Just In
- 4 min ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- 14 min ago ಗುರು ಸಂಚಾರ: ಮೇ 1ರಿಂದ 3ನೇ ಸ್ಥಾನದಲ್ಲಿರುವ ಗುರು ಮೀನ ರಾಶಿಯವರಿಗೆ ಅದೃಷ್ಟವೇ?
- 12 hrs ago ಗುರು ಸಂಚಾರದಿಂದ ಕುಂಭ ರಾಶಿಯವರ ಆರ್ಥಿಕ ಬದುಕು ಸುಧಾರಿಸಲಿದೆಯೇ?
- 13 hrs ago ಮೇ 1ರಿಂದ ಗುರು ಮಕರ ರಾಶಿಯಲ್ಲಿ ಪಂಚಮ ಸ್ಥಾನದಲ್ಲಿ ಇರುವುದರಿಂದ ಈ ರೀತಿಯೆಲ್ಲಾ ಪ್ರಯೋಜನಗಳಿವೆ
Don't Miss
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಲಿಗೆ ಜೀರಿಗೆ-ಕರಿಮೆಣಸಿನ ಪುಡಿ ಸೇರಿಸಿ ಕುಡಿದು ನೋಡಿ...
ರೋಗ ಬಂದ ಬಳಿಕ ಮಾತ್ರೆ ತೆಗೆದುಕೊಳ್ಳುವ ಬದಲು ರೋಗ ಬರದಂತೆ ನೋಡಿಕೊಳ್ಳುವುದೇ ಜಾಣತನ ಎಂದು ವೈದ್ಯರು ಹಲವಾರು ವರ್ಷಗಳಿಂದ ಹೇಳುತ್ತಾ ಬಂದಿದ್ದರೂ ಹೆಚ್ಚಿನವರು ಇದನ್ನು ಅಲಕ್ಷಿಸುತ್ತಿದ್ದರು. ಆದರೆ ಇಂದಿನ ಜನತೆ ಈ ಬಗ್ಗೆ ಹೆಚ್ಚು ಜಾಗರೂಕರಾಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಹೆಚ್ಚಿನ ಒಲವು ತೋರುತ್ತಿರುವುದು ಹಳ್ಳಿಗಳಿಂದ ನಗರದಲ್ಲಿ ಕಂಡುಬರುತ್ತಿದೆ.
ವಿಶೇಷವಾಗಿ ಇಂದಿನ ದಿನಗಳಲ್ಲಿ ವೈದ್ಯಕೀಯ ಚಿಕಿತ್ಸಾ ವೆಚ್ಚ ಮನೆ ಕಟ್ಟುವಷ್ಟೇ ಹೆಚ್ಚು ದುಬಾರಿಯಾಗುತ್ತಾ ಹೋಗುತ್ತಿರುವುದನ್ನು ಕಂಡು ಈ ಕ್ರಮ ಅನಿವಾರ್ಯವೂ ಆಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಕೆಲವಾರು ಆರೋಗ್ಯಕರ ಪೇಯಗಳಿವೆ, ಇವನ್ನು ನಿತ್ಯವೂ ಸೇವಿಸುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ಇದರಿಂದ ಹಲವು ರೋಗಗಳು ಆವರಿಸುವ ಸಾಧ್ಯತೆ ಅಪಾರವಾಗಿ ಕಡಿಮೆಯಾಗುತ್ತದೆ.
ಇಂತಹ ಒಂದು ಪ್ರಬಲ ಪೇಯವನ್ನು ಸುಲಭವಾಗಿ, ಮನೆಯಲ್ಲಿಯೇ ತಯಾರಿಸಿಕೊಳ್ಳುವ ವಿಧಾನವನ್ನು ಕೆಳಗೆ ನೀಡಲಾಗಿದೆ. ಇದಕ್ಕೆ ಹೆಚ್ಚು ಪರಿಕರಗಳೇನೂ ಅಗತ್ಯವಿಲ್ಲ. ಕೊಂಚ ಹಾಲು, ಜೀರಿಗೆ ಮತ್ತು ಕಾಳುಮೆಣಸಿನ ಪುಡಿ ಇದ್ದರೆ ಸಾಕು. ಈ ಆರೋಗ್ಯಕರ ಪೇಯ ತಯಾರಿಸುವ ವಿಧಾನ: ರೈತರ ಕಪ್ಪು ಬಂಗಾರ, ಕರಿಮೆಣಸು ಕಾಳಿನ ಪವರ್...
ಅಗತ್ಯವಿರುವ
ಸಾಧನಗಳು:
*ಹಾಲು
-
1
ಕಪ್
*ಜೀರಿಗೆಪುಡಿ
-
1
ಚಿಕ್ಕ
ಚಮಚ
*ಕಾಳುಮೆಣಸಿನ
ಪುಡಿ
-
½
ಚಿಕ್ಕ
ಚಮಚ
(ಇವೆರಡರ
ಕಾಳುಗಳನ್ನು
ಮಿಕ್ಸಿಯಲ್ಲಿ
ಪುಡಿಮಾಡಿಕೊಂಡರೆ
ಇನ್ನೂ
ಉತ್ತಮ)
ಮನೆಯಲ್ಲಿಯೇ ತಯಾರಿಸಬಹುದಾದ ಈ ಪೇಯದಲ್ಲಿ ಹಲವು ವಿಟಮಿನ್ನುಗಳು ಮತ್ತು ಖನಿಜಗಳಿದ್ದು ನಮ್ಮ ದೇಹದ ಪ್ರತಿ ಜೀವಕೋಶಕ್ಕೂ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚುವ ಮೂಲಕ ದೇಹವನ್ನು ಪ್ರವೇಶಿಸುವ ವಿವಿಧ ರೋಗಾಣುಗಳನ್ನು ಕೊಂದು ದೇಹವನ್ನು ರಕ್ಷಿಸುತ್ತದೆ. ಈ ಪೇಯದ ಸೇವನೆಯಿಂದ ಸಾಮಾನ್ಯ ತೊಂದರೆಗಳಾದ ಕೆಮ್ಮು, ಶೀತ, ವೈರಲ್ ಜ್ವರ, ಅಜೀರ್ಣ ಮೊದಲಾದವುಗಳು ಸುಲಭವಾಗಿ ಗುಣವಾಗುತ್ತವೆ. ಜೀರಿಗೆ: ಸೌಂದರ್ಯದ ಸರ್ವ ಸಮಸ್ಯೆಗೆ ಒಂದೇ ಪರಿಹಾರ
ತಯಾರಿಕಾ
ವಿಧಾನ:
*ಒಂದು
ಕಪ್
ಹಾಲನ್ನು
ಒಂದು
ಚಿಕ್ಕ
ಪಾತ್ರೆಯಲ್ಲಿ
ಕುದಿಸಿ
*ಈಗ
ಎರಡೂ
ಪುಡಿಗಳನ್ನು
ಹಾಲಿಗೆ
ಬೆರೆಸಿ
ಚೆನ್ನಾಗಿ
ಕಲಕಿ
ಮಿಶ್ರಣ
ಮಾಡಿ.
*ಈ
ಹಾಲನ್ನು
ಪ್ರತಿ
ರಾತ್ರಿ
ಮಲಗುವ
ಮುನ್ನ
ದಿನದ
ಅಂತಿಮ
ಆಹಾರವಾಗಿ
ಸೇವಿಸಿ
ಕೊಂಚವೇ
ನಡೆದಾಡಿ
ಬಳಿಕ
ಮಲಗಿ.