Just In
- 12 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 13 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 13 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 15 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Movies ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂತಹ ತರಕಾರಿಗಳು ಮಧುಮೇಹಿಗಳಿಗೆ ಬಹಳ ಒಳ್ಳೆಯದು,,,,
ಮಧುಮೇಹ (ಡಯಾಬಿಟಿಸ್) ಎನ್ನುವುದು ಸದ್ದಿಲ್ಲದೆ ಕೊಲ್ಲುವ ರೋಗವೆನ್ನಬಹುದು. ಯಾಕೆಂದರೆ ಇದರ ಬಗ್ಗೆ ಗಮನಹರಿಸದಿದ್ದರೆ ಖಂಡಿತವಾಗಿಯೂ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ. ದೇಹದಲ್ಲಿನ ಇನ್ಸುಲಿನ್ ಮಟ್ಟವು ಅಸಾಮಾನ್ಯವಾಗಿದ್ದಾಗ ಅಥವಾ ಅದನ್ನು ಬಳಸಿಕೊಳ್ಳಲು ದೇಹವು ವಿಫಲವಾದಾಗ ಮಧುಮೇಹ ಉಂಟಾಗುತ್ತದೆ.
ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚುವುದು, ತೂಕ ಕಳೆದುಕೊಳ್ಳುವುದು, ಅತಿಯಾಗಿ ಮೂತ್ರ ಹೋಗುವುದು, ದೃಷ್ಟಿ ಮಂದುವಾಗುವುದು, ಆಗಾಗ ಹಸಿವಾಗುವುದು, ಇತ್ಯಾದಿ ಮಧುಮೇಹದ ಲಕ್ಷಣಗಳು. ಮಧುಮೇಹ ಇರುವುದು ಪತ್ತೆಯಾದ ಬಳಿಕ ಅದರ ಬಗ್ಗೆ ಜಾಗೃತೆ ವಹಿಸಿಕೊಳ್ಳಬೇಕು. ತಿನ್ನುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಮಧುಮೇಹವನ್ನು ಸಂಪೂರ್ಣವಾಗಿ ನಿವಾರಿಸಲು ಅಸಾಧ್ಯ. ಮಧುಮೇಹ ರೋಗದ ಹೆಡೆಮುರಿ ಕಟ್ಟಿಹಾಕುವ ಫಲಪ್ರದ ಮನೆಮದ್ದು
ಆದರೆ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಸರಿಯಾದ ಚಿಕಿತ್ಸೆ ಪಡೆಯುತ್ತಾ ಇದ್ದರೆ ಸಾಮಾನ್ಯ ಜೀವನ ಸಾಗಿಸಬಹುದು. ಮಧುಮೇಹಿಗಳು ಯಾವೆಲ್ಲಾ ಆಹಾರವನ್ನು ತಿನ್ನಬಹುದು. ಪೋಷಕಾಂಶಗಳು ಇರುವಂತಹ ಕೆಲವೊಂದು ಆಹಾರಗಳು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಇದು ಯಾವುದೆಂದು ಈ ಲೇಖನದಲ್ಲಿ ತಿಳಿದುಕೊಳ್ಳುವ....
ಬೀಟ್ ರೂಟ್
ಬೀಟ್ ರೂಟ್ನಲ್ಲಿ ಉನ್ನತಮಟ್ಟದ ಪೊಟಾಶಿಯಂ ಮತ್ತು ವಿಟಮಿನ್ ಸಿ ಇದೆ. ಇದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಇದು ದೇಹದ ಶಕ್ತಿಯನ್ನು ಉತ್ತಮಮಟ್ಟದಲ್ಲಿರಿಸಿ ಮಧುಮೇಹದಿಂದ ಉಂಟಾಗುವ ನಿಶ್ಯಕ್ತಿಯನ್ನು ನಿವಾರಿಸುತ್ತದೆ. ಕೆಂಪು ಕೆಂಪಾದ ಗಡ್ಡೆ ಬೀಟ್ರೂಟ್ನ ವೈಶಿಷ್ಟ್ಯವೇನು?
ಹಾಗಲಕಾಯಿ
ಹಾಗಲಕಾಯಿ ಮಧುಮೇಹಿಗಳಿಗೆ ಮತ್ತೊಂದು ಒಳ್ಳೆಯ ತರಕಾರಿ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಣಾಮಕಾರಿಯಾಗಿ ನಿಯಂತ್ರಣದಲ್ಲಿಡುತ್ತದೆ. ಚೋಟುದ್ದ ಹಾಗಲಕಾಯಿ-ಬಾಯಿಗೆ ಕಹಿ, ಆರೋಗ್ಯಕ್ಕೆ ಸಿಹಿ
ಗೆಣಸು
ಗೆಣಸು ಮಧುಮೇಹಿಗಳ ಆಹಾರ ಕ್ರಮದಲ್ಲಿರಬೇಕಾದ ಮತ್ತೊಂದು ತರಕಾರಿ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನೈಸರ್ಗಿಕವಾಗಿ ತಗ್ಗಿಸುತ್ತದೆ. ಸಿಹಿ ಗೆಣಸು ಮಧುಮೇಹಿ ರೋಗಿಗಳ ಪಾಲಿಗೆ ಸಂಜೀವಿನಿ
ಬೆಂಡೆಕಾಯಿ
ಬೆಂಡೆಕಾಯಿ ಮಧುಮೇಹಿಗಳಿಗೆ ಮತ್ತೊಂದು ಉತ್ತಮ ತರಕಾರಿಯಾಗಿದೆ. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಬೆಂಡೆಕಾಯಿ ನೆನೆಸಿಟ್ಟ ನೀರು ಕುಡಿದರೆ ಹತ್ತಾರು ಲಾಭ
ಎಲೆಕೋಸು
ಎಲೆಕೋಸನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಇನ್ಸುಲಿನ್ ಮಟ್ಟವನ್ನು ನಿಯಂತ್ರಣದಲ್ಲಿಡಲು ನೆರವಾಗುವುದು. ಆದರೆ ಇದು ತೂಕ ಕಳೆದುಕೊಳ್ಳಲು ನೆರವಾಗುವುದು. ಎಲೆಕೋಸಿನ ಅತ್ಯುತ್ತಮ 10 ಪ್ರಯೋಜನಗಳು
ಹೂಕೋಸು
ಹೂಕೋಸಿನಲ್ಲಿರುವ ನಾರಿನಾಂಶವು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಇದು ಮಧುಮೇಹಿಗಳಿಗೆ ಅತೀ ಉತ್ತಮ ತರಕಾರಿಯಾಗಿದೆ. ಹೂಕೋಸು ಎಂದಾಕ್ಷಣ ಮುಖ ಸಿಂಡರಿಸಬೇಡಿ ಪ್ಲೀಸ್!