Just In
- 4 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 13 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 13 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 14 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
Don't Miss
- News Lok Sabha Election: ಚಾಮರಾಜನಗರ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯ ಕಣ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೇಸಿಗೆಯಲ್ಲಿ ಈ ಆಹಾರಗಳನ್ನು ದೂರ ಮಾಡಬೇಡಿ!
ಬೇಸಿಗೆಯಲ್ಲಿ ನೀರಿನಂಶ ಅಧಿಕವಿರುವ ಹಣ್ಣು, ತರಕಾರಿಗಳನ್ನು ತಿನ್ನಬೇಕು. ಇದರಿಂದ ದೇಹದಲ್ಲಿ ಉಷ್ಣತೆಯನ್ನು ಸಮತೋಲನದಲ್ಲಿಡಬಹುದು. ಅದರಲ್ಲೂ ಸೀಸನ್ ಫುಡ್ಸ್ (ಆಯಾ ಆಯಾ ಕಾಲಕ್ಕೆ ಬೆಳೆಯುವ ಆಹಾರಗಳು) ಅಧಿಕ ತಿನ್ನಬೇಕು. ಶೀತಲೀಕರಣ ಮಾಡಿದ ಆಹಾರಗಳನ್ನು ದೂರವಿಡಿ.
ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಅಜೀರ್ಣ, ಮಲಬದ್ಧತೆ, ಪೈಲ್ಸ್, ಕಿಡ್ನಿಯಲ್ಲಿ ಕಲ್ಲು ಈ ರೀತಿಯ ಸಮಸ್ಯೆಗಳು ಕಂಡು ಬರಬಹುದು. ಅದಲ್ಲದೆ ಬೇಸಿಗೆಯಲ್ಲಿ ಮೈ ಬೆವರುವುದರಿಂದ ದೇಹಕ್ಕೆ ಅಧಿಕ ನೀರಿನಂಶ ಅವಶ್ಯಕ. ಆದ್ದರಿಂದ ಅಧಿಕ ನೀರಿನಂಶವಿರುವ ಆಹಾರಗಳನ್ನು ತಿನ್ನಲು ಮರೆಯಬೇಡಿ.
ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡಲು ಈ ಕೆಳಗಿನ ಆಹಾರಗಳನ್ನು ತಿನ್ನುವುದು ಒಳ್ಳೆಯದು:
ಟೊಮೆಟೊ
ಟೊಮೆಟೊದಲ್ಲಿ ಪೊಟಾಷ್ಯಿಯಂ, ಲೈಕೊಪೆನೆ, ವಿಟಮಿನ್ ಸಿ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊ ಜ್ಯೂಸ್ ಮಾಡಿ ಕುಡಿಯುವುದರಿಂದ ದೇಹದಲ್ಲಿ ನೀರಿನಂಶ ಇರುತ್ತದೆ. ಇದನ್ನು ಆಹಾರಕ್ರಮದಲ್ಲಿ ಸೇರಿಸಲು ಮರೆಯಬೇಡಿ.
ಕ್ಯಾರೆಟ್
ಬೆಳಗ್ಗೆ ಒಂದು ಲೋಟ ಕ್ಯಾರೆಟ್ ಜ್ಯೂಸ್ ಕುಡಿದರೆ ದೇಹದಲ್ಲಿರುವ ಬೇಡದ ರಾಸಾಯನಿಕಗಳನ್ನು ಹೊರಹಾಕುವುದರಿಂದ ತ್ವಚೆಯೂ ಆಕರ್ಷಕವಾಗಿರುತ್ತದೆ, ನಿರ್ಜಲೀಕರಣ ಕೂಡ ಉಂಟಾಗುತ್ತದೆ.
ನೂಕೋಲು ಮತ್ತು ಮೂಲಂಗಿ
ನೂಕೋಲು ಹಾಗೂ ಮೂಲಂಗಿಯನ್ನು ತಿಂದರೆ ಇದು ರಕ್ತವನ್ನು ಶುದ್ಧ ಮಾಡುತ್ತದೆ, ಅಲ್ಲದೆ ಮಲಬದ್ಧತೆ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತದೆ.
ಸೌತೆಕಾಯಿ
ಸೌತೆಕಾಯಿಯನ್ನು ತಿಂದರೆ ಬಾಯಾರಿಕೆಯನ್ನು ನೀಗಿಸುವುದು ಮಾತ್ರವಲ್ಲ, ದೇಹದಲ್ಲಿ ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ.
ಕಿತ್ತಳೆ
ಪ್ರತೀದಿನ ಒಂದು ಕಿತ್ತಳೆ ತಿಂದರೆ ಇದರಲ್ಲಿ ನೀರಿನಂಶ ಹಾಗೂ ನಾರಿನಂಶ, ವಿಟಮಿನ್ ಸಿ ಇರುವುದರಿಂದ ದೇಹಕ್ಕೆ ತುಂಬಾ ಒಳ್ಳೆಯದು.
ಪೈನಾಪಲ್
ಪೈನಾಪಲ್ ಕೂಡ ಬೇಸಿಗೆಯಲ್ಲಿ ತಿನ್ನಲು ಸೂಕ್ತವಾದ ಹಣ್ಣಾಗಿದೆ. ಆದರೆ ಗರ್ಭಿಣಿಯರು ಮಾತ್ರ ಈ ಹಣ್ಣನ್ನು ಮುಟ್ಟಲೇಬಾರದು.
ಕಲ್ಲಂಗಡಿ
ಇದು ಅತ್ಯಧಿಕ ನೀರಿನಂಶ ಇರುವ ಹಣ್ಣಾಗಿದೆ. ಬೇಸಿಗೆಯಲ್ಲಿ ತಮ್ಮ ದಿನ ನಿತ್ಯದ ಆಹಾರಕ್ರಮದಲ್ಲಿ ಈ ಹಣ್ಣು ಕೂಡ ಇರುವುದು ಒಳ್ಳೆಯದು. ಮಧುಮೇಹ ಇರುವವರು ಈ ಹಣ್ಣನ್ನು ತಿನ್ನಬಾರದು.
ಸ್ಟ್ರಾಬೆರಿ
ಸ್ಟ್ರಾಬೆರಿಯಲ್ಲಿ ವಿಟಮಿನ್, ಪ್ರೊಟೀನ್, ಅಯೋಡಿನ್,ಪೋಷಕಾಂಶಗಳು ಅಧಿಕವಾಗಿದೆ.
ದ್ರಾಕ್ಚಿ
ದ್ರಾಕ್ಷಿ ತಿಂದರೆ ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಡುವ ನಿರ್ಜಲೀಕರಣ ಹಾಗೂ ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ. ದ್ರಾಕ್ಷಿಯನ್ನು ಮಧುಮೇಹ ಇರುವವರು ಮಿತಿಯಲ್ಲಿ ತಿನ್ನಬಹುದು.