Just In
- 4 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 4 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 5 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 6 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶೇಷ ಲೇಖನ: ಮೂಳೆಗಳ ಆಯುಷ್ಯ ಹೆಚ್ಚಿಸಬೇಕೆ?
ಮಧ್ಯ ವಯಸ್ಸು ದಾಟುತ್ತಿದ್ದಂತೆ ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ನಮ್ಮನ್ನು ಕಾಡುವುದು ಸಾಮಾನ್ಯ. ಕೆಲಸ, ಆಹಾರಕ್ರಮ, ದೇಹದ ಹಾರ್ಮೋನುಗಳು, ದೈಹಿಕ ಚಟುವಟಿಕೆ, ಬದುಕಿನ ಶೈಲಿ ಕಾಯಿಲೆ ಮತ್ತು ಔಷಧಿಗಳ ಬಳಕೆಯಿಂದ ದೇಹದ ಮೂಳೆಗಳು ಸವೆಯುತ್ತಾ ಬರುತ್ತದೆ.
ಅದರಲ್ಲೂ ಅಸ್ಥಿ ರಂಧ್ರತೆ ಅಥವಾ ಆಸ್ಟಿಯೋಪೋರೋಸಿಸ್ ಇಂದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆಯಾಗಿದೆ. ಇದರಿಂದಾಗಿ ಮೂಳೆಗಳ ಗಟ್ಟಿತನ ಮತ್ತು ಸಾಂದ್ರತೆ ಕಡಿಮೆಯಾಗುತ್ತದೆ. ಇದರಿಂದ ಮೂಳೆ ಸವೆತ, ಮೂಳೆ ಮುರಿಯುವ ಸಾಧ್ಯತೆಗಳು ಹೆಚ್ಚಾಗುತ್ತದೆ. ಇದರಿಂದಾಗಿ ಮೂಳೆ ನೋವು, ವೃದ್ಧರಲ್ಲಿ ಬೆನ್ನು ಬಾಗುವಿಕೆ, ಕೀಲುಗಳ ನೋವು, ಸೊಂಟ ನೋವು, ಮೂಳೆ ಮುರಿತ ಮುಂತಾದ ಸಮಸ್ಯೆಗಳು ಕಂಡು ಬರುತ್ತದೆ.
ದೇಹದಲ್ಲಿ ಕ್ಯಾಲ್ಷಿಯಂ ಖನಿಜಗಳ ಅಂಶ ಕಡಿಮೆಯಾಗುವುದೂ ಸಹ ಈ ಸಮಸ್ಯೆಗೆ ಕಾರಣವಾಗಿದೆ. ಕೇವಲ ಔಷಧಿಗಳಿಂದ ಈ ಸಮಸ್ಯೆಗಳನ್ನು ಸಂಪೂರ್ಣ ಗುಣಪಡಿಸಲು ಸಾಧ್ಯವಿಲ್ಲ. ಆದರೆ ನಿಯಮಿತ ವ್ಯಾಯಾಮ ಹಾಗೂ ಕ್ಯಾಲ್ಷಿಯಂ ಮತ್ತು ವಿಟಮಿನ್ ಡಿ ಹೊಂದಿರುವ ಪೌಷ್ಟಿಕ ಆಹಾರ ಸೇವನೆಯಿಂದ ಈ ಸಮಸ್ಯೆಯನ್ನು ತಡೆಗಟ್ಟಬಹುದು..
ಅದರಲ್ಲೂ ಮಹಿಳೆಯರಿಗೆ ಹೆರಿಗೆಯ ನಂತರ ಸ್ವಲ್ಪ ಅಧಿಕ ಕ್ಯಾಲ್ಸಿಯಂ ಬೇಕಾಗುತ್ತದೆ. ಮುಟ್ಟು ನಿಂತ ನಂತರ ಬೆನ್ನು ನೋವು, ಸೊಂಟ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೆ ಈ ರೀತಿ ಮೂಳೆ ಸಮಸ್ಯೆ ಬರುವುದನ್ನು ತಪ್ಪಿಸಬಹುದು. ಮುನ್ನೆಚ್ಚರಿಕೆಯ ಕ್ರಮಗಳೆಂದರೆ ಪ್ರತಿದಿನ ನಡೆಯುವ ವ್ಯಾಯಾಮ, ಈಜುವುದು, ಯೋಗ, ಕ್ಯಾಲ್ಸಿಯಂ ಇರುವ ಆಹಾರಗಳ ಸೇವನೆ ಮಾಡಿದರೆ ಮೂಳೆಗಳು ಸವೆಯುವುದನ್ನು ತಪ್ಪಿಸಬಹುದು.
ಧಾವಂತದ ಬದುಕಿನಲ್ಲಿ ವ್ಯಾಯಾಮಕ್ಕೂ ಒಂದಿಷ್ಟು ಸಮಯ ಮೀಸಲಿಟ್ಟರೆ ನಮ್ಮ ಮೂಳೆಗಳ ಆಯುಷ್ಯ, ಆರೋಗ್ಯ ಎರಡೂ ವೃದ್ಧಿಯಾಗುತ್ತದೆ. ಊಟ, ತಿಂಡಿ, ನಿದ್ದೆಯೊಂದಿಗೆ ವ್ಯಾಯಾಮಕ್ಕೂ ನಮ್ಮ ದಿನಚರಿಯಲ್ಲಿ ಸಮಯ ಕೊಟ್ಟರೆ ಆರೋಗ್ಯಕ್ಕೆ ಒಳ್ಳೆಯದು.