Just In
- 2 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 3 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 4 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 4 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಳಿಂಬೆಯಲ್ಲಿದೆ 3 ಸೌಂದರ್ಯವರ್ಧಕ ಗುಣಗಳು
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಮಾತ್ರವಲ್ಲದೆ ಸೌಂದರ್ಯ ಹೆಚ್ಚಿಸುವಲ್ಲಿ ತುಂಬಾ ಸಹಕಾರಿಯಾಗಿದೆ. ತ್ವಚೆ ಕಪ್ಪಿರಲಿ, ಬಿಳುಪಿರಲಿ ಕಲೆರಹಿತವಾಗಿ, ಹೊಳಪಿನಿಂದ ಕೂಡಿದ್ದರೆ ನೋಡಲು ಆರ್ಷಕವಾಗಿ ಕಾಣುವಿರಿ. ದಾಳಿಂಬೆಯಲ್ಲಿ ತ್ವಚೆ ಪೋಷಣೆಗೆ ಅಗತ್ಯವಾದ ವಿಟಮಿನ್ ಸಿ ಮತ್ತು ಬಿ5, ಪೊಟಾಷ್ಯಿಯಂ ಈ ಎಲ್ಲಾ ಅಂಶಗಳಿದ್ದು ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಳಸಬಹುದು. ಅದರ ಜೊತೆಗೆ ನಿಮ್ಮ ಚೆಲುವನ್ನು ಹೆಚ್ಚಿಸಿಕೊಳ್ಳುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.
ಮೊಡವೆ ಬರುವುದನ್ನು ತಡೆಗಟ್ಟುತ್ತದೆ: ಯೌವನ ಪ್ರಾಯದಲ್ಲಿ ಹೆಚ್ಚಿನವರಲ್ಲಿ ಮೊಡವೆ ಸಮಸ್ಯೆ ಕಂಡು ಬರುತ್ತದೆ. ಇದನ್ನು ಬರದಂತೆ ತಡೆಯಲು ಪ್ರತಿದಿನ ಬೆಳಗ್ಗೆ ದಾಳಿಂಬೆ ಅದರ ಜ್ಯೂಸ್ ಅನ್ನು ಸೇವಿಸುತ್ತಾ ಬಂದರೆ ಒಳ್ಳೆಯದು.ಅದಲ್ಲದೆ ಇದರಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ದೂಳು ಅಥವಾ ರಾಸಾಯನಿಕಗಳು ತ್ವಚೆಯ ಮೇಲೆ ಕೆಟ್ಟ ಪ್ರಭಾವ ಬೀರುವುದನ್ನು ತಡೆಯುತ್ತದೆ.
ಮೊಡವೆ ಇರುವವರು ಇದರ ರಸವನ್ನು ಮುಖದ ಮೇಲೆ ಹಚ್ಚಿ ಅರ್ಧ ಗಂಟೆಯ ಬಳಿಕ ಮುಖ ತೊಳೆಯಬೇಕು. ಈ ರೀತಿ ಮಾಡುತ್ತಾ ಬಂದರೆ ಮೊಡವೆ ಕಡಿಮೆಯಾಗುವುದು ಹಾಗೂ ಅದರಿಂದ ಉಂಟಾದ ಕಲೆಯೂ ಕಡಿಮೆಯಾಗುತ್ತದೆ.
ಮುಖದಲ್ಲಿ ನೆರಿಗೆ ಬೀಳುವುದನ್ನು ತಡೆಗಟ್ಟುತ್ತದೆ: ದಾಳಿಂಬೆಯಲ್ಲಿ ಕೊಲೆಜಿನ್ ಅಂಶ ಇರುವುದರಿಂದ ತ್ವಚೆಗೆ ಉಂಟಾಗುವ ಹಾನಿಯನ್ನು ಸರಿಪಡಿಸಿ ನೆರಿಗೆ ಬೀಳುವುದನ್ನು ತಡೆಯುತ್ತದೆ. ಅಲ್ಲದೆ ತ್ವಚೆಯನ್ನು ತುಂಬಾ ಮೃದುವಾಗಿಸುತ್ತದೆ.
ಗಾಯವನ್ನು ಒಣಗಿಸುತ್ತದೆ: ದಾಳಿಂಬೆಯ ಬೀಜವನ್ನು ಗಾಯವನ್ನು ಒಣಗಿಸುವ ಸಾಮರ್ಥ್ಯ ಹೊಂದಿದೆ ಎಂದು ಸಂಶೋಧನೆಯಿಂದ ದೃಢ ಪಟ್ಟಿದೆ. ಇದರ ಬೀಜದ ಎಣ್ಣೆಯನ್ನು ಗಾಯಾವಾದ ಭಾಗಕ್ಕೆ ಹಚ್ಚುತ್ತಾ ಬಂದರೆ ಕಲೆ ಮಾಯವಾಗುವುದು.