Just In
- 51 min ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- 1 hr ago ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- 3 hrs ago ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- 5 hrs ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
Don't Miss
- News Namma Metro: 2023-24ರಲ್ಲಿ ಮೆಟ್ರೋ ವಾರ್ಷಿಕ ಆದಾಯದಲ್ಲಿ ಭಾರೀ ಏರಿಕೆ: ಖರ್ಚು-ಆದಾಯದ ಮಾಹಿತಿ?
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನೆ ಔಷಧ: ಮಧುಮೇಹವನ್ನು ನಿಯಂತ್ರಿಸುವ 'ಆಹಾರ ಪಥ್ಯ'
ಸದ್ದಿಲ್ಲದೆ ನಿಧಾನವಾಗಿ ಕೊಲ್ಲುವ ರೋಗವೇ ಮಧುಮೇಹ. ಬೇರೆ ರೋಗಗಳು ಮಧುಮೇಹದಷ್ಟು ಕಾಡುವುದು ಕಡಿಮೆ. ಮಧುಮೇಹ ಜೀವಮಾನವಿಡಿ ಕಾಡುತ್ತಲೇ ಇರುತ್ತದೆ. ದೇಹದಲ್ಲಿ ಇನ್ಸುಲಿನ್ ಉತ್ಪಾದನೆ ಆಗದೆ ಇರುವುದರಿಂದ ಮಧುಮೇಹ ಕಾಣಿಸುತ್ತದೆ. ಅದರಲ್ಲೂ ಎರಡನೇ ಮಟ್ಟದ ಮಧುಮೇಹವು ಯಾವುದೇ ವ್ಯಕ್ತಿಯನ್ನು ತೀವ್ರವಾಗಿ ಕಾಡುತ್ತದೆ.
ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿದಲ್ಲಿ ತಲೆದೋರುವ ಈ ಸಮಸ್ಯೆ, ಅತಿಯಾದ ಸಕ್ಕರೆ ಸೇವನೆಯಿಂದಲೇ ಮಾತ್ರವೇ ನಿಮ್ಮ ಬಳಿ ಸುಳಿಯುತ್ತದೆ ಎಂಬುದು ಮಾತ್ರ ಸತ್ಯವಲ್ಲ. ಅಧಿಕ ಬೊಜ್ಜು, ವಂಶಪಾರಂಪರ್ಯತೆ, ಅಧಿಕ ಒತ್ತಡ ಹೀಗೆ ಸಕ್ಕರೆ ಕಾಯಿಲೆ ದೇಹಕ್ಕೆ ಅಡರಲು ಒಂದು ಸಣ್ಣ ಕಾರಣ ಸಾಕು. ತೂಕ ನಿಯಂತ್ರಿಸಿ, ಖಂಡಿತ ಮಧುಮೇಹವನ್ನೂ ನಿಯಂತ್ರಿಸಬಹುದು...
ಈ ರೋಗ ನಿಮ್ಮನ್ನು ಕಾಡುತ್ತಿದೆ ಎಂದಾದಲ್ಲಿ ನೀವು ಹೆಚ್ಚು ತಲೆಬಿಸಿ ಮಾಡಬೇಕಾದ ಅಗತ್ಯವಿಲ್ಲ ಇಲ್ಲವೇ ಜೀವನವೇ ಮುಗಿಯಿತು ಎಂದಾಗಿ ನೀವು ನಿರ್ಧರಿಸಬೇಕೆಂದೇನಿಲ್ಲ. ಬದಲಾಗಿ ನಿಮ್ಮ ಜೀವನ ಶೈಲಿಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡುವ ಮೂಲಕ ನೀವು ಸಾಮಾನ್ಯವಾಗಿಯೇ ಜೀವಿಸಬಹುದಾಗಿದೆ. ಮಧುಮೇಹ ರೋಗದ ಹೆಡೆಮುರಿ ಕಟ್ಟಿಹಾಕುವ ಫಲಪ್ರದ ಮನೆಮದ್ದು
ಸಕ್ಕರೆ ಸೇವನೆಯನ್ನು ಮಿತವಾಗಿ ಬಳಸಿಕೊಂಡು, ನಿಯಮಿತ ವ್ಯಾಯಮವನ್ನು ಮಾಡುತ್ತಾ, ಪಥ್ಯ ಪ್ರಕಾರವಾಗಿ ಆಹಾರವನ್ನು ಸೇವಿಸುತ್ತಿದ್ದಲ್ಲಿ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಅದಾಗ್ಯೂ ಕೆಲವೊಂದು ಆಯುರ್ವೇದ ಔಷಧ ವಿಧಾನವನ್ನು ಅರಿತುಕೊಂಡಲ್ಲಿ ಮಧುಮೇಹದ ಹುಟ್ಟಡಗಿಸಬಹುದು ಎಂಬ ಸಿಹಿ ಸುದ್ದಿಯನ್ನೇ ನಾವಿಂದು ಇಂದಿನ ಲೇಖನದಲ್ಲಿ ತಿಳಿಸಲಿದ್ದೇವೆ....
ಹಾಗಲಕಾಯಿಯ ರಸ
ಪ್ರತಿದಿನ ಒಂದು ಲೋಟ ಹಾಗಲಕಾಯಿಯ ರಸವನ್ನು ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ momorcidin ಮತ್ತು charatin ಎಂಬ ವಿಶೇಷ ನಿವಾರಕಗಳು (anti-hyperglycemic compounds) ಕಾರಣವಾಗಿವೆ.
ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.
ನುಗ್ಗೆಸೊಪ್ಪನ್ನು ಆದಷ್ಟು ಆಹಾರಕ್ರಮದಲ್ಲಿ ಬಳಸಿ....
ನುಗ್ಗೆಸೊಪ್ಪನ್ನು ದಂಟಿನಿಂದ ಬಿಡಿಬಿಡಿಯಾಗಿ ಬಿಡಿಸಿ ನೇರವಾಗಿ ಸಾಂಬಾರ್ ಅಥವಾ ದಾಲ್ಗಳಲ್ಲಿ ಇತರ ತರಕಾರಿಗಳೊಂದಿಗೆ ಸೇರಿಸಿ ಬೇಯಿಸಿ ತಿನ್ನಬಹುದು. ತಿಳಿಸಾರು, ಮಜ್ಜಿಗೆ ಹುಳಿ, ತಂಬುಳಿ, ಮೊದಲಾದ ರೂಪದಲ್ಲಿಯೂ ಸೇವಿಸಬಹುದು. ಇನ್ನೊಂದು ವಿಧಾನವೆಂದರೆ ಕೊಂಚ ಬೇಯಿಸಿದ ಎಲೆಗಳನ್ನು ಚಪಾತಿ ಹಿಟ್ಟಿನ ಜೊತೆಗೆ ಕಲಸಿ ಲಟ್ಟಿಸಿ ಪರೋಟಾ ಅಥವಾ ಚಪಾತಿಯ ರೂಪದಲ್ಲಿಯೂ ಸೇವಿಸಬಹುದು.
ದಾಲ್ಚಿನ್ನಿ ಬಳಕೆ
ಸಕ್ಕರೆಯ ಬದಲಿಗೆ ನಿಮ್ಮ ಆಹಾರದಲ್ಲಿ ದಾಲ್ಚಿನ್ನಿಯನ್ನು ಬಳಸಬಹುದಾಗಿದೆ. ದಾಲ್ಚಿನ್ನಿಯು ರಕ್ತದ ಸಕ್ಕರೆ ಮಟ್ಟವನ್ನು ಸ್ಥಿಮಿತದಲ್ಲಿರಿಸಲು ಸಹಾಯ ಮಾಡಲಿದ್ದು ಇದು ಸಕ್ಕರೆಯ ಬದಲಿಗೆ ಬಳಸಬಹುದಾದ ಉತ್ತಮ ಉತ್ಪನ್ನವಾಗಿದೆ. ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ.
ಬೆಂಡೆಕಾಯಿ
ಬೆಂಡೆಕಾಯಿ ಮಧುಮೇಹಿಗಳಿಗೆ ಮತ್ತೊಂದು ಉತ್ತಮ ತರಕಾರಿಯಾಗಿದೆ. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ
ತಂಪು ಪಾನೀಯಗಳಿಂದ ದೂರವಿರಿ
ಕಾರ್ಬೋನೇಟೆಡ್ ಪಾನೀಯಗಳನ್ನು ಸೇವಿಸುವುದೂ ಕೂಡ ಮಧುಮೇಹ ಮೆಲ್ಲಿಟಸ್ ಅಪಾಯವನ್ನು ಮಹಿಳೆಯರಲ್ಲಿ ಎಂಭತ್ತೈದು ಶೇಕಡಾದಷ್ಟು ಹೆಚ್ಚಿಸಿದೆ. ತಂಪು ಪಾನೀಯಗಳನ್ನು ಮಧುಮೇಹಿಗಳು ಆದಷ್ಟು ಕಡಿಮೆ ಮಾಡಬೇಕು. ಕೊಬ್ಬಿನ ಆಹಾರ ಪದಾರ್ಥಗಳ ಸೇವನೆಯನ್ನೂ ಮಧುಮೇಹಿಗಳು ಕಡಿಮೆ ಮಾಡಬೇಕು ಏಕೆಂದರೆ ಇದರಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗಿರುತ್ತದೆ.
ಚಿನ್ನಾಗಿ ನಿದ್ರೆ ಮಾಡಿ...
ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸಲು ನೀವು ಸಾಕಷ್ಟು ನಿದ್ದೆ ಮಾಡುವುದೂ ಅತ್ಯಗತ್ಯವಾಗಿದೆ. ನಿದ್ದೆಯು ನಿಮ್ಮ ಒತ್ತಡವನ್ನು ಇಳಿಮುಖಗೊಳಿಸಲಿದೆ. ನೀವು ಸಾಕಷ್ಟು ನಿದ್ದೆ ಮಾಡದೇ ಇರುವುದು ಮತ್ತು ಹೆಚ್ಚುವರಿ ಒತ್ತಡದಲ್ಲಿರುವುದರಿಂದ ಕೂಡ ಮಧುಮೇಹ ಏರುವ ಸಾಧ್ಯತೆ ಇದೆ ಎಂಬುದಾಗಿ ಅಧ್ಯಯನಗಳು ತಿಳಿಸಿವೆ.