Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಕ್ಟೋಬರ್ 16ರಂದು ಬ್ರಹ್ಮಚಾರಿಣಿ ಮೂಜೆಗೆ ಶುಭ ಮುಹೂರ್ತ ಯಾವಾಗ?
ನವರಾತ್ರಿ ಪೂಜೆ ಶುರುವಾಗಿದೆ. ಅಕ್ಟೋಬರ್ 16ಕ್ಕೆ ನವರಾತ್ರಿ 2ನೇ ದಿನ, ಈ ದಿನ ಬ್ರಹ್ಮಚಾರಿಣಿಯನ್ನು ಆರಾಧಿಸಲಾಗುವುದು. ಬ್ರಹ್ಮಚಾರಿಣಿ ದೇವಿಯು ಪ್ರೀತಿ ಹಾಗೂ ಶಾಂತಿಯ ಸಂಕೇತ. ಬ್ರಹ್ಮಚಾರಿಣಿ ಅವಾಹಿತ ಪಾರ್ವತಿ ರೂಪ ಎಂದು ಕೂಡ ಹೇಳಲಾಗುವುದು. ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸಲು ಶುಭ ಮುಹೂರ್ತ ಯಾವಾಗ? ಬ್ರಹ್ಮಚಾರಿಣಿಯನ್ನು ಆರಾಧಿಸುವುದರಿಂದ ದೊರೆಯುವ ಪ್ರಯೋಜನಗಳೇನು ಎಂದು ನೋಡೋಣ:

ಬ್ರಹ್ಮಚಾರಿಣಿ ಅರ್ಥವೇನು?
ಬ್ರಹ್ಮ ಎಂದರೆ 'ತಪಸ್ಸು' ಮತ್ತು ಚಾರಿಣಿ ಎಂದರೆ 'ವಾಹಕ' ಎಂದರ್ಥ. ಬ್ರಹ್ಮಚಾರಿಣಿ ಮಾತೆಯ ಆರಾಧನೆಯಿಂದ ಮನುಷ್ಯ ಎಲ್ಲ ರೀತಿಯ ಸುಖವನ್ನು ಪಡೆಯುತ್ತಾನೆ. ಬ್ರಹ್ಮಚಾರಿಣಿಯನ್ನು ತಪಸ್ಸಿನ ದೇವತೆ ಎಂದು ಕರೆಯಲಾಗುತ್ತದೆ. ದುರ್ಗಾ ದೇವಿಯ ಎರಡನೇ ರೂಪವನ್ನು ಅಂದರೆ ಬ್ರಹ್ಮಚಾರಿಣಿ ಮಾತೆಯನ್ನು ಪೂಜಿಸುವುದರಿಂದ, ದೀರ್ಘಾಯುಷ್ಯ ಲಭಿಸುತ್ತದೆ ಮನೆಯಲ್ಲಿ ಶಾಂತಿ ನೆಲೆಸುವುದು ಎಂದು ಹೇಳಲಾಗುವುದು.
ಬ್ರಹ್ಮಚಾರಿಣಿ ಪೂಜೆಗೆ ಶುಭ ಮುಹೂರ್ತ
ಬ್ರಹ್ಮಚಾರಿಣಿಗೆ ಶುಭ ಮುಹೂರ್ತ ಬೆಳಗ್ಗೆ 11:44ರಿಂದ ಮಧ್ಯಾಹ್ನ 12:29ರವರೆಗೆ
ರಾಹುಕಾಲ: ಬೆಳಗ್ಗೆ 07:48ರಿಂದ 09:14ರವರೆಗೆ (ಈ ಸಮಯದಲ್ಲಿ ಪೂಜೆ ಮಾಡಬಾರದು)
ಬ್ರಹ್ಮಚಾರಿಣಿಯನ್ನು ಹೇಗೆ ಪೂಜಿಸಬೇಕು?
ನೀವು ಹಾಲು, ಮೊಸರು, ಜೇನನ್ನು ದೇವಿಗೆ ಅರ್ಪಿಸಬೇಕು. ನೀವು ದೇ
* ನೀವು ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಬಟ್ಟೆ ಧರಿಸಿ
* ದೇವಿಗೆ ಹೂ, ಹಣ್ಣುಗಳನ್ನು ಅರ್ಪಿಸಿ
* ಬ್ರಹ್ಮಚಾರಿಣಿ ಪೂಜೆಗೆ ಕಮಲದ ಹೂವುಗಳು, ದಾಸವಾಳದ ಹೂವುಗಳನ್ನು ಅರ್ಪಿಸಿ
* ಕರ್ಪೂರದಿಂದ ಆರತಿ ಬೆಳಗಿ.
ದೇವರ ನೈವೇದ್ಯಕ್ಕೆ ಹಳದಿ ನೈವೇದ್ಯಗಳನ್ನು ಅರ್ಪಿಸಿ
ನೀವು ಬ್ರಹ್ಮಚಾರಿಣಿ ದೇವಿಗೆ ಹಳದಿ ಬಣ್ಣದ ನೈವೇದ್ಯಗಳನ್ನು ಅರ್ಪಿಸಿ. ಬಾಳೆಹಣ್ಣನ್ನು ತಪ್ಪದೆ ಅರ್ಪಿಸಿ. ಅಲ್ಲದೆ ಬ್ರಹ್ಮಚಾರಿಣಿಗೆ ಸಕ್ಕರೆ ಅರ್ಪಿಸುವುದರಿಂದ ಆಯುಸ್ಸು ಹೆಚ್ಚಾಗುವುದು ಎಂಬ ನಂಬಿಕೆ.
ಬ್ರಹ್ಮಚಾರಿಣಿಯ ಆರಾಧನೆ ಮಾಡಿದರೆ ಸಂತಾನ ಭಾಗ್ಯ ದೊರೆಯುವುದು
ಮಕ್ಕಳಿಲ್ಲದ ದಂಪತಿ ಬ್ರಹ್ಮಚಾರಿಣಿಯನ್ನು ಭಕ್ತಿಯಿಂದ ಆರಾಧಿಸಿದರೆ ಸಂತಾನ ಭಾಗ್ಯ ದೊರೆಯುತ್ತದೆ ಎಂದು ಅವಳನ್ನು ನಂಬಿದ ಭಕ್ತರ ಅಚಲ ನಂಬಿಕೆಯಾಗಿದೆ.
ಬ್ರಹ್ಮಚಾರಿಣಿ ದೇವಾಲಯ ಎಲ್ಲಿದೆ?
ಕಾಶಿಯಲ್ಲಿರುವ ಗಂಗಾ ನದಿಯ ತೀರದಲ್ಲಿರುವ ಬಾಲಾಜಿ ಗಾಟ್ನಲ್ಲಿ ಬ್ರಹ್ಮಚಾರಿಣಿ ದೇವಿಯ ದೇವಾಲಯವಿದೆ. ನವರಾತ್ರಿಯ ಸಮಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು.
ಬ್ರಹ್ಮಚಾರಿಣಿ ಮಂತ್ರ
ಯಾ ದೇವಿ ಸರ್ವ ಭೂತೇಷು ಬ್ರಹ್ಮಚಾರಿಣಿ ರೂಪೇಣ ಸಂಸ್ಥಿತ
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ
- ಓಂ ದೇವಿ ಬ್ರಹ್ಮಚಾರಿಣ್ಯೈ ನಮಃ
- ದಧನಾಕರ ಪದ್ಮಭಯಂ ಅಕ್ಷಮಾಲಾ ಕಮಂಡಲಂ,
ದೇವೀ ಪ್ರಸಾದಿತು ಮಯಿ ಬ್ರಹ್ಮಚಾರಿಣಿಯನುತ್ತಮ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











