Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಧನ್ತೇರಸ್ ಪ್ರದೋಷ ಕಾಲದಿಂದ ಈ 4 ರಾಶಿಯವರು ಹೆಜ್ಜೆ ಹೆಜ್ಜೆಯಲ್ಲೂ ಆರ್ಥಿಕವಾಗಿ ಬೆಳೆಯುತ್ತಾರೆ
ಧನ್ತೇರಸ್ ದಿನದಂದು ಚಿನ್ನ, ಬೆಳ್ಳಿ ಖರೀದಿಸಿದರೆ ತುಂಬಾನೇ ಶುಭ, ಸಂಪತ್ತು ವೃದ್ಧಿಸುವುದು, ಹಾಗಾಗಿ ಈ ದಿನದಂದು ಚಿನ್ನ-ಬೆಳ್ಳಿ ಖರೀದಿಸುತ್ತಾರೆ, ಚಿನ್ನ ಖರೀದಿಸದಿದ್ದರೂ ಬೆಳ್ಳಿಯನ್ನಾದರೂ ಖರೀದಿಸುತ್ತಾರೆ. ಅಲ್ಲದೆ ಈ ದಿನ ಮನೆಗೆ ವಸ್ತುಗಳನ್ನು ಖರೀದಿಸುವುದು ಶುಭ ಎಂದು ಪರಿಗಣಿಸಲಾಗಿದೆ. ಅಕ್ಷಯ ತೃತಿಯಂತೆಯೇ ಈ ದಿನ ಕೂಡ ತುಂಬಾನೇ ಶುಭವಾಗಿದೆ. ಈ ಭಾರಿ ಧನ್ತೇರಸ್ಗೆ ಅದ್ಭುತ ಯೋಗ ಕೂಡ ಬಂದಿದೆ.
ಪ್ರದೋಷ ಸಮಯದಲ್ಲಿ ಇಂಥ ಯೋಗ ಬಂದಿರುವುದು 59 ವರ್ಷಗಳ ಬಳಿಕ.
ಶುಕ್ರವಾರ ಲಕ್ಷ್ಮಿ ಪೂಜೆಗೆ ಶ್ರೇಷ್ಠವಾದ ದಿನ, ಈ ದಿನದಂದು ಪ್ರದೋಷ ಸಮಯದಲ್ಲಿ ಕುಬೇರ, ಧನ್ವಂತರಿ, ಲಕ್ಷ್ಮಿಯನ್ನು ಆರಾಧಿಸಲಾಗುವುದು. ಈ ಪ್ರದೋಷಕಾಲದಿಂದ ಈ 4 ರಾಶಿಯವರ ಮೇಲೆ ಲಕ್ಷ್ಮಿ ಕೃಪೆ ಹೆಚ್ಚಿರಲಿದೆ. ಆರ್ಥಿಕವಾಗಿ ತುಂಬಾನೇ ಪ್ರಗತಿ ಕಾಣುವಿರಿ.

ಮೇಷ ರಾಶಿ
ಧನ್ತೇರಸ್ ದಿನದಿಂದ ಮೇಷ ರಾಶಿಯವರಿಗೆ ಒಳ್ಳೆಯ ಸಮಯ ಶುರುವಾಗಲಿದೆ. ನೀವು ವೃತ್ತಿ ಜೀವನದಲ್ಲಿ ಮತ್ತಷ್ಟು ಪ್ರಗತಿ ಕಾಣಬಹುದು, ಬಡ್ತಿ ಸಿಗಲಿದೆ, ಆರ್ಥಿಕ ಸಂಪತ್ತು ಹೆಚ್ಚಾಗುವುದರಿಂದ ಸೌಕರ್ಯಗಳು ಹೆಚ್ಚಾಗಲಿದೆ. ಕುಟುಂಬ ಜೀವನ ತುಂಬಾನೇ ಚೆನ್ನಾಗಿರಲಿದೆ. ನೀವು ಮನೆಕಟ್ಟಬೇಕು, ಆಸ್ತಿ ಖರೀದಿಸಬೇಕು ಎಂದು ಬಯಸುತ್ತಿದ್ದರೆ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ಧನ್ತೇರಸ್ ದಿನದಿಂದ ಮಿಥುನ ರಾಶಿಯವರಿಗೆ ಲಕ್ಷ್ಮಿ ಒಲಿಯಲಿದ್ದಾಳೆ. ಹಣದ ಕೊರತೆಯೇ ಇರುವುದಿಲ್ಲ. ನೀವು ಆಸ್ತಿ ಖರೀದಿಸಬೇಕು, ಮನೆ ಕಟ್ಟಬೇಕು ಎಂದು ಬಯಸುತ್ತಿದ್ದರೆ ಈ ಅವಧಿಯಲ್ಲಿ ನೆರವೇರಲಿದೆ. ಉದ್ಯೋಗಿಗಳು ಅಥವಾ ಸ್ವಂತ ವ್ಯವಹಾರ ಮಾಡುವವರು ಮುಂದಿನ ವರ್ಷ ತುಂಬಾನೇ ಪ್ರಯೋಜನ ಕಾಣುವಿರಿ.
ಸಿಂಹ ರಾಶಿ
ಧನ್ತೇರಸ್ ನಿಮಗೆ ಲಕ್ಷ್ಮಿ ಕೃಪೆ ತಂದಿದೆ. ಅಪೂರ್ಣವಾಗಿದ್ದ ನಿಮ್ಮ ಎಲ್ಲಾ ಕಾರ್ಯಗಳು ಪೂರ್ಣವಾಗಲಿದೆ. ಈ ಅವಧಿಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ಉತ್ತಮ ಸುದ್ದಿ ಪಡೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆ ಬಗೆಹರಿಯಲಿದೆ. ನೀವು ಮನೆ ಕಟ್ಟುವುದು, ಆಸ್ತಿ ಖರೀದಿಸುವುದು ಈ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ಆಸೆ ನೆರವೇರಲಿದೆ.
ಕುಂಭ ರಾಶಿ
ಕುಂಭ ರಾಶಿಯವರು ಕೂಡ ತುಂಬಾನೇ ಆರ್ಥಿಕ ಲಾಭ ಪಡೆಯುತ್ತೀರಿ. ನೀವು ವ್ಯವಹಾರ ಮಾಡುತ್ತಿದ್ದರೆ ನಿಮ್ಮ ಬ್ಯುಸ್ನೆಸ್ ಮತ್ತಷ್ಟು ದೊಡ್ಡದಾಗಲಿದೆ, ಆರ್ಥಿಕ ಲಾಭ ಪಡೆಯುತ್ತೀರಿ. ಆದಾಯಕ್ಕೆ ಹೊಸ ಅವಕಾಶಗಳನ್ನು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸ್ನೇಹಿತರ ಜೊತೆ ಖುಷಿಯಿಂದ ಸಮಯ ಕಳೆಯುತ್ತೀರಿ. ಉದ್ಯೋಗಿಗಳು ಬಡ್ತಿಯನ್ನು ಪಡೆಯುತ್ತೀರಿ.
ಧನ್ತೇರಸ್ ದಿನದಂದು ಯಾವ ವಸ್ತುಗಳನ್ನು ಖರೀದಿಸಿದರೆ ಒಳ್ಳೆಯದು?
ಧನ್ತೇರಸ್ ಶುಭ ಮುಹೂರ್ತ ಶುಕ್ರವಾರ ಮಾತ್ರವಲ್ಲ ಶನಿವಾರ ಮಧ್ಯಾಹ್ನದವರೆಗೆ ಇರಲಿದೆ. ಈ ಶುಭ ಘಳಿಗೆಯಲ್ಲಿ ನೀವು ಈ ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು
* ಈ ದಿನ ಲಕ್ಷ್ಮಿಯ ಮೂರ್ತಿ ಖರೀದಿಸಿ ಪೂಜಿಸಿ
* ಈ ದಿನ ಚಿನ್ನ- ಬೆಳ್ಳಿ ಖರೀದಿಗೆ ಈ ದಿನ ತುಂಬಾನೇ ಶುಭವಾಗಿದೆ.
* ಬೆಳ್ಳಿಯ ಪಾತ್ರೆಗಳನ್ನು ಖರೀದಿಸುವುದು ಶುಭವಾಗಿದೆ.
* ಇದೇ ಆಯುರ್ವೇದ ದೇವರಾದ ಧನ್ವಂತರಿ ಜನಿಸಿದರು ಎಂದು ಹೇಳಲಾಗುವುದು, ಆದ್ದರಿಂದ ಈ ದಿನ ಧನ್ವಂತಿರಿಗೆ ಪೂಜೆ ಸಲ್ಲಿಸಿ.
* ಕುಬೇರ, ಲಕ್ಷ್ಮಿಗೆ ಪೂಜೆ ಸಲ್ಲಿಸಿ
* ಮನೆಗೆ ಶ್ರೀಯಂತ್ರ ತನ್ನಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications