Just In
- 30 min ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 1 hr ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 1 hr ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
- 3 hrs ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
Don't Miss
- Movies ಇದಪ್ಪ ವರಸೆ ಅಂದರೆ ; ನಿಜ ಜೀವನದಲ್ಲಿ ಕಬೀರ್ ಸಿಂಗ್ ಆಗಿ ಬದಲಾದ ಶಾಹಿದ್ ಕಪೂರ್..!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೈವಿಕ ಶಕ್ತಿ ಹೊಂದಿರುವ ಭಾರತದ ಆರು ವೃಕ್ಷಗಳು
ಹಲವಾರು ಸಂಸ್ಕೃತಿ, ಧರ್ಮಗಳ ನಾಡಾದ ಭಾರತದಲ್ಲಿ ವೃಕ್ಷಗಳಿಗೂ ಪೂಜನೀಯ ಸ್ಥಾನವಿದೆ. ದೈವಿಕ ಶಕ್ತಿಗೆ ಮನ್ನಣೆ ನೀಡುವ ಈ ನಾಡಿನ ಬಗ್ಗೆ ವಿಶ್ವದ ಜನತೆಗೆ ಕುತೂಹಲವಿದೆ. ಭಾರತದಾದ್ಯಂತ ಆಚರಿಸಿಕೊಂಡು ಬರುತ್ತಿರುವ ವಿವಿಧ ಧರ್ಮಗಳ, ವಿವಿಧ ದೇವತೆಗಳ ಬಗ್ಗೆ ಭಕ್ತಿ, ಆಚರಣೆ ಹಾಗೂ ನಂಬಿಕೆಗಳ ಬಗ್ಗೆ ಸಾವಿರಾರು ಕುರುಹುಗಳು ಇಂದಿಗೂ ಮಂದಿರ ಹಾಗೂ ವಾಸ್ತುಶಿಲ್ಪಗಳಲ್ಲಿ ಕಂಡುಬರುತ್ತವೆ.
ಕೆಲವು
ಆಯಾ
ರಾಜ್ಯ
ಹಾಗೂ
ಪ್ರಾಂತಗಳಿಗೆ
ಸೀಮಿತವಾಗಿದ್ದರೆ
ಕೆಲವು
ದೇಶದಾದ್ಯಂತ
ಸಮಾನವಾಗಿವೆ.
ಪೂಜನೀಯ
ಸ್ಥಾನ
ಪಡೆದಿರುವ
ಹಲವು
ವೃಕ್ಷಗಳು
ನಾಡಿನಾದ್ಯಂತ
ಜನರಿಗೆ
ಪವಿತ್ರವಾಗಿವೆ.
'ಕಲ್ಪವೃಕ್ಷ'ಎಂದು
ನಂಬಲಾಗುವ
ಈ
ವೃಕ್ಷಗಳು
ಕೇವಲ
ಧಾರ್ಮಿಕ
ಮಹತ್ವ
ಮಾತ್ರವಲ್ಲದೇ
ತಮ್ಮ
ರೋಗಪರಿಹಾರಕ
ಗುಣಗಳಿಂದಲೂ
ಜನರಿಗೆ
ಆಪ್ತವಾಗಿವೆ.
ಈ
ಪಟ್ಟಿಯಲ್ಲಿ
ಪ್ರಮುಖವಾಗಿರುವ
ಆರು
ವೃಕ್ಷಗಳನ್ನು
ಇಲ್ಲಿ
ಉಲ್ಲೇಖಿಸಲಾಗಿದೆ.
ನೀವರಿಯದ ಸಾವಿನ ಕರಾಳ ಲಕ್ಷಣಗಳು!
ಬಿಲ್ವಪತ್ರೆ:
ಶಿವನಿಗೆ ಅತ್ಯಂತ ಪ್ರಿಯವಾದ ಈ ವೃಕ್ಷದ ಎಲೆಯನ್ನು ಅರ್ಪಿಸುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗಬಹುದು ಎಂಬ ನಂಬಿಕೆಯಿದೆ. ಈ ಮರದ ಎಲೆಯಲ್ಲಿ ಮೂರು ದಳಗಳಿವೆ. ಸೃಷ್ಟಿ, ಸಂರಕ್ಷಣೆ ಹಾಗೂ ವಿನಾಶವನ್ನು ಈ ದಳಗಳು ಪ್ರತಿನಿಧಿಸುತ್ತವೆ ಎಂದು ನಂಬಲಾಗಿದೆ.
ಬಿದಿರು:
ಶ್ರೀಕೃಷ್ಣನ ಕೊಳಲು ಬಿದಿರಿನಿಂದ ತಯಾರಿಸಿದ್ದುದರಿಂದ ಬಿದಿರು ಮೆಳೆಯನ್ನು ಕೃಷ್ಣ ಪರಮಾತ್ಮನ ನೆಚ್ಚಿನ ವೃಕ್ಷವೆಂದು ಪರಿಗಣಿಸಲಾಗುತ್ತದೆ.
ಶ್ರೀಗಂಧದ ಮರ:
ಸುವಾಸನೆ ಹಾಗೂ ಸೌಂದರ್ಯವರ್ಧಕವಾಗಿರುವ ಶ್ರೀಗಂಧದ ಮರವನ್ನು ಪಾರ್ವತಿಯ ನೆಚ್ಚಿನ ಮರವೆಂದು ಹೇಳಲಾಗಿದೆ. ಪಾರ್ವತಿ ಶ್ರೀಗಂಧದ ಕೊರಡನ್ನು ತನ್ನ ಬೆವರಿನೊಂದಿಗೆ ತೇದ ಬಳಿಕ ಪ್ರಾಪ್ತವಾದ ಅರೆಘನರೂಪದ ದ್ರಾವಣದಿಂದ ಗಣೇಶನನ್ನು ಸೃಷ್ಟಿಸಿದಳು ಎನ್ನಲಾಗುತ್ತದೆ. ಈ ನಂಬಿಕೆಯಿಂದ ಇಂದಿಗೂ ಶ್ರೀಗಂಧದ ದ್ರಾವಣವನ್ನು ಹಲವು ದೇವದೇವತೆಗಳ ಪೂಜೆಯಲ್ಲಿ ಬಳಸಲಾಗುತ್ತಿದೆ.
ಭಾಂಗ್ ಮರ:
ಶಿವಾಲಯಗಳಿರುವಲ್ಲಿ ಸಾಧುಗಳು ಭಾಂಗ್ ಮರದ ಎಲೆಗಳಿಂದ ಹೊಗೆಸೇವನೆ ಮಾಡುತ್ತಿರುವುದನ್ನು ನೋಡಬಹುದು. ಈ ಮರದ ಎಲೆಗಳು ಅಮಲು ಬರಿಸಿದರೂ ಆವರಣದಲ್ಲಿ ಈ ಮರವಿರುವ ಮನೆಯಲ್ಲಿ ಸದಾ ಸಮೃದ್ಧಿ ಹಾಗೂ ಸಂಪತ್ತು ತುಳುಕುತ್ತಿರುತ್ತದೆ ಎಂದು ನಂಬಲಾಗುತ್ತದೆ. ಮಹಾಶಿವರಾತ್ರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಮರದ ಎಲೆಗಳನ್ನು ಶಿವನಿಗೆ ಅರ್ಪಿಸಲಾಗುತ್ತದೆ. ಅಲ್ಲದೇ ಪ್ರಸಾದವನ್ನು ತಯಾರಿಸಲೂ ಈ ಎಲೆಗಳನ್ನು ಬಳಸಲಾಗುತ್ತದೆ.
ಕಲ್ಪವೃಕ್ಷ ಅಥವಾ ತೆಂಗಿನಮರ:
ಕರಾವಳಿಯಲ್ಲಿ ಸಮೃದ್ಧವಾಗಿರುವ ತೆಂಗಿನಮರವನ್ನು ಕಡಿಯುವುದು ಅಪಶಕುನ ಎಂದು ಭಾರತದೆಲ್ಲೆಡೆ ನಂಬಲಾಗುತ್ತದೆ. ಈ ವೃಕ್ಷ ಮನೆಯ ಆವರಣದಲ್ಲಿರುವುದು ಶಾಂತಿ ಹಾಗೂ ಸಮೃದ್ಧಿಯ ಸಂಕೇತ ಎಂದು ನಂಬಲಾಗುತ್ತದೆ. ಶಿವನ ಪ್ರತಿನಿಧಿ ಎಂದು ನಂಬಲಾಗುವ ಈ ವೃಕ್ಷದ ಪ್ರತಿಯೊಂದೂ ಭಾಗಗಳು ಹಲವಾರು ಉಪಯೋಗಕ್ಕೆ ಬರುತ್ತವೆ. ತೆಂಗಿನ ಕಾಯಿ ಇಲ್ಲದೆ ಯಾವ ಪೂಜೆಯೂ ನಡೆಯದು. ಮರವಿರುವೆಡೆ ಮನೆ ಕಟ್ಟಿಸಬೇಕಾದರೆ ಮರವನ್ನು ಉರುಳಿಸದೇ ಮರವನ್ನು ಮನೆಯೊಳಗೇ ಬರುವಂತೆ ಕಟ್ಟಿಸುವುದು ಭಾರತೀಯರು ಈ ವೃಕ್ಷದ ಬಗ್ಗೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ.