Just In
- 49 min ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 1 hr ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 1 hr ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 2 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಗುಣಗಳಿರುವುದು ಭಾರತದ ಸಂಬಾರಗಳಲ್ಲಿ ಮಾತ್ರ!
ಭಾರತದ ಸಂಬಾರ ಪದಾರ್ಥಗಳಿಗೆ ಅನೇಕ ಔಷಧೀಯ ಗುಣಗಳಿವೆ. ಆದ್ದರಿಂದಲೇ ಇದಕ್ಕೆ ವಿದೇಶಿ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಈ ಸಂಬಾರ ಪದಾರ್ಥಗಳನ್ನು ಮಿತಿಯಲ್ಲಿ ಪ್ರತಿದಿನ ಅಡುಗೆಯಲ್ಲಿ ಬಳಸಿದರೆ ಅನೇಕ ಕಾಯಿಲೆಗಳನ್ನು ಬರುವುದನ್ನು ತಡೆಯುತ್ತದೆ.
ಆದ್ದರಿಂದಲೇ ಅಡುಗೆಯ ಸ್ವಾದವನ್ನು ಹೆಚ್ಚಿಸುವ ಈ ಸಂಬಾರ ಪದಾರ್ಥಗಳೂ ಆರೋಗ್ಯವನ್ನು ಹೆಚ್ಚಿಸುತ್ತದೆ. ಪ್ರತಿಯೊಂದು ಸಂಬಾರ ಪದಾರ್ಥವೂ ತನ್ನದೇ ಆದ ಗುಣವನ್ನು ಹೊಂದಿದ್ದು, ಅವುಗಳಲ್ಲಿರುವ ಔಷಧೀಯ ಗುಣಗಳಾವುವು ಎಂದು ನೋಡೋಣ ಬನ್ನಿ:
ಚಕ್ಕೆ
ಚಕ್ಕೆ ಇನ್ಸುಲಿನ್ ಉತ್ಪತ್ತಿಗೆ ಸಹಾಯ ಮಾಡುತ್ತದೆ, ದೇಹದಲ್ಲಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದಲ್ಲದೆ ಅಜೀರ್ಣ, ಶೀತ, ಬೇಧಿ, ಮುಟ್ಟಿನ ಸಮಯದಲ್ಲಿ ಕಂಡು ಬರುವ ಮಾನಸಿಕ ಒತ್ತಡ, ಕಡಿಮೆ ರಕ್ತ ಸಂಚಾರ ಈ ರೀತಿಯ ಸಮಸ್ಯೆಗಳನ್ನು ಗುಣಪಡಿಸುತ್ತದೆ.
ಲವಂಗ
ಲವಂಗ ಹಲ್ಲಿನ ಸಮಸ್ಯೆ ಬರದಂತೆ ನೋಡಿಕೊಳ್ಳುತ್ತದೆ, ಹಲ್ಲು ನೋವು ಕಾಣಿಸಿದಾಗ ಆ ಭಾಗದಲ್ಲಿ ಇಟ್ಟರೆ ನೋವು ಕಡಿಮೆಯಾಗುವುದು. ವಾಂತಿಯನ್ನು ನಿಲ್ಲಿಸಲು ಇದನ್ನು ತಿಂದರೆ ಸಾಕು. ಬೇಧಿಯನ್ನು ತಡೆಗಟ್ಟುತ್ತದೆ, ಅಜೀರ್ಣ ಸಮಸ್ಯೆಯನ್ನು ಪರಿಹರಿಸುತ್ತದೆ.
ಜೀರಿಗೆ
ಜೀರಿಗೆ ರಕ್ತ ಜೀನತೆ ಸಮಸ್ಯೆಯನ್ನು ಪರಿಹರಿಸುತ್ತದೆ. ಪ್ರತೀದಿನ ಜೀರಿಗೆ ನೀರನ್ನು ಕುಡಿದರೆ ಅನಿಯಮಿತ ಮುಟ್ಟನ್ನು ಸರಿ ಪಡಿಸಬಹುದು. ದೇಹಕ್ಕೆ ಕಬ್ಬಿಣದಂಶವನ್ನು ನೀಡುತ್ತದೆ, ಇದರಲ್ಲಿರುವ ಮ್ಯಾಗ್ನಿಸೆ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಂತೆ ಮಾಡುತ್ತದೆ.
ಏಲಕ್ಕಿ
ಏಲಕ್ಕಿ ಗಂಟಲಿನ ಸಮಸ್ಯೆಯನ್ನು ಗುಣ ಪಡಿಸುತ್ತದೆ, ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಉಸಿರಾಟದ ತೊಂದರೆ ಇರುವವರು ಇದನ್ನು ತಿಂದರೆ ಅಧಿಕ ಪ್ರಯೋಜನವನ್ನು ಪಡೆಯಬಹುದು.
ಕೇಸರಿ
ಕೇಸರಿ ಖಿನ್ನತೆಯಿಂದ ಹೊರಬರುವಂತೆ ಮಾಡುತ್ತದೆ. ಇದರಲ್ಲಿ antioxidants ಅಧಿಕವಿದೆ, ಕಣ್ಣಿಗೆ ತುಂಬಾ ಒಳ್ಳೆಯದು, ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಜಾಯಿಕಾಯಿ
ಜಾಯಿಕಾಯಿ ಕೂಡ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ, ಹೊಟ್ಟೆ ಹಸಿವು ಸರಿಯಾದ ರೀತಿಯಲ್ಲಿ ಆಗುವಂತೆ ಮಾಡುತ್ತದೆ. ನಿಮ್ಮ ಸ್ನಾಯುಗಳಲ್ಲಿರುವ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದರ ಬೀಜವನ್ನು ಔಷಧೀಗಳಲ್ಲಿ ಉಪಯೋಗಿಸುತ್ತಾರೆ.
ಕರಿ ಮೆಣಸಿನ ಪುಡಿ
ಕರಿಮೆಣಸು ದೇಹದಲ್ಲಿ ಜೀರ್ಣಕ್ರಿಯೆಗೆ ಅವಶ್ಯಕವಾದ ಹೈಡ್ರೋಕ್ಲೋರಿಕ್ ಆಸಿಡ್ ಉತ್ಪತ್ತಿಯನ್ನು ಹೆಚ್ಚಿಸುತ್ತದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ, ದೇಹಕ್ಕೆ ಅಗತ್ಯವಾದ ಕಬ್ಬಿಣದಂಶವನ್ನು ಕೊಡುತ್ತದೆ.
ಇಂಗು
ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ, ಉಸಿರಾಟದ ತೊಂದರೆಯನ್ನು ಕಡಿಮೆ ಮಾಡುತ್ತದೆ, ಹೆರಿಗೆ ನೋವು, ಮುಟ್ಟಿನ ಸಮಯದಲ್ಲಿ ಕಂಡ ಬರುವ ನೋವನ್ನು ಕಮ್ಮಿ ಮಾಡುತ್ತದೆ. ನಪುಂಸಕತ್ವ ನಿವಾರಿಸುವ ಚಿಕಿತ್ಸೆಯಲ್ಲಿ ಇದನ್ನು ಬಳಸುತ್ತಾರೆ.