಮೆಯಾಗುವುದು.
ಗಾಯವನ್ನು ಒಣಗಿಸಲು
ಕೆಲವರಿಗೆ ಗಾಯವಾದರೆ ಬೇಗನೆ ಒಣಗುವುದಿಲ್ಲ, ಅಂತವರು ಕರ್ಪೂರವನ್ನು ನೀರಿನಲ್ಲಿ ಕರಗಿಸಿ ಗಾಯವನ್ನು ಸ್ವಚ್ಛ ಮಾಡುತ್ತಾ ಬಂದರೆ ಗಾಯ ಗುಣವಾಗುವುದು. ಆಗಷ್ಟೇ ಆದ ಗಾಯಕ್ಕೆ ಕರ್ಪೂರ ಹಾಕಬೇಡಿ. ತುಂಬಾ ದಿನವಾದರೂ ಒಣಗಿದ್ದ ಗಾಯವನ್ನು ಒಣಗಿಸಲು ಮಾತ್ರ ಕರ್ಪೂರ ಬಳಸಿ.
ಮೊಡವೆ
ಕರ್ಪೂರದ ಎಣ್ಣೆಯನ್ನು ಮೊಡವೆ ಇರುವ ಕಡೆ ಹಚ್ಚಿದರೆ ಮೊಡವೆ ಒಣಗುವುದು, ಹಾಗೂ ಮೊಡವೆ ಏಳುವುದನ್ನೂ ತಡೆಗಟ್ಟುತ್ತದೆ.
ತ್ವಚೆಯಲ್ಲಿ ಗುಳ್ಳೆಗಳು ಕಂಡುಬಂದರೆ
ಕೆಲವೊಮ್ಮೆ ತ್ವಚೆಯಲ್ಲಿ ತುರಿಕೆಯ ಜೊತೆ ಚಿಕ್ಕ-ಚಿಕ್ಕ ಗುಳ್ಳೆಗಳು ಕಂಡುಬರುತ್ತದೆ, ಆ ಸಮಸ್ಯೆಯನ್ನು ಹೋಗಲಾಡಿಸಲು ಕರ್ಪೂರವನ್ನು ಮೈಗೆ ಲೇಪಿಸಿದರೆ ಸಾಕು.
ಪಾದಗಳು ಬಿರುಕು ಬಿಟ್ಟಿದ್ದರೆ
ಬಿರುಕು ಪಾದಗಳು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಆ ಸಮಸ್ಯೆ ಕಡಿಮೆಯಾಗಿರುವುದಿಲ್ಲ. ಅಂತವರು ಈ ರೀತಿ ಒಮ್ಮೆ ಟ್ರೈ ಮಾಡಿ ನೋಡಿ.
ಪ್ರತೀದಿನ ಕರ್ಪೂರ ಹಾಕಿ ಉಗುರು ಬೆಚ್ಚಗಿನ ನೀರಿನಲ್ಲಿ 5 ನಿಮಿಷ ಪಾದಗಳನ್ನು ನೆನೆಸಿ, ನಂತರ ಸ್ಕ್ರಬ್ ಮಾಡಿ. ಈ ರೀತಿ ಮಾಡುವುದರಿಂದ ಪಾದಗಳಲ್ಲಿ ಬಿರುಕು ಕಡಿಮೆಯಾಗುವುದು.
ಕೂದಲಿನ ಆರೋಗ್ಯಕ್ಕೆ
ಕರ್ಪೂರ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕರ್ಪೂರದ ಎಣ್ಣೆ ಕೂದಲನ್ನು ಮಂದವಾಗಿಸುತ್ತದೆ, ಕೂದಲಿನ ಬುಡವನ್ನು ಬಲವಾಗಿಸುತ್ತದೆ. ಕರ್ಪೂರವನ್ನು ಮೊಸರು ಜೊತೆ ಮಿಕ್ಸ್ ಮಾಡಿ ಹಚ್ಚಿದರೆ ಕೂದಲಿನ ಹೊಳಪು ಹೆಚ್ಚುವುದು.
ಕೂದಲು ಉದುರುವುದನ್ನು ಕಮ್ಮಿ ಮಾಡುತ್ತದೆ
ಕೂದಲು ಉದುರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ತಲೆಯನ್ನು ಕರ್ಪೂರ ಮತ್ತು ಎಣ್ಣೆ ಮಿಕ್ಸ್ ಮಾಡಿ ಮಸಾಜ್ ಮಾಡಿದರೆ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುವುದು.