Just In
- 33 min ago ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- 1 hr ago 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- 3 hrs ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 12 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
Don't Miss
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಟಲು ಬೇನೆಯ ಕಿರಿಕಿರಿಗೆ-ಇಲ್ಲಿದೆ ನೋಡಿ ಮನೆಮದ್ದು
ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗುತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು. ಅದರಲ್ಲಿ ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿಬಿಡುತ್ತದೆ.
ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟವಾಗುತ್ತದೆ. ಏನಾದರು ಆಹಾರ ಸೇವಿಸಲು ಸಹ ಕಷ್ಟವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಗಂಟಲು ನೋವಿನ ಕಿರಿಕಿರಿಗೆ, ಇಲ್ಲಿದೆ ಗಿಡಮೂಲಿಕೆ ಚಹಾ
ಇದಕ್ಕೆ ಪ್ರಮುಖ ಕಾರಣ ಫ್ಯಾರಿಂಕ್ಸ್ ಎಂಬ ಉರಿಬಾವು. ಇದು ನಮ್ಮ ಬಾಯಿಯಿಂದ ಹಿಡಿದು ಅನ್ನನಾಳದವರೆಗೆ ಹಬ್ಬಿ, ನಮ್ಮ ಗಂಟಲಿನಲ್ಲಿ ನೋವನ್ನು ತರುತ್ತದೆ.
ಗಂಟಲು
ನೋವು
ಸಾಮಾನ್ಯವಾಗಿ
ಕಂಡು
ಬರುವ
ಒಂದು
ಸಮಸ್ಯೆಯಾಗಿರುವುದರಿಂದಾಗಿ
ಅದರ
ಕುರಿತು
ಭಯಪಡುವ
ಅಗತ್ಯವಿರುವುದಿಲ್ಲ.
ಆದರೂ
ಇದರ
ನೋವನ್ನು
ಮತ್ತು
ಇದು
ಉಂಟು
ಮಾಡುವ
ಅಸೌಕರ್ಯವನ್ನು
ಸಹಿಸಿಕೊಳ್ಳಲು
ಸಾಧ್ಯವಿಲ್ಲ.
ಇದಕ್ಕಾಗಿ
ವೈದ್ಯರ
ಬಳಿ
ಹೋಗುವ
ಬದಲಿಗೆ
ಮನೆಯಲ್ಲಿಯೇ
ಕೆಲವೊಂದು
ಪರಿಹಾರಗಳನ್ನು
ಮಾಡಿಕೊಳ್ಳುವ
ಮೂಲಕ
ಅದನ್ನು
ನಿವಾರಿಸಿಕೊಳ್ಳಿ.....
ಮೆಂತೆಯ ನೀರು
ಮೆಂತೆಯಲ್ಲಿಯೂ ಬ್ಯಾಕ್ಟೀರಿಯಾ ನಿವಾರಕ ಮತ್ತು ಉರಿಯೂತ ನಿವಾರಕ ಗುಣಗಳಿದ್ದು ಗಂಟಲ ಸೋಂಕು ನಿವಾರಿಸಲು ಶಕ್ತವಾಗಿವೆ. ಒಂದು ಲೀಟರ್ ನೀರಿಗೆ ಎರಡು ದೊಡ್ಡಚಮಚ ಮೆಂತೆಕಾಳುಗಳನ್ನು ಹಾಕಿ ಚಿಕ್ಕ ಉರಿಯಲ್ಲಿ ಕುದಿಸಿ. ನೀರು ಕುದಿಯುತ್ತಿದ್ದಂತೆಯೇ ನೀರಿನ ಬಣ್ಣವನ್ನು ಗಮನಿಸಿ. ಅಡುಗೆಮನೆಯ ಮೆಂತೆ- ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು!
ಮೆಂತೆಯ ನೀರು
ಯಾವಾಗ ನೀರಿನಲ್ಲಿ ಮೆಂತೆ ಬಣ್ಣ ಬಿಡತೊಡಗುತ್ತದೆಯೋ ಆಗ ತಕ್ಷಣ ಉರಿ ಆರಿಸಿ ನೀರನ್ನು ಹಾಗೇ ತಣಿಯಲು ಬಿಡಿ. ಈ ನೀರಿನಿಂದ ಬಾಯಿಯನ್ನು ದಿನಕ್ಕೆ ಎರಡು ಬಾರಿ ಅಥವಾ ಮೂರು ಬಾರಿ ಮುಕ್ಕಳಿಸುತ್ತಿರಿ. ವಿಶೇಷವಾಗಿ ಮುಖ ಮೇಲೆತ್ತಿ ಗಂಟಲಿಗೆ ಗಳಗಳ ಮಾಡಿದರೆ ಗಂಟಲ ಬೇನೆ ಶೀಘ್ರವಾಗಿ ಕಡಿಮೆಯಾಗುತ್ತದೆ.
ದಾಳಿಂಬೆಯ ಸಿಪ್ಪೆ
ಸ್ವರ್ಗ ಲೋಕದ ಹಣ್ಣು ದಾಳಿಂಬೆ ಸಿಪ್ಪೆಯ ಔಷಧೀಯ ಗುಣಗಳೇನು?
ದಾಳಿಂಬೆಯ ಸಿಪ್ಪೆ
ಇದಕ್ಕೆ ದಾಳಿಂಬೆ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಕುಟ್ಟಿ ಪುಡಿಮಾಡಿ ಒಂದು ಬಾಟಲಿಯಲ್ಲಿ ಸಂಗ್ರಹಿಸಿ. ಕೆಮ್ಮು ಇದ್ದಾಗ ಒಂದು ದೊಡ್ಡ ಚಮಚ ಪುಡಿಯನ್ನು ಒಂದು ಲೀಟರ್ ನೀರಿನಲ್ಲಿ ಸುಮಾರು ಐದು ನಿಮಿಷಗಳವರೆಗೆ ಕುದಿಸಿ ತಣಿಸಿ ಬಳಿಕ ದಿನಕ್ಕೆರಡು ಬಾರಿ ಬಾಯಿಯನ್ನು ಮುಕ್ಕಳಿಸಿ. ಇದರಿಂದ ಗಂಟಲು ಕೆರೆತ, ಕಫ ಸುಲಭವಾಗಿ ಹೊರಬರಲು ಸಾಧ್ಯವಾಗುತ್ತದೆ ಹಾಗೂ ಕೆಮ್ಮು ಕಡಿಮೆಯಾಗುತ್ತದೆ.
ಲವಂಗ ಮತ್ತು ಜೇನು
ಜೇನು ಮತ್ತು ಲವಂಗದಲ್ಲಿರುವ ಬ್ಯಾಕ್ಟೀರಿಯಾನಿವಾರಕ ಗುಣ ಗಂಟಲ ಕೆರೆತಕ್ಕೆ ಅತ್ಯಂತ ಸಮರ್ಥವಾದ ಮನೆಮದ್ದಾಗಿದೆ. ಸೋಂಕು ಹೆಚ್ಚಾಗಿ ಗಂಟಲಿಗೆ ಆಗಿರುವ ನೋವನ್ನು ಶಮನಗೊಳಿಸಲು, ಕಟ್ಟಿಕೊಂಡಿದ್ದ ಕಫವನ್ನು ಸಡಿಲಗೊಳಿಸಿ ನಿವಾರಿಸಲು ಶಕ್ತವಾಗಿದೆ. ಆಹಾ...ಲವಂಗ ಚಹಾ, ಕಣ ಕಣದಲ್ಲೂ ಆರೋಗ್ಯದ ಶಕ್ತಿ!