Latest Updates
-
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ!
ಪಾಕ ಪ್ರವೀಣರಾಗಲು ತಿಳಿದಿರಲಿ ಈ ಉಪಾಯಗಳು

ಅಡುಗೆಗೆ ಕೆಲ ಸಲಹೆಗಳು:
1. ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ನೀರಿನಲ್ಲಿ ನೆನೆ ಹಾಕಿ ನಂತರ ತೊಳೆದು ಅರೆಯುವುದಕ್ಕಿಂತ, ಚೆನ್ನಾಗಿ ತೊಳೆದು ನಂತರ ನೀರಿನಲ್ಲಿ ನೆನೆ ಹಾಕಿದರೆ ರುಬ್ಬುವಾಗ ಅದೇ ನೀರನ್ನು ಬಳಸಬಹುದು. ಏಕೆಂದರೆ ಅಕ್ಕಿ, ಕಾಳುಗಳನ್ನು ನೆನೆ ಹಾಕಿದ ನೀರನಲ್ಲಿ ವಿಟಮಿನ್ ಗಳಿರುತ್ತವೆ. ತೊಳೆಯದಿದ್ದರೆ ಆ ನೀರು ಬಿಸಾಡುವುದರಿಂದ ವಿಟಮಿನ್ ಗಳು ನಷ್ಟವಾಗುತ್ತದೆ.
2. ಅಡುಗೆಯಲ್ಲಿ ಉಪ್ಪು ಜಾಸ್ತಿಯಾಗಿದ್ದರೆ ಆಲುಗೆಡ್ಡೆ ಅಥವಾ ಟೊಮೆಟೊ ಕತ್ತರಿಸಿ ಆ ಅಡುಗೆಗೆ ಹಾಕಿದರೆ ಅಥವಾ ಒಂದು ಚಮಚ ಸಕ್ಕರೆ ಸೇರಿಸಿದರೆ ಉಪ್ಪು ಕಡಿಮೆಯಾಗುತ್ತದೆ.
3. ವಡೆ ಮಾಡುವಾಗ ಹಿಟ್ಟು ನೀರಾಗಿದ್ದರೆ ಎಣ್ಣೆಯಲ್ಲಿ ಹಾಕುವಾಗ ಸಿಡಿಯುತ್ತದೆ. ಆದ್ದರಿಂದ ಈ ರೀತಿ ಉಂಟಾದಾಗ ಸ್ವಲ್ಪ ತುಪ್ಪ ಸೇರಿಸಿದರೆ ಸಿಡಿಯುವುದಿಲ್ಲ.
4. ಮಾಂಸಾಹಾರ ಮಾಡುವಾಗ ಮಾಂಸ ಸ್ವಲ್ಪ ಬೆಂದ ಮೇಲೆ ಉಪ್ಪು ಹಾಕಿ, ಅದರಲ್ಲೂ ಉಪ್ಪು ಸ್ವಲ್ಪ ಕಮ್ಮಿ ಹಾಕಬೇಕು. ಬೆಂದ ನಂತರ ಉಪ್ಪು ನೋಡಿ ಬೇಕಿದ್ದರೆ ಸ್ವಲ್ಪ ಸೇರಿಸಬೇಕು.
5. ಗಟ್ಟಿಯಾದ ಗ್ರೇವಿ ಅಥವಾ ಸೂಪ್ ಸ್ವಲ್ಪ ಗಟ್ಟಿಯಾಗಿ ಮಾಡುವುದಾದರೆ ಸ್ವಲ್ಪ ಜೋಳದ ಹಿಟ್ಟು ಸೇರಿಸಬೇಕು. ಇದನ್ನು ಹಾಗೇ ಹಾಕುವುದಕ್ಕಿಂತ ಸ್ವಲ್ಪ ನೀರು ಹಾಕಿ ಮಿಶ್ರ ಮಾಡಿ ನಂತರ ಹಾಕುವುದು ಒಳ್ಳೆಯದು.
6. ಪಾಸ್ತಾ ತಯಾರಿಸುವಾಗ ಬೇಯಿಸುವ ನೀರಿಗೆ ಉಪ್ಪು ಹಾಕಿದರೆ ಒಳ್ಳೆಯದು. ಈ ರೀತಿ ಮಾಡಿದರೆ ಮಾತ್ರ ಪಾಸ್ತಾಕ್ಕೆ ಸ್ವಲ್ಪ ಉಪ್ಪು ಹಿಡಿಯುತ್ತದೆ. ನೀರು ಕುದಿ ಬಂದ ನಂತರ ಉಪ್ಪು ಸೇರಿಸಬೇಕು. ಮೊದಲೇ ಸೇರಿಸಿದರೆ ನೀರು ಕುದಿ ಬರಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ.
7. ಅನ್ನ ಬೆಂದ ನಂತರ ಬಿಡಿಬೊಡಯಾಗಿ ಇರಬೇಕೆಂದರೆ ಅಕ್ಕಿಯನ್ನು ತೊಳೆದು 10 ನಿಮಿಷ ನೀರಿನಲ್ಲಿ ನೆನೆಹಾಕ ಬೇಕು. ನಂತರ ಬೇಯಿಸಬೇಕು. ಅನ್ನ ಬೇಯಿಸುವಾಗ ಒಂದು ಚಮಚ ಎಣ್ಣೆ ಹಾಕಿದರೆ ಅನ್ನ ಒಂದಕ್ಕೊಂದು ಅಂಟುವುದಿಲ್ಲ.
8. ಕರಿದ ತಿಂಡಿಗಳನ್ನು ತಯಾರಿಸುವಾಗ ಎಣ್ಣೆ ತುಂಬಾ ನೊರೆ ಬಂದು ಬಾಣಲೆಯಿಂದ ಹೊರಚೆಲ್ಲದಂತೆ ತಡೆಯಲು ಎಣ್ಣೆ ಕುದಿಯುವಾಗ ಸ್ವಲ್ಪ ಹುಣಸೆ ಹಣ್ಣು ಹಾಕಿದರೆ ಸಾಕು.
9. ಮೃದುವಾದ ಇಡ್ಲಿ ಬೇಕೆಂದರೆ ಕಲೆಸಿಟ್ಟ ಹಿಟ್ಟನ್ನು ಪಾತ್ರೆಗೆ ಹಾಕಿ ಬೇಯಿಸುವ ಮೊದಲು ಮತ್ತೊಮ್ಮೆ ಕದಡಬಾರದು. ಏಕೆಂದರೆ ಇಡ್ಲಿ ಹಿಟ್ಟನ್ನು ಕಲೆಸಿ 8-10 ಗಂಟೆ ಇಟ್ಟಾಗ ಹಿಟ್ಟಿನಲ್ಲಿ ಗುಳ್ಳೆಗಳಲ್ಲಿ ಗಾಳಿ ಸೇರಿಕೊಂಡಿರುತ್ತದೆ. ಆದ್ದರಿಂದ ಹಿಟ್ಟನ್ನು ಕದಡದೆ ಪಾತ್ರೆಗೆ ಹಾಕಿ ಬೇಯಿಸಿದರೆ ಹಿಟ್ಟು ಮೃದುವಾಗುತ್ತದೆ.
10. ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬರದಿರಲು ಈರುಳ್ಳಿಯನ್ನು ನೀರಿನಲ್ಲಿ ಹಾಕಿ ಅಥವಾ ಫ್ರಿಜ್ ನಲ್ಲಿಟ್ಟು ಕತ್ತರಿಸಬೇಕು.



Click it and Unblock the Notifications