Just In
- 5 hrs ago ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ನಲ್ಲಿ ಯಾವಾಗ ಸಂಭವಿಸಲಿದೆ? ಇದರ ಸೂತಕ ಭಾರತಕ್ಕಿದೆಯೇ?
- 6 hrs ago ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- 7 hrs ago ದಿನ ಭವಿಷ್ಯ ಮಾರ್ಚ್ 28: ಗುರುವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 8 hrs ago ಶುಕ್ರ ಮೀನ ರಾಶಿಗೆ ಸಂಚರಿಸಿದಾಗ ಈ 5 ರಾಶಿಗಳ ಮೇಲೆ ಬೀರಲಿದೆ ಒಳ್ಳೆಯ ಪ್ರಭಾವ
Don't Miss
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Movies ಪುಷ್ಪ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಕಿರುತೆರೆ ನಟಿ ಅಮೂಲ್ಯ ಬೋಲ್ಡ್ ಫೋಟೋಶೂಟ್ ಹೇಗಿದೆ ನೋಡಿ!
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಳೆಹಣ್ಣಿನ ಸಿಪ್ಪೆ ಎಸೆಯಬೇಡಿ! ಇದರಿಂದ ಸಾಕಷ್ಟು ಪ್ರಯೋಜನಗಳಿವೆ...
ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುವುದು ಸಾಮಾನ್ಯ ಸಂಗತಿಯಾಗಿದೆ.ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರೆಯಾ ಎನ್ನುವ ಪ್ರಶ್ನೆ ಮನಸ್ಸಿನಲ್ಲಿ ಮೂಡಬಹುದು. ಆದರೆ ಬಾಳೆಹಣ್ಣಿನ ಸಿಪ್ಪೆಯಲ್ಲೂ ಪೋಷಕಾಂಶಗಳಿವೆ....
ಬಾಳೆಹಣ್ಣಿನ ಸಿಪ್ಪೆಯನ್ನು ಸಹ ಬಳಸಿಕೊಳ್ಳಬಹುದಾ? ಏನ್ರೀ, ತಿಂದು ಕಸದ ಬುಟ್ಟಿಗೆ ಎಸೆಯುವ ಸಿಪ್ಪೆಯಲ್ಲಿಯು ಸಹ ರಸ ಮಾಡಬಹುದು ಎಂದು ಹೇಳುತ್ತೀರೇನು? ಕೇಳದಿಕ್ಕೆ ತುಂಬಾ ವಿಲಕ್ಷಣವಾಗಿದೆ ಎಂಬ ಅನಿಸಿಕೆ ನಿಮ್ಮಿಂದ ವ್ಯಕ್ತವಾಗಬಹುದು. ಆದರೆ ಒಮ್ಮೆ ಯೋಚಿಸಿ, ಎಂತಹ ಒಂದು ಗೂಡಂಗಡಿಯಲ್ಲೂ ಸಹ ದೊರೆಯುವ, ಐದಡಿ ಜಾಗ ದೊರೆತರೆ ಬೆಳೆಯಬಹುದಾದ ಹಣ್ಣು ಅದೊಂದೆ!. ಎಲ್ಲಾ ಕಡೆಯಲ್ಲೂ ಸಿಗುತ್ತದೆ. ದಿನಕ್ಕೆರಡು ಬಾಳೆಹಣ್ಣು ಸೇವಿಸಿ, ವೈದ್ಯರಿಂದ ದೂರವಿರಿ!
ಎಲ್ಲರಿಗೂ ಕೈಗೆಟಕುವ ಬೆಲೆಯಲ್ಲಿ ಸಿಗುವ ಕೆಲವೇ ಕೆಲವು ಹಣ್ಣುಗಳಲ್ಲಿ ಇದು ಅಗ್ರ ಸ್ಥಾನದಲ್ಲಿದೆ. ಇದನ್ನು ತಿನ್ನುವುದರ ಜೊತೆಗೆ ಕಸಕ್ಕೆ ಎಸೆಯುವ ಅದರ ಸಿಪ್ಪೆಯಲ್ಲೂ ಸಹ ಪ್ರಯೋಜನಗಳನ್ನು ಪಡೆಯಬಹುದು. ಬಾಳೆ ಹಣ್ಣಿನ ತಿರುಳಿನಲ್ಲಿ ಪೋಷಕಾಂಶಗಳು ಮತ್ತು ಕಾರ್ಬೋಹೈಡ್ರೇಟ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಬಾಳೆಹಣ್ಣು: ಆರೋಗ್ಯಕ್ಕೂ ಸೈ-ಸೌಂದರ್ಯಕ್ಕೂ ಜೈ!
ಈ ತಿರುಳಿನಲ್ಲಿ ವಿಟಮಿನ್ ಬಿ-6, ಬಿ- 12, ಮ್ಯಗ್ನೀಶಿಯಂ ಮತ್ತು ಪೊಟಾಶಿಯಂಗಳು ಅಧಿಕವಾಗಿರುತ್ತದೆ. ಅದರಲ್ಲೂ ಬಾಳೆಹಣ್ಣಿನ ತಿರುಳು ಕಪ್ಪು ಬಣ್ಣಕ್ಕೆ ತಿರುಗಿದಾಗ ಅದರಲ್ಲಿ ಸಕ್ಕರೆಯ ಪ್ರಮಾಣ ಅಧಿಕವಾಗಿರುತ್ತದೆ. ಹಾಗಾದರೆ ಬನ್ನಿ ಈ ಬಾಳೆ ಹಣ್ಣಿನ ಸಿಪ್ಪೆಯನ್ನು ಏನೆಲ್ಲಾ ಸದುಪಯೋಗಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣಾ..
ಹಲ್ಲು ಬಿಳಿಯಾಗಿಸುವುದು
ಪ್ರತಿದಿನ ಒಂದು ನಿಮಿಷಗಳ ಕಾಲ ಬಾಳೆಹಣ್ಣಿನ ಸಿಪ್ಪೆಯನ್ನು ನಿಮ್ಮ ಹಲ್ಲುಗಳ ಮೇಲೆ ಹಾಕಿ ಚೆನ್ನಾಗಿ ಉಜ್ಜಿ. ಇದರಿಂದ ನಿಮ್ಮ ಹಲ್ಲುಗಳಿಗೆ ಫಳ ಫಳ ಎನ್ನುವ ಹೊಳಪು ದೊರೆಯುತ್ತದೆ. ಇದನ್ನು ಮಾಡಲಿಲ್ಲವಾದಲ್ಲಿ ನೀವು ನಿಮ್ಮ ದಂತ ವೈದ್ಯರಿಗೆ ಸಾವಿರಾರು ರೂಪಾಯಿಯನ್ನು ವ್ಯಯಿಸಬೇಕಾಗುತ್ತದೆ.
ಮೊಡವೆಗಳಿಗೆ ರಾಮಬಾಣ
ಮೊಡವೆಗಳು ಉಂಟಾದಾಗ ಅದರ ಮೇಲೆ ಬಾಳೆಹಣ್ಣಿನ ಸಿಪ್ಪೆಯನ್ನು ಹಚ್ಚಿ. ಅದನ್ನು ಹಾಗೆಯೇ 30 ನಿಮಿಷ ಬಿಡಿ. ಇದರಿಂದ ನೋವು ಕಡಿಮೆಯಾಗುತ್ತದೆ. ಬಾಳೆಹಣ್ಣಿನ ಸಿಪ್ಪೆಯ ಜೊತೆಗೆ ಸಸ್ಯಜನ್ಯ ಎಣ್ಣೆಯನ್ನು ಬೆರೆಸಿ ಹಚ್ಚಿದರೆ ನೋವು ಮತ್ತಷ್ಟು ಕಡಿಮೆಯಾಗುತ್ತದೆ.
ಚರ್ಮದ ಗಂಟು ನಿವಾರಣೆ
ನಿಮಗೆ ಚರ್ಮದ ಗಂಟಿನಿಂದ ಯಾವುದೇ ಸಮಸ್ಯೆಯಾಗುತ್ತಾ ಇದ್ದರೆ ಬಾಳೆಹಣ್ಣಿನ ಸಿಪ್ಪೆಯಿಂದ ಇದನ್ನು ನಿವಾರಣೆ ಮಾಡಬಹುದು. ಭಾದಿತ ಪ್ರದೇಶಕ್ಕೆ ಬಾಳೆಹಣ್ಣಿನ ಸಿಪ್ಪೆಯನ್ನು ಉಜ್ಜಿಕೊಳ್ಳಿ ಮತ್ತು ಇದು ಬೇಗನೆ ನಿವಾರಣೆಯಾಗುವುದು.
ನೋಯುವ ಮಚ್ಚೆಗಳಿಗೆ
ಬಾಳೆಹಣ್ಣಿನಲ್ಲಿ ನೋವುನಿವಾರಕ ಗುಣಗಳು ಇವೆ. ಬಾಳೆಹಣ್ಣಿನ ಸಿಪ್ಪೆಯನ್ನು ನೋಯುತ್ತಿರುವ ಮಚ್ಚೆಗೆ ಉಜ್ಜಿದರೆ ನೋವು ಕಡಿಮೆಯಾಗುವುದು.
ತೂಕ ಕಳೆದುಕೊಳ್ಳಲು
ಇದನ್ನು ಓದಿ ಸ್ವಲ್ಪ ಅಚ್ಚರಿಯಾಗಬಹುದು. ಆದರೆ ಬಾಳೆಹಣ್ಣಿನ ಸಿಪ್ಪೆಯನ್ನು ತೂಕ ಕಳೆದುಕೊಳ್ಳಲು ಬಳಸಬಹುದು. ಪ್ರತೀ ದಿನ ಎರಡು ಬಾಳೆಹಣ್ಣುಗಳನ್ನು ಮಧ್ಯಾಹ್ನದ ಊಟದ ವೇಳೆ ಸೇವಿಸಿ. ಇದರ ಸಿಪ್ಪೆಗಳನ್ನು ಪ್ರತ್ಯೇಕವಾಗಿ ಸೇವಿಸಿ. ರಾತ್ರಿ ವೇಳೆ ಊಟ ಮಾಡಬೇಡಿ. ಯಾಕೆಂದರೆ ಬಾಳೆಹಣ್ಣಿನ ಸಿಪ್ಪೆಯು ಸರಿಯಾಗಿ ಕರಗಬೇಕು. ಅಧ್ಯಯನಗಳ ಪ್ರಕಾರ ಈ ಆಹಾರ ಕ್ರಮದಿಂದ ಸುಮಾರು 2.5 ಕೆಜಿಯಷ್ಟು ತೂಕ ಕಳೆದುಕೊಳ್ಳಬಹುದು.
ಕೀಟಗಳ ಕಡಿತಕ್ಕೆ
ಯಾವುದೇ ಕೀಟಗಳು ಕಚ್ಚಿದರೆ ಆ ಜಾಗಕ್ಕೆ ಬಾಳೆಹಣ್ಣಿನ ಸಿಪ್ಪೆಯನ್ನು ಉಜ್ಜಿಕೊಂಡರೆ ನೋವು ನಿವಾರಣೆಯಾಗುವುದು ಮತ್ತು ಭಾದಿತ ಪ್ರದೇಶವು ಬಾತುಕೊಳ್ಳುವುದು ಕಡಿಮೆಯಾಗುವುದು.
ಮುಖದ ಸುಕ್ಕು ನಿವಾರಣೆಯಾಗಲು...
ಬಾಳೆಹಣ್ಣಿನ ಸಿಪ್ಪೆಯು ಚರ್ಮಕ್ಕೆ ತೇವಾಂಶವನ್ನು ಒದಗಿಸುತ್ತವೆ. ಬಾಳೆಹಣ್ಣಿನ ಸಿಪ್ಪೆಗೆ ಸ್ವಲ್ಪ ಮೊಟ್ಟೆಯ ಲೋಳೆಯನ್ನು ಬೆರೆಸಿ, ಇದನ್ನು ಮುಖಕ್ಕೆ ಹಚ್ಚಿ ಐದು ನಿಮಿಷ ಬಿಡಿ. ನಂತರ ಮುಖ ತೊಳೆಯಿರಿ. ಇದರಿಂದ ಸುಕ್ಕುನಿವಾರಣೆಯಾಗುತ್ತದೆ.