Just In
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 2 hrs ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 4 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 4 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
Don't Miss
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ರಾಮಾಣಿಕ ಜನರ, ರಾಶಿ ಭವಿಷ್ಯದಲ್ಲೂ ಮೋಸದ ಗುಣವಿದೆ!
ಓರ್ವ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಆತನ ಜನ್ಮರಾಶಿ ಪ್ರಮುಖ ಪಾತ್ರ ವಹಿಸುತ್ತದೆ. ಜ್ಯೋತಿಷ್ಯಾಸ್ತ್ರದ ಪ್ರಕಾರ ವ್ಯಕ್ತಿಯ ಹಲವು ಗುಣಗಳು ಮತ್ತು ಅವಗುಣಗಳನ್ನು ಆತನ ರಾಶಿಯನ್ನು ಅರಿಯುವ ಮೂಲಕ ಸಾಧ್ಯವಾಗುತ್ತದೆ. ಆದರೆ ಹೆಚ್ಚಿನ ಜನರು ಜನ್ಮರಾಶಿಯೊಂದೇ ಇದಕ್ಕೆ ಕಾರಣವಲ್ಲ, ಇನ್ನೂ ಹಲವಾರು ಒಂದಕ್ಕೊಂದು ಬೆಸೆದುಕೊಂಡ ವಿಷಯಗಳೇ ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂಬ ಅಭಿಪ್ರಾಯ ಹೊಂದಿದ್ದಾರೆ. ಆದರೂ ವ್ಯಕ್ತಿತ್ವದ ಮೇಲೆ ರಾಶಿಯ ಪರಿಣಾಮವನ್ನು ಅಲ್ಲಗಳೆಯುವಂತಿಲ್ಲ. ಸೌರ ಚಿಹ್ನೆ ಆಧಾರದಲ್ಲಿ ನಿಮ್ಮ ಜೀವನ ಸಂಗಾತಿಯನ್ನು ಹುಡುಕಿ!
ಇಂದಿನ ಲೇಖನದಲ್ಲಿ ಅಪ್ರಾಮಾಣಿಕರಾಗಿರುವವ ರಾಶಿಫಲದ ಬಗ್ಗೆ ಅರಿಯೋಣ. ಅಪ್ರಾಮಾಣಿಕತೆ ಎಂದಿಗೂ ಥಟ್ಟನೇ ಕಾಣಿಸಲ್ಪಡುವ ಗುಣವಲ್ಲ. ಇದನ್ನು ಪರಿಶೀಲಿಸಲು ಮತ್ತು ಪ್ರಾಮಾಣಿಸಲು ಸೂಕ್ತ ಸಂದರ್ಭಗಳು ಬರಬೇಕಷ್ಟೇ. ಆದರೆ ಕೆಲವು ರಾಶಿಫಲದ ಜನರು ಅಪ್ರಾಮಾಣಿಕರಾಗಿದ್ದರೆ ಈ ಸ್ವಭಾವವನ್ನು ಅವರ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಕಂಡುಹಿಡಿಯಬಹುದು. ರಾಶಿ ಭವಿಷ್ಯ: ನಿಮ್ಮ ಅದೃಷ್ಟವನ್ನೇ ಖುಲಾಯಿಸುವ 'ಭವಿಷ್ಯವಾಣಿ'
ದಯವಿಟ್ಟು
ಗಮನಿಸಿ:
ಈ
ಲೇಖನವನ್ನು
ಯಾರ
ಕುರಿತಾಗಿಯೂ,
ಯಾರ
ಭಾವನೆಗಳಿಗೂ
ಧಕ್ಕೆ
ಉಂಟು
ಮಾಡುವ
ಯಾವುದೇ
ಉದ್ದೇಶದಿಂದ
ಬರೆಯಲಾಗಿಲ್ಲ.
ಜ್ಯೋತಿಷ್ಯಾಸ್ತ್ರ
ಅಪ್ರಾಮಾಣಿಕತೆ
ಬಗ್ಗೆ
ಏನು
ಹೇಳುತ್ತದೆ
ಎಂಬುದನ್ನು
ಮಾತ್ರ
ಇದ್ದುದನ್ನು
ಇದ್ದ
ಹಾಗೇ
ಹೇಳುವ
ಪ್ರಯತ್ನ.
ಒಂದು
ವೇಳೆ
ನಿಮ್ಮ
ಜನ್ಮರಾಶಿ
ಕೆಳಗೆ
ಸೂಚಿಸಿರುವ
ರಾಶಿಫಲದಲ್ಲಿದ್ದು
ಇದರ
ಮಾಹಿತಿಗಳು
ನಿಮ್ಮ
ಬಗ್ಗೆ
ಸತ್ಯವಾಗಿದ್ದರೆ
ನಮಗೆ
ಖಂಡಿತಾ
ತಿಳಿಸಿ.
ಬನ್ನಿ
ಕೆಳಗಿನ
ಸ್ಲೈಡ್
ಶೋ
ಮೂಲಕ
ಕೆಲವು
ಪ್ರಮುಖ
ರಾಶಿಗಳ
ಬಗ್ಗೆ
ಅರಿಯೋಣ..
ಮೇಷ
ಈ ರಾಶಿಯ ಜನರು ಕೊಂಚ ಸೋಮಾರಿಗಳಾಗಿದ್ದು ತಮ್ಮ ಕಾರ್ಯಗಳಿಗೆ ಎಲ್ಲಿಯವರೆಗೆ ಅಂತಿಮ ಕರೆ ಬರುವುದಿಲ್ಲವೋ ಅಲ್ಲಿಯವರೆಗೆ ಮುಂದೂಡುವ ಅಭ್ಯಾಸದವರಾಗಿರುತ್ತಾರೆ. ಸುಳ್ಳು ಹೇಳುವ ಸಂದರ್ಭ ಬಂದರೆ ಸಮಯಕ್ಕೊಂದು ಸುಳ್ಳು ಹೇಳಲು ಸಾಧ್ಯವಾದರೂ ಇದರ ಪರಿಣಾಮಗಳನ್ನು ಸಮರ್ಥಿಸಿಕೊಳ್ಳುವ ಚಾಕಚಕ್ಯತೆ ಇವರಿಗಿರುವುದಿಲ್ಲ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ
ಮೇಷ
ಆದ್ದರಿಂದ ಇನ್ನೊಂದು ಸುಳ್ಳು ಹೇಳಿ ಗೋಜಲಾಗಿಸಿ ಒಟ್ಟಾರೆ ತಮ್ಮ ಕೆಲಸವಾಗುವಂತೆ ನೋಡಿಕೊಳ್ಳುತ್ತಾರೆ. ಆದರೆ ತಮ್ಮ ಕೆಲವನ್ನು ಮಾತ್ರ ಅರ್ಧಂಬರ್ಧ ಮಾಡದೇ ಪೂರ್ಣಗೊಳಿಸುವ ಜಾಯಾಮಾನ ಇವರದ್ದು. ಪ್ರಾಮಾಣಿಕತೆಯ ವಿಷಯ ಬಂದರೆ ಇವರು ಅತ್ಯಂತ ಪ್ರಾಮಾಣಿಕರಾಗಿದ್ದು ಸದಾ ಸಹಾಯ ಮಾಡುವವರೂ ಆಗಿರುತ್ತಾರೆ.
ವೃಶ್ಚಿಕ
ಈ ರಾಶಿಯ ಜನರು ಅತಿ ತೀಕ್ಷ್ಣಮತಿಗಳಾಗಿದ್ದಾರೆ. ಇವರನ್ನು ಬೇರೆಯವರು ನಿಯಂತ್ರಿಸುವುದು ಇವರಿಗೆ ಇಷ್ಟವಿಲ್ಲ. ಬಲ ಮತ್ತು ಪ್ರಾಬಲ್ಯತೆಯನ್ನು ಹೊಂದಲು ಇಷ್ಟಪಡುವ ಇವರು ಇದಕ್ಕಾಗಿ ಯಾವ ಬಗೆಯಲ್ಲಿ ತಮ್ಮ ಮಾತುಗಳಲ್ಲಿ ಸುಳ್ಳುಗಳನ್ನು ಪೋಣಿಸುತ್ತಾರೆ ಎಂಬುದನ್ನು ಹೇಳಲು ಸಾಧ್ಯವೇ ಇಲ್ಲ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ
ವೃಶ್ಚಿಕ
ಈ ಸುಳ್ಳುಗಳ ಸರಮಾಲೆಯಲ್ಲಿ ಸಿಲುಕಿದವರು ಈ ಗೋಜಲನ್ನು ಅರ್ಥ ಮಾಡುವಷ್ಟರಲ್ಲಿ ಆಗಲೇ ಬಲೆಗೆ ಬಿದ್ದಾಗಿರುತ್ತದೆ. ಸುಳ್ಳು ಎಂದು ಗೊತ್ತಿರುವ ಜಾಹೀರಾತುಗಳನ್ನು ನೋಡಿ ನಾವು ಉತ್ಪನ್ನಗಳನ್ನು ಕೊಳ್ಳುವುದಿಲ್ಲವೇ ಹಾಗೇ. ಅಂತೆಯ ಇವರ ನಿರ್ಯಣಗಳು ಚಂಚಲವಾಗಿದ್ದು ಕ್ಷಣಕ್ಷಣಕ್ಕೆ ಬದಲಾಗುತ್ತಿರುತ್ತವೆ.
ಮಿಥುನ
ಈ ವರ್ಗದ ಜನರು ದ್ವಂದ್ವ ಪ್ರವೃತ್ತಿಯುಳ್ಳವರಾಗಿರುತ್ತಾರೆ. ಇದೇ ಇವರನ್ನು ಅತಿ ದೊಡ್ಡ ಸುಳ್ಳುಗಾರನಾಗಿಸಿದೆ. ಈ ಅಭ್ಯಾಸದಿಂದ ಇವರು ಸಂದರ್ಭಕ್ಕನುಸಾರವಾಗಿ ಸುಳ್ಳು ಹೇಳುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ. ಇತರ ರಾಶಿಗಳಿಗೆ ಹೋಲಿಸಿದರೆ ಸುಳ್ಳು ಹೇಳುವ ಪ್ರಮಾಣ ಇವರಲ್ಲಿ ಹೆಚ್ಚು.
ಕಟಕ
ಏಡಿಯ ಶರೀರ ಹೇಗೆ ಹೊರಗೆ ದೃಢವಾಗಿದ್ದು ಒಳಗಡೆಯಿಂದ ಮೆತ್ತರಿಗುತ್ತದೆಯೋ, ಅಂತೆಯೇ ಈ ರಾಶಿಯ ಜನರು ಇತರರು ತಿಳಿದಿರುವುದಕ್ಕಿಂತಲೂ ಹೆಚ್ಚು ಮೃದುವಾಗಿರುತ್ತಾರೆ. ಸ್ವಭಾವತಃ ಇವರು ಒಳ್ಳೆಯವರಾಗಿದ್ದು ಇತರರ ಏಳ್ಗೆಯಲ್ಲಿಯೇ ತಮ್ಮ ಏಳ್ಗೆಯನ್ನು ಕಾಣುತ್ತಾರೆ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ
ಕಟಕ
ಆದ್ದರಿಂದ ಕೇವಲ ಇತರರಿಗೆ ಒಳ್ಳೆಯದಾಗುವುದಿದ್ದರೆ ಮಾತ್ರ ಇವರು ಸುಳ್ಳು ಹೇಳುತ್ತಾರೆ. ಸಮಯ ಮತ್ತು ಸಂದರ್ಭ ನೋಡಿ ಇವರು ಸುಳ್ಳುಗಳನ್ನು ಹೇಳುತ್ತಾರಾದರೂ ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲದೇ ಕೇವಲ ಪರಿಸ್ಥಿತಿ ನಿಭಾಯಿಸುವುದಾಗಿರುತ್ತದೆ.
ಧನು
ಈ ರಾಶಿಯ ಜನರು ಸಾಮಾನ್ಯವಾಗಿ ಸಂತೋಷ ಸ್ವಭಾವದವರಾಗಿದ್ದು ಈ ಕ್ಷಣವನ್ನು ಈಗಲೇ ಅನುಭವಿಸುವ ಆತುರದಲ್ಲಿರುತ್ತಾರೆ. ಇವರಿಗೆ ಸಾಹಸವೆಂದರೆ ಅಚ್ಚುಮೆಚ್ಚಾಗಿದೆ. ತಮ್ಮ ಬೇಳೆ ಬೇಯಿಸಿಕೊಳ್ಳಲು ಸುಳ್ಳು ಹೇಳಬೇಕಾಗಿ ಬಂದಲ್ಲಿ ಯಾವ ಹಿಂಜರಿಕೆಯನ್ನೂ ತೋರದೇ ಸತ್ಯದ ತಲೆಯ ಮೇಲೆ ಹೊಡೆದಂತೆ ಹೇಳುವ ಮೂಲಕ ತಮ್ಮ ದಾರಿಯನ್ನು ಸುಗಮವಾಗಿಸಿಕೊಳ್ಳುತ್ತಾರೆ.
ಸಿಂಹ
ತಮ್ಮ ಗುರಿಯ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದಿರುವ ಇವರು ಧೈರ್ಯವಂತರೂ ನೇರ ನಡವಳಿಕೆಯ ಸ್ವಭಾವದವರೂ ಆಗಿರುತ್ತಾರೆ. ಸ್ಪರ್ಧೆಗೆ ಸದಾ ಸಿದ್ಧರಿರುವ ಇವರು ಸ್ಪರ್ಧೆಯಲ್ಲಿ ಗೆಲ್ಲಲು ಸತ್ಯದ ಭಂಡಾರ ಖಾಲಿಯಾದರೆ ಸುಳ್ಳುಗಳನ್ನು ಬಳಸಲು ಹಿಂಜರಿಯುವುದಿಲ್ಲ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ
ಸಿಂಹ
ಇತರರು ತಮ್ಮ ಜೀವನದಲ್ಲಿ ನಾಟಕವಾಡುವುದನ್ನು, ಸುಳ್ಳು ಹೇಳುವುದನ್ನು ಸಹಿಸದ ಇವರು ಆ ವ್ಯಕ್ತಿಗಳ ಸಂಗವನ್ನೇ ಬಿಟ್ಟುಬಿಡುತ್ತಾರೆ. ವ್ಯಂಗ್ಯವೆಂದರೆ ಇದೇ ಸುಳ್ಳುಗಳನ್ನು ಇವರೇ ಹೇಳಿ ಎದುರಿನವರು ತಮ್ಮೊಂದಿಗೆ ಸ್ನೇಹದಿಂದಿರಬೇಕೆಂದು ಬಯಸುತ್ತಾರೆ.