Just In
- 42 min ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 2 hrs ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 3 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- 4 hrs ago ಶನಿಯ ನಕ್ಷತ್ರ ಬದಲಾವಣೆ: ಅಕ್ಟೋಬವರೆಗೆ ಈ 3 ರಾಶಿಯವರು ಇದರ ಉತ್ತಮ ಫಲ ಪಡೆಯುವಿರಿ
Don't Miss
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Movies ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ
ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?