Just In
- 4 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 12 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 13 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 13 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
Don't Miss
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- News Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಧುಮೇಹಿಗಳ ಬಾಯಿ ರುಚಿ ಹೆಚ್ಚಿಸುವ ಸಾರು
ಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ತಮ್ಮ ಆಹಾರಕ್ರಮದ ಬಗ್ಗೆ ಗಮನ ಹರಿಸಬೇಕು. ಹಾಗಂತ ಪಥ್ಯ ಆಹಾರವನ್ನು ತಿನ್ನಬೇಕಾಗಿಲ್ಲ, ಬಾಯಿಗೆ ರುಚಿಕರವಾದ ಆಹಾರವನ್ನು ತಿನ್ನಬಹುದು. ಇಲ್ಲಿ ನಾವು ಮಧುಮೇಹಿಗಳೂ ತಿನ್ನಬಹುದಾದ ಬಟಾಣಿ-ಪನ್ನೀರ್ ಮಸಾಲದ ರೆಸಿಪಿ ನೀಡಿದ್ದೇವೆ.
ಈ ಅಡುಗೆ ಮಧುಮೇಹಿಗಳ ಬಾಯಿ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು.
ಬೇಕಾಗುವ
ಸಾಮಾಗ್ರಿಗಳು
ಪನ್ನೀರ್
100
ಗ್ರಾಂ
ಈರುಳ್ಳಿ2
ಬೆಳ್ಳುಳ್ಳಿ
ಎಸಳು
8
ಲವಂಗ
3
ಒಂದು
ಇಂಚಿನಷ್ಟು
ದೊಡ್ಡದಿರುವ
ಶುಂಠಿ
ಕೊತ್ತಂಬರಿ
ಪುಡಿ
1
ಚಮಚ
ಹಸಿ
ಮೆಣಸಿನಕಾಯಿ
1
ಜೀರಿಗೆ
1
ಚಮಚ
ಅರಿಶಿಣ
ಪುಡಿ
ಅರ್ಧ
ಚಮಚ
ಗರಂ
ಮಸಾಲ
ಅರ್ಧ
ಚಮಚ
ಟೊಮೆಟೊ
2
ಬಟಾಣಿ
1
ಕಪ್(ನೆನೆ
ಹಾಕಿದ್ದು)
ಕೊತ್ತಂಬರಿ
ಸೊಪ್ಪು
ಎಣ್ಣೆ
3
ಚಮಚ
1
ಕಪ್
ತೆಂಗಿನ
ತುರಿ
ರುಚಿಗೆ
ತಕ್ಕ
ಉಪ್ಪು
ತಯಾರಿಸುವ ವಿಧಾನ:
* ಪ್ಯಾನ್ ನಲ್ಲಿ 1 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಪನ್ನೀರ್ ಹಾಕಿ ಫ್ರೈ ಮಾಡಿ ಒಂದು ಬದಿಯಲ್ಲಿ ಇಡಿ.
* ನಂತರ ಅದೇ ಪ್ಯಾನ್ ಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಜೀರಿಗೆ ಹಾಕಿ, ಸ್ವಲ್ಪ ಕರಿಬೇವಿನ ಎಲೆ ಹಾಕಿ, ಹಸಿ ಮೆಣಸಿನಕಾಯಿ, ಜಜ್ಜಿದ ಶುಂಠಿ, ಬೆಳ್ಳುಳ್ಳಿ ಮತ್ತು ಲವಂಗ ಹಾಕಿ ನಂತರ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
* ನಂತರ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಫ್ರೈ ಮಾಡಿ, ನಂತರ ಬಟಾಣಿ ಹಾಕಿ 5 ನಿಮಿಷ ಫ್ರೈ ಮಾಡಿ, ಅದಕ್ಕೆ ಎಲ್ಲಾ ಮಸಾಲೆ ಸಾಮಾಗ್ರಿಗಳನ್ನು ಸೇರಿಸಿ, ರುಚಿಗೆ ತಕ್ಕ ಉಪ್ಪು ಸೇರಿಸಿ, ಮತ್ತೆ 2 ನಿಮಿಷ ಫ್ರೈ ಮಾಡಿ ಒಂದು ಕಪ್ ನೀರು ಹಾಕಿ ಬೇಯಿಸಿ.
* ತರಕಾರಿ ಬೆಂದ ನಂತರ ರುಬ್ಬಿದ ತೆಂಗಿನ ತುರಿ ಹಾಕಿ ಉಪ್ಪು ಸರಿಯಾಗಿದೆಯೇ ಎಂದು ನೋಡಿ ಮತ್ತೆ 5 ನಿಮಿಷ ಬೇಯಿಸಿ ನಂತರ ಫ್ರೈ ಮಾಡಿದ ಪನ್ನೀರ್ ಹಾಕಿ, ಕೊತ್ತಂಬರಿ ಸೊಪ್ಪು ಹಾಕಿ 2 ನಿಮಿಷ ಕುದಿಸಿ, ಉರಿಯಿಂದ ಇಳಿಸಿದರೆ ಬಟಾಣಿ ಪನ್ನೀರ್ ಮಸಾಲ ರೆಡಿ.