Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 2 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 15 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 16 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
Don't Miss
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- News Bengaluru Suburban Rail Project: ಹಳ್ಳ ಹಿಡಿದ ₹15,767 ಕೋಟಿ ವೆಚ್ಚದ ಕಾಮಗಾರಿ, ಜನಸಾಮಾನ್ಯರು ಹೇಳೋದೇನು ಗೊತ್ತಾ?
- Movies ನಟಿ ಪ್ರೀತಿ ಜಿಂಟಾ ಮದುವೆ ಮುನ್ನವೇ 34 ಮಕ್ಕಳಿಗೆ ತಾಯಿ ಪ್ರೀತಿ ನೀಡಿದ ವಿಷಯ ನಿಮಗೆ ಗೊತ್ತೇ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೃದಯದ ಆರೋಗ್ಯ ಸುರಕ್ಷತೆಗೆ ಒಂದಿಷ್ಟು ಉಪಯುಕ್ತ ಸಲಹೆಗಳು
ಇಂದಿನ ದಿನಗಳಲ್ಲಿ ಒಬ್ಬರ ಹೃದಯವನ್ನು ಮತ್ತೊಬ್ಬರಿಗೆ ಜೋಡಿಸುವಂತಹ ವೈದ್ಯಕೀಯ ಸಾಧನೆಯೂ ನಡೆದಿದೆ. ಆದರೆ ದೇಹದಲ್ಲಿರುವ ಹೃದಯಕ್ಕೆ ಅಪಾಯವನ್ನು ಉಂಟು ಮಾಡಬಲ್ಲ ಒಂದು ಅಂಶವೆಂದರೆ ಅದು ಅಪಧಮನಿ ತಡೆಯೊಡ್ಡುವುದು. ಇದು ಹೃದಯಕ್ಕೆ ತುಂಬಾ ಅಪಾಯಕಾರಿ
ಪ್ರೀತಿಸುವ ಪ್ರತಿಯೊಬ್ಬನೂ ಹೃದಯದ ಬಗ್ಗೆ ಮಾತನಾಡದೆ ಇರಲಿಕ್ಕಿಲ್ಲ. ಈ ಹೃದಯ ನಿನಗಾಗಿ...ಹೀಗೆ ಹಲವಾರು, ಸಿನಿಮಾ ಹಾಡುಗಳನ್ನು ನೀವು ಕೇಳಿರುವಿರಿ... ಅಷ್ಟೇ ಅಲ್ಲದೇ ಸಿನಿಮಾಗಳಲ್ಲೂ ಹೃದಯವನ್ನು ಹಲವಾರು ರೀತಿಯಿಂದಲೂ ವರ್ಣಿಸಿದ್ದಾರೆ. ಹೃದಯ ಜೋಪಾನವಾಗಿರಲು ಮಾಡಿ ಈ ವ್ಯಾಯಾಮ
ಇಂದಿನ ದಿನಗಳಲ್ಲಿ ಒಬ್ಬರ ಹೃದಯವನ್ನು ಮತ್ತೊಬ್ಬರಿಗೆ ಜೋಡಿಸುವಂತಹ ವೈದ್ಯಕೀಯ ಸಾಧನೆಯೂ ನಡೆದಿದೆ. ಆದರೆ ದೇಹದಲ್ಲಿರುವ ಹೃದಯಕ್ಕೆ ಅಪಾಯವನ್ನು ಉಂಟು ಮಾಡಬಲ್ಲ ಒಂದು ಅಂಶವೆಂದರೆ ಅದು ಅಪಧಮನಿ ತಡೆಯೊಡ್ಡುವುದು. ಇದು ಹೃದಯಕ್ಕೆ ತುಂಬಾ ಅಪಾಯಕಾರಿ. ಇಂತಹ ಸಮಸ್ಯೆಯಿಂದ ವರ್ಷಕ್ಕೆ ಹಲವಾರು ಮಂದಿ ಸಾವನ್ನಪ್ಪುತ್ತಾರೆ. ಪುಟ್ಟ ಹೃದಯದ ಆರೋಗ್ಯಕ್ಕೂ ಸ್ವಲ್ಪ ಆದ್ಯತೆ ನೀಡಿ!
ಇದಕ್ಕೆಲ್ಲ ಮುಖ್ಯ ಕಾರಣವೆಂದರೆ ನಾವು ಸಂಸ್ಕರಿತ ಆಹಾರ, ಕೊಬ್ಬಿನ ಆಹಾರವನ್ನು ಸೇವಿಸುವುದು. ಇದಕ್ಕೆ ಪರಿಹಾರ ಇಲ್ಲವೆಂದಲ್ಲ ಅಪಧಮನಿಯಲ್ಲಿರುವ ತಡೆಯನ್ನು ತೆಗೆದರೆ ಆಗ ಹೃದಯಕ್ಕೆ ಆಗುವಂತಹ ಅಪಾಯವು ತುಂಬಾ ಕಡಿಮೆಯಾಗುತ್ತದೆ... ಚಿಂತಿಸದಿರಿ ಇದಕ್ಕೆಂದೇ ಕೆಲವೊಂದು ಮನೆಮದ್ದನ್ನು ನೀಡಿದ್ದೇವೆ, ಚಾಚೂ ತಪ್ಪದೇ ಪಾಲಿಸಿ, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಿ.....
ಸಿಹಿ ಕುಂಬಳಕಾಯಿ
ಮ್ಯಾಗ್ನಿಷಿಯಂ ಕೊರತೆಯಿಂದ ಹೃದಯದ ಬಡೆತ ಹೆಚ್ಚಾದರೆ ಸಿಹಿ ಕುಂಬಳಕಾಯಿ ತಿನ್ನುವುದು ಒಳ್ಳೆಯದು. ಇದರಿಂದ ದೇಹಕ್ಕೆ ಅಗತ್ಯವಿರುವ ಮ್ಯಾಗ್ನಿಷಿಯಂ ದೊರೆಯು ಹೃದಯ ಸಾಧಾರಣವಾಗಿ ಬಡೆದುಕೊಳ್ಳುತ್ತದೆ. ಆರೋಗ್ಯದ ಪಾಲಿನ ಸಂಜೀವಿನಿ-ಸಿಹಿ ಕುಂಬಳಕಾಯಿ
ಅಡುಗೆಗೆ ಆಲೀವ್ ಎಣ್ಣೆಯನ್ನು ಬಳಸಿ
ಅಡುಗೆ ಮನೆಯಲ್ಲಿ ಎಲ್ಲೆಲ್ಲಿ ಎಣ್ಣೆ ಬಳಕೆಯಾಗುತ್ತದೆಯೋ ಅಲ್ಲೆಲ್ಲಾ ಆಲಿವ್ ಎಣ್ಣೆಯನ್ನು ಬಳಸುವುದು ಉತ್ತಮ. ಚಪಾತಿಗಳ ಮೇಲೆ ಸವರಿ ತಿನ್ನುವುದು ಸಹಾ ಉತ್ತಮವಾಗಿದೆ. ರುಚಿಯಲ್ಲಿ ನಮ್ಮ ಸಾಮಾನ್ಯ ಎಣ್ಣೆಗಳಿಗೆ ಸಾಟಿಯಾಗದ ಈ ಎಣ್ಣೆ ಕೊಂಚ ದುಬಾರಿಯೂ ಆಗಿರುವುದರಿಂದ ಇನ್ನೂ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿಲ್ಲ.
ಅಡುಗೆಗೆ ಆಲೀವ್ ಎಣ್ಣೆಯನ್ನು ಬಳಸಿ
ಆದರೆ ಆರೋಗ್ಯದ ದೃಷ್ಟಿಯಿಂದ ರುಚಿ ಮತ್ತು ಬೆಲೆಯಲ್ಲಿ ಕೊಂಚ ಹೊಂದಾಣಿಕೆ ಮಾಡಿಕೊಳ್ಳುವುದು ಬುದ್ಧಿವಂತರ ಲಕ್ಷಣ.
ಬಾದಾಮಿಗಳು
ಹೃದಯಕ್ಕೆ ವಿವಿಧ ಒಣಫಲಗಳು ಉತ್ತಮವಾಗಿವೆ. ಒಣಫಲಗಳಲ್ಲಿ ಬಾದಾಮಿ ಉತ್ತಮವಾಗಿದೆ. ಇದನ್ನು ಹಸಿಯಾಗಿಯೂ, ನಿಮ್ಮ ನಿತ್ಯದ ಆಹಾರಗಳಲ್ಲಿ ಒಂದು ಭಾಗವಾಗಿಯೂ, ಚಿಕ್ಕದಾಗಿ ಕತ್ತರಿಸಿ ಸಿಹಿಪದಾರ್ಥಗಳಲ್ಲಿಯೂ ಬಳಸಬಹುದು.
ಬಾರ್ಲಿ
ನೋಡಲಿಕ್ಕೆ ಬಿಳಿಯ ಬಣ್ಣದ ಗೋಧಿಯಂತೆಯೇ ಇರುವ ಬಾರ್ಲಿ ಸಹಾ ಹೃದಯಕ್ಕೆ ಉತ್ತಮವಾದ ಆಹಾರವಾಗಿದೆ. ಬಾರ್ಲಿಯನ್ನು ತೊಳೆದು ತಣ್ಣೀರಿನಲ್ಲಿ ಇಡಿಯ ರಾತ್ರಿ ನೆನೆಸಿಟ್ಟ ನೀರು ಸಹಾ ಉತ್ತಮವಾಗಿದೆ. ನಿಮ್ಮ ಆಹಾರದಲ್ಲಿ ಬಾರ್ಲಿಯ ಖಾದ್ಯಗಳು ಸಾಕಷ್ಟಿರುವಂತೆ ನೋಡಿಕೊಳ್ಳಿ. ಬಾರ್ಲಿಯ ಸೂಪ್ ಮತ್ತು ಭಕ್ಷ್ಯಗಳನ್ನು ಆಗಾಗ ನಿಮ್ಮ ಆಹಾರದ ಒಂದು ಭಾಗವನ್ನಾಗಿಸಿ.
ಬಾರ್ಲಿ
ಇಡಿಯ ಗೋಧಿ ಉಪಯೋಗಿಸಿ ತಯಾರಿಸುವ ಹುಗ್ಗಿ ಮೊದಲಾದ ಸಿಹಿಗಳನ್ನು ಬಾರ್ಲಿ ಉಪಯೋಗಿಸಿಯೂ ತಯಾರಿಸಬಹುದು. ಕೊಂಚ ಅಂಟಾಗುವುದು ಹೆಚ್ಚು ಎನ್ನಿಸುವುದೇ ವಿನಃ ಪೋಷಕಾಂಶಗಳ ದೃಷ್ಟಿಯಿಂದ ಬಾರ್ಲಿ ಉತ್ತಮವಾಗಿದೆ. ಮಾರುಕಟ್ಟೆಯಲ್ಲಿ ಸಿಗುವ ಬಾರ್ಲಿ ಪುಡಿಗಿಂತಲೂ ಬಾರ್ಲಿಯ ಕಾಳುಗಳೇ ಉತ್ತಮವಾಗಿವೆ. ಬಾರ್ಲಿ ನೀರು: ಇದುವೇ ಆರೋಗ್ಯ ವೃದ್ಧಿಗೆ ಪನ್ನೀರು
ಮೀನು ಸೇವಿಸಿ
ತೈಲಯುಕ್ತ ಮೀನು ಮತ್ತು ಒಮೆಗಾ-3 ಫ್ಯಾಟ್ ಇರುವ ಆಹಾರ ಸೇವಿಸಿ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಲಾಭಕರ. ಬಂಗಡೆ, ಸಾರ್ಡೀನ್ ಗಳು, ತಾಜಾ ಮೀನು, ಸಾಲ್ಮನ್ ಮೀನಿನಲ್ಲಿ ಒಮೆಗಾ-3 ಕೊಬ್ಬು ಹೇರಳವಾಗಿದೆ ಮತ್ತು ಇದು ಹೃದಯದ ಕಾಯಿಲೆಗಳನ್ನು ತಡೆಯಲು ನೆರವಾಗುತ್ತದೆ.
ಒಂದು ಗ್ಲಾಸ್ ದಾಳಿಂಬೆ ಜ್ಯೂಸ್
ನಮಗೆ ಗೊತ್ತಿರುವ ಹಾಗೆ ಮಧುಮೇಹವಿದ್ದವರಿಗೆ ಹೃದಯದ ತೊಂದರೆಯೂ ಇರುತ್ತದೆ. ಆದರೆ ಪ್ರತಿದಿನ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿರಿಸಬಹುದು ಹಾಗೂ ತನ್ಮೂಲಕ ಹೃದಯದ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ದಾಳಿಂಬೆಯಲ್ಲಿ ಕಡಿಮೆ ಪ್ರಮಾಣದ ಸಕ್ಕರೆ ಇರುವ ಮತ್ತು ಹೆಚ್ಚು ಪ್ರಮಾಣದ ಆಂಟಿ ಆಕ್ಸಿಡೆಂಟುಗಳು ಇರುವ ಕಾರಣ ಈ ರಸ ಮಧುಮೇಹಿಗಳೂ ಸೇವಿಸಬಹುದಾಗಿದ್ದು ದಿನವಿಡೀ ಬಾಯಾರಿಕೆಯಾಗದಂತೆಯೂ ನೋಡಿಕೊಳ್ಳಬಹುದು.