Just In
- 29 min ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 1 hr ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 2 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
- 3 hrs ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
Don't Miss
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಣದ್ರಾಕ್ಷಿ ನೆನೆಸಿದ ನೀರು- ದೇಹದ ಲಿವರ್ನ ಆಯಸ್ಸು ನೂರು!
ಒಣದ್ರಾಕ್ಷಿ ಎಂದರೆ ನಾವೆಲ್ಲರೂ ಸಿಹಿತಿಂಡಿಯ ಸೊಗಡು ಹೆಚ್ಚಿಸುವ ಪದಾರ್ಥವೆಂದೇ ಪರಿಗಣಿಸಿದ್ದೇವೆ. ಆದರೆ ಒಣದ್ರಾಕ್ಷಿಯನ್ನು ನೆನೆಸಿಟ್ಟ ನೀರು ಮಾತ್ರ ಆರೋಗ್ಯಕ್ಕೆ ತುಂಬಾ ಉತ್ತಮ. ಎಚ್ಚರ: ನಿಮ್ಮ ಲಿವರ್ ಕೂಡ ಅಪಾಯದಲ್ಲಿ ಸಿಲುಕಿರಬಹುದು!
ಅದರಲ್ಲೂ ವಿಶೇಷವಾಗಿ ಯಕೃತ್ತಿನ ಅಥವಾ ಲಿವರ್ನ ಆರೋಗ್ಯ ಈ ನೀರಿನ ನಿಯಮಿತ ಸೇವನೆಯಿಂದ ಉತ್ತಮಗೊಳ್ಳುತ್ತದೆ. ಯಕೃತ್ನ ಸ್ವಚ್ಛತೆಗೆ ಕೆಲವಾರು ವಿಧಾನಗಳಿವೆ. ಆದರೆ ಒಣದ್ರಾಕ್ಷಿ ನೆನೆಸಿದ ನೀರು ನೀಡುವಂತಹ ಪರಿಣಾಮವನ್ನು ಉಳಿದವು ನೀಡಲಾರವು. ಎಚ್ಚರ: ನಿಮ್ಮ ಲಿವರ್ ಕೂಡ ಅಪಾಯದಲ್ಲಿ ಸಿಲುಕಿರಬಹುದು!
ಈ ನೀರಿಗೆ ಒದಗಿರುವ ಔಷಧೀಯ ಪರಿಣಾಮಕ್ಕೆ ಒಣದ್ರಾಕ್ಷಿಯಲ್ಲಿರುವ ಪೋಷಕಾಂಶಗಳು ಕಾರಣ. ಈ ನೀರನ್ನು ಸೇವಿಸತೊಡಗಿದ ನಾಲ್ಕೇ ದಿನದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮಗೊಂಡಿರುವುದನ್ನು ಗಮನಿಸಬಹುದು. ಅಲ್ಲದೇ ದಿನದ ಚಟುವಟಿಕೆಗಳು ಹೆಚ್ಚು ಉಲ್ಲಾಸದಾಯಕವಾಗಿಯೂ ಇರುತ್ತದೆ. ಬನ್ನಿ, ಈ ಅದ್ಭುತ ಪೇಯವನ್ನು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ....
ಅಗತ್ಯವಿರುವ ಸಾಮಾಗ್ರಿಗಳು
*ನೀರು ಎರಡು ಕಪ್
*ಒಣದ್ರಾಕ್ಷಿ ಒಂದಿಷ್ಟು (ಸುಮಾರು 8 ರಿಂದ 10ರಷ್ಟು ಸಾಕು)
ಒಣದ್ರಾಕ್ಷಿ ಹೀಗಿರಬೇಕು?
ಇವು ತುಂಬಾ ಹೊಳಪುಳ್ಳದ್ದಾಗಿರಬಾರದು. ಅತಿ ಪ್ರಖರ ಬಣ್ಣದ್ದೂ ಆಗಿರಬಾರದು. ಏಕೆಂದರೆ ಈ ಹೊಳಪು ಬರಲಿಕ್ಕೆ ಕೆಲವರು ಕೃತಕ ರಾಸಾಯನಿಕಗಳನ್ನು ಬಳಸಿರಬಹುದು. ಆದರೆ ಗಾಢ ಕಂಡು ಬಣ್ಣಕ್ಕಿದ್ದು ಹೊಳಪು ಇಲ್ಲದೇ ಸಾಕಷ್ಟು ಸಂಕುಚಿತವಾಗಿರುವ ಒಣದ್ರಾಕ್ಷಿ ಉತ್ತಮ. ಇವು ಅತಿ ಗಟ್ಟಿಯಾಗಿಯೂ ಇರಬಾರದು, ತೀರಾ ಮೃದುವಾಗಿಯೂ ಇರಬಾರದು. ಅಷ್ಟೇ ಅಲ್ಲ, ಇದರಲ್ಲಿ ಮಣ್ಣು, ಮರಳು, ಧೂಳು ಮೊದಲಾದವು ಇಲ್ಲವೆಂದೂ ಖಚಿತಪಡಿಸಿಕೊಳ್ಳಿ.
ತಯಾರಿಸುವ ವಿಧಾನ
ಮೊದಲಿಗೆ ಒಣದ್ರಾಕ್ಷಿಯನ್ನು ಚೆನ್ನಾಗಿ ತೊಳೆದು ನೀರು ಬಸಿದು ಬದಿಯಲ್ಲಿಡಿ
ತಯಾರಿಸುವ ವಿಧಾನ
ಒಂದು ಚಿಕ್ಕ ಪಾತ್ರೆಯಲ್ಲಿ ನೀರನ್ನು ಹಾಕಿ ಬಿಸಿಮಾಡಿ. ನೀರು ಕುದಿಯಲು ಪ್ರಾರಂಭವಾಗುತ್ತಿದ್ದಂತೆಯೇ ಒಣದ್ರಾಕ್ಷಿಯನ್ನು ಹಾಕಿ ಉರಿ ಚಿಕ್ಕದಾಗಿಸಿ.
ಇಪ್ಪತ್ತು ನಿಮಿಷ ಕುದಿಸಿ....
ಈ ನೀರನ್ನು ಸುಮಾರು ಇಪ್ಪತ್ತು ನಿಮಿಷ ಕುದಿಯಲು ಬಿಡಿ. ಬಳಿಕ ಉರಿ ಆರಿಸಿ ಇಡಿಯ ರಾತ್ರಿ ಹಾಗೇ ಬಿಡಿ.
ಮರುದಿನ ಬೆಳಿಗ್ಗೆ...
ಮರುದಿನ ಬೆಳಿಗ್ಗೆ ಈ ನೀರನ್ನು ಸೋಸಿ ಲೋಟದಲ್ಲಿ ಸಂಗ್ರಹಿಸಿ. ಈ ನೀರನ್ನು ಮತ್ತೊಮ್ಮೆ ಉಗುರುಬೆಚ್ಚಗಾಗುವವರೆಗೆ ಬಿಸಿಮಾಡಿ.
ಖಾಲಿ ಹೊಟ್ಟೆಯಲ್ಲಿ ಸೇವಿಸಿ
ಮಗೆ ಇಷ್ಟವಾಗುವಷ್ಟು ಬಿಸಿಯಾಗಿ ಅಥವಾ ಉಗುರುಬೆಚ್ಚನೆ ಇರುವಂತೆಯೇ ಬೆಳಗ್ಗಿನ ಪ್ರಥಮ ಆಹಾರವಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿ.
ಸ್ವಲ್ಪ ಹೊತ್ತು ಏನೂ ಸೇವಿಸಬೇಡಿ....
ಬಳಿಕ ಸುಮಾರು ಮೂವತ್ತರಿಂದ ಮೂವತ್ತೈದು ನಿಮಿಷಗಳ ಕಾಲ ಏನನ್ನೂ ಸೇವಿಸಬೇಡಿ. ಬಳಿಕ ನಿಮ್ಮ ನಿತ್ಯದ ಉಪಾಹಾರ ಸೇವಿಸಿ.
ಎರಡು ತಿಂಗಳ ಬಳಿಕ....
ಈ ವಿಧಾನವನ್ನು ಕೆಲವಾರು ದಿನಗಳಾದರೂ ಸತತವಾಗಿ ಮಾಡಬೇಕು. ಕನಿಷ್ಠ ನಾಲ್ಕು ದಿನಗಳಾದರೂ ಸರಿ. ಸುಮಾರು ಎರಡು ತಿಂಗಳ ಬಳಿಕ ನಿಮ್ಮ ಆರೋಗ್ಯದಲ್ಲಿ, ವಿಶೇಷವಾಗಿ ಯಕೃತ್ಗಳಲ್ಲಿ ಉತ್ತಮ ಪ್ರಗತಿಯಾಗಿರುವುದನ್ನು ಕಾಣಬಹುದು.
ಸೂಚನೆ:
*ಯಾವುದಕ್ಕೂ ಈ ಮನೆಮದ್ದನ್ನು ಪ್ರಯತ್ನಿಸುವ ಮೊದಲು ನಿಮ್ಮ ಫ್ಯಾಮಿಲಿ ವೈದ್ಯರ ಸಲಹೆ ಪಡೆದುಕೊಳ್ಳಿ
*ಸಾಧ್ಯವಾದಷ್ಟು ನೈಸರ್ಗಿಕ ವಿಧಾನದಲ್ಲಿ ಬೆಳೆದ, ರಾಸಾಯನಿಕಗಳು ಇಲ್ಲದ ದ್ರಾಕ್ಷಿಯನ್ನೇ ಕೊಳ್ಳಿ. ಒಂದು ವೇಳೆ ಸಾವಯವ ವಿಧಾನದಲ್ಲಿ ಬೆಳೆದಿದ್ದರೆ ಇನ್ನೂ ಉತ್ತಮ.