Just In
- 1 hr ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 2 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 4 hrs ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 5 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
Don't Miss
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Movies 'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ನಾವು ತಿಂದ ಆಹಾರ ಜೀರ್ಣವಾಗಲು ನಮ್ಮ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಬೇಕು. ಈ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾದರೆ ಅಜೀರ್ಣ, ಹೊಟ್ಟೆ ಉಬ್ಬುವುದು, ಹೊಟ್ಟೆ ತೊಳೆಸುವಿಕೆ ಮುಂತಾದ ಸಮಸ್ಯೆ ಕಂಡು ಬರುವುದು.
ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ನಮ್ಮ ದೇಹದ ಎಲ್ಲಾ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆ ಉಂಟಾಗುವುದು. ಆದ್ದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಅವಶ್ಯಕ. ಈ ಕೆಳಗೆ ನೀಡಿದ ಟಿಪ್ಸ್ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಕಾರಿಯಾಗಿದೆ. ಆದಾಗ್ಯೂ ಅಜೀರ್ಣ ಸಮಸ್ಯೆ ಆಗಾಗ ಕಾಣುತ್ತಿದ್ದರೆ ವೈದ್ಯರ ಹತ್ತಿರ ಸಲಹೆ ಪಡೆಯಿರಿ.
ನಾರಿನ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಿ
ನಾರಿನಂಶವಿರುವ ಆಹಾರಗಳು ಜೀರ್ಣಕ್ರಿಯೆಗೆ ತುಂಬಾ ಸಹಾಯಕಾರಿ. ನಾರಿನಂಶವಿರುವ ಆಹಾರಗಳು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಇರುವಂತೆ ನೋಡಿಕೊಳ್ಳಿ.
ನೀರು
ಕಮ್ಮಿ ಪ್ರಮಾಣದಲ್ಲಿ ನೀರು ಕುಡಿದರೆ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ. ಊಟವಾದ ಬಳಿಕ ಒಂದು ಲೋಟ ಬಿಸಿ ನೀರು ಕುಡಿಯುವುದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು.
ವ್ಯಾಯಾಮ
ದೇಹಕ್ಕೆ ಶ್ರಮವಿಲ್ಲದಿದ್ದರೆ ನಮ್ಮ ದೇಹದ ಅಂಗಳ ಕಾರ್ಯ ವೈಖರಿ ಕೂಡ ಕಡಿಮೆಯಾಗುವುದು. ಬೆವರು ಸುರಿಯುವಂತೆ ಕೆಲಸ ಮಾಡುವುದು ಅಥವಾ ವ್ಯಾಯಾಮ ಮಾಡುವುದು ಮಾಡಿ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಊಟವನ್ನು ನಿಧಾನಕ್ಕೆ ತಿನ್ನಿ
ಊಟ ಮಾಡುವಾಗ ನಿಧಾನಕ್ಕೆ ಚೆನ್ನಾಗಿ ಜಗಿದು ತಿನ್ನಿ. ಹೀಗೆ ತಿಂದರೆ ಜೀರ್ಣಕ್ರಿಯೆ ಸುಲಭವಾಗುವುದು.
ಮಿತಿ ಮೀರಿ ತಿನ್ನಲು ಹೀಗಬೇಡಿ
ಹೊಟ್ಟೆ ಬಿರಿಯುವಂತೆ ತಿಂದರೆ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಆದ್ದರಿಂದ ಯಾವಾಗಲೂ ಮಿತಿ ಆಹಾರ ಸೇವನೆ ಆರೊಗ್ಯದ ದೃಷ್ಟಿಯಿಂದ ಒಳ್ಳೆಯದು.
ಲೋಳೆಸರದ ಜ್ಯೂಸ್
ಅಜೀರ್ಣ ಸಮಸ್ಯೆ ಉಂಟಾಗಿ ಹೊಟ್ಟೆ ನೋವು, ಮಲಬದ್ಧತೆ ಕಾಣಿಸಿಕೊಂಡರೆ ಲೋಳೆಸರದ ಜ್ಯೂಸ್ ಕುಡಿಯುವುದು ಒಳ್ಳೆಯದು.
ಸಕ್ಕರೆಯಂಶವಿರುವ ಆಹಾರವನ್ನು ಕಮ್ಮಿ ಮಾಡಿ
ನಿಮ್ಮ ಡಯಟ್ ನಲ್ಲಿ ಸಕ್ಕರೆಯಂಶವನ್ನು ಕಮ್ಮಿ ತಿನ್ನಿ. ಕೆಫೀನ್ ಅಂಶವನ್ನು ಕೂಡ ಮಿತಿಯಲ್ಲಿ ಸೇವಿಸಿ.
ಒತ್ತಡ
ನಮ್ಮನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳಿಗೆ ಕಾರಣ ಮಾನಸಿಕ ಒತ್ತಡ. ಇದನ್ನು ಕಮ್ಮಿ ಮಾಡಿದರೆ ನಿಮ್ಮ ಅನೇಕ ಸಮಸ್ಯೆಗೆ ಪರಿಹಾರ ದೊರಕಿದಂತೆ.