Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಧನ್ತೇರಸ್ ಪ್ರದೋಷ ಕಾಲದಿಂದ ಈ 4 ರಾಶಿಯವರು ಹೆಜ್ಜೆ ಹೆಜ್ಜೆಯಲ್ಲೂ ಆರ್ಥಿಕವಾಗಿ ಬೆಳೆಯುತ್ತಾರೆ
ಧನ್ತೇರಸ್ ದಿನದಂದು ಚಿನ್ನ, ಬೆಳ್ಳಿ ಖರೀದಿಸಿದರೆ ತುಂಬಾನೇ ಶುಭ, ಸಂಪತ್ತು ವೃದ್ಧಿಸುವುದು, ಹಾಗಾಗಿ ಈ ದಿನದಂದು ಚಿನ್ನ-ಬೆಳ್ಳಿ ಖರೀದಿಸುತ್ತಾರೆ, ಚಿನ್ನ ಖರೀದಿಸದಿದ್ದರೂ ಬೆಳ್ಳಿಯನ್ನಾದರೂ ಖರೀದಿಸುತ್ತಾರೆ. ಅಲ್ಲದೆ ಈ ದಿನ ಮನೆಗೆ ವಸ್ತುಗಳನ್ನು ಖರೀದಿಸುವುದು ಶುಭ ಎಂದು ಪರಿಗಣಿಸಲಾಗಿದೆ. ಅಕ್ಷಯ ತೃತಿಯಂತೆಯೇ ಈ ದಿನ ಕೂಡ ತುಂಬಾನೇ ಶುಭವಾಗಿದೆ. ಈ ಭಾರಿ ಧನ್ತೇರಸ್ಗೆ ಅದ್ಭುತ ಯೋಗ ಕೂಡ ಬಂದಿದೆ.
ಪ್ರದೋಷ ಸಮಯದಲ್ಲಿ ಇಂಥ ಯೋಗ ಬಂದಿರುವುದು 59 ವರ್ಷಗಳ ಬಳಿಕ.
ಶುಕ್ರವಾರ ಲಕ್ಷ್ಮಿ ಪೂಜೆಗೆ ಶ್ರೇಷ್ಠವಾದ ದಿನ, ಈ ದಿನದಂದು ಪ್ರದೋಷ ಸಮಯದಲ್ಲಿ ಕುಬೇರ, ಧನ್ವಂತರಿ, ಲಕ್ಷ್ಮಿಯನ್ನು ಆರಾಧಿಸಲಾಗುವುದು. ಈ ಪ್ರದೋಷಕಾಲದಿಂದ ಈ 4 ರಾಶಿಯವರ ಮೇಲೆ ಲಕ್ಷ್ಮಿ ಕೃಪೆ ಹೆಚ್ಚಿರಲಿದೆ. ಆರ್ಥಿಕವಾಗಿ ತುಂಬಾನೇ ಪ್ರಗತಿ ಕಾಣುವಿರಿ.

ಮೇಷ ರಾಶಿ
ಧನ್ತೇರಸ್ ದಿನದಿಂದ ಮೇಷ ರಾಶಿಯವರಿಗೆ ಒಳ್ಳೆಯ ಸಮಯ ಶುರುವಾಗಲಿದೆ. ನೀವು ವೃತ್ತಿ ಜೀವನದಲ್ಲಿ ಮತ್ತಷ್ಟು ಪ್ರಗತಿ ಕಾಣಬಹುದು, ಬಡ್ತಿ ಸಿಗಲಿದೆ, ಆರ್ಥಿಕ ಸಂಪತ್ತು ಹೆಚ್ಚಾಗುವುದರಿಂದ ಸೌಕರ್ಯಗಳು ಹೆಚ್ಚಾಗಲಿದೆ. ಕುಟುಂಬ ಜೀವನ ತುಂಬಾನೇ ಚೆನ್ನಾಗಿರಲಿದೆ. ನೀವು ಮನೆಕಟ್ಟಬೇಕು, ಆಸ್ತಿ ಖರೀದಿಸಬೇಕು ಎಂದು ಬಯಸುತ್ತಿದ್ದರೆ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ಧನ್ತೇರಸ್ ದಿನದಿಂದ ಮಿಥುನ ರಾಶಿಯವರಿಗೆ ಲಕ್ಷ್ಮಿ ಒಲಿಯಲಿದ್ದಾಳೆ. ಹಣದ ಕೊರತೆಯೇ ಇರುವುದಿಲ್ಲ. ನೀವು ಆಸ್ತಿ ಖರೀದಿಸಬೇಕು, ಮನೆ ಕಟ್ಟಬೇಕು ಎಂದು ಬಯಸುತ್ತಿದ್ದರೆ ಈ ಅವಧಿಯಲ್ಲಿ ನೆರವೇರಲಿದೆ. ಉದ್ಯೋಗಿಗಳು ಅಥವಾ ಸ್ವಂತ ವ್ಯವಹಾರ ಮಾಡುವವರು ಮುಂದಿನ ವರ್ಷ ತುಂಬಾನೇ ಪ್ರಯೋಜನ ಕಾಣುವಿರಿ.
ಸಿಂಹ ರಾಶಿ
ಧನ್ತೇರಸ್ ನಿಮಗೆ ಲಕ್ಷ್ಮಿ ಕೃಪೆ ತಂದಿದೆ. ಅಪೂರ್ಣವಾಗಿದ್ದ ನಿಮ್ಮ ಎಲ್ಲಾ ಕಾರ್ಯಗಳು ಪೂರ್ಣವಾಗಲಿದೆ. ಈ ಅವಧಿಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ಉತ್ತಮ ಸುದ್ದಿ ಪಡೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆ ಬಗೆಹರಿಯಲಿದೆ. ನೀವು ಮನೆ ಕಟ್ಟುವುದು, ಆಸ್ತಿ ಖರೀದಿಸುವುದು ಈ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ಆಸೆ ನೆರವೇರಲಿದೆ.
ಕುಂಭ ರಾಶಿ
ಕುಂಭ ರಾಶಿಯವರು ಕೂಡ ತುಂಬಾನೇ ಆರ್ಥಿಕ ಲಾಭ ಪಡೆಯುತ್ತೀರಿ. ನೀವು ವ್ಯವಹಾರ ಮಾಡುತ್ತಿದ್ದರೆ ನಿಮ್ಮ ಬ್ಯುಸ್ನೆಸ್ ಮತ್ತಷ್ಟು ದೊಡ್ಡದಾಗಲಿದೆ, ಆರ್ಥಿಕ ಲಾಭ ಪಡೆಯುತ್ತೀರಿ. ಆದಾಯಕ್ಕೆ ಹೊಸ ಅವಕಾಶಗಳನ್ನು ನಿಮ್ಮನ್ನು ಹುಡುಕಿಕೊಂಡು ಬರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸ್ನೇಹಿತರ ಜೊತೆ ಖುಷಿಯಿಂದ ಸಮಯ ಕಳೆಯುತ್ತೀರಿ. ಉದ್ಯೋಗಿಗಳು ಬಡ್ತಿಯನ್ನು ಪಡೆಯುತ್ತೀರಿ.
ಧನ್ತೇರಸ್ ದಿನದಂದು ಯಾವ ವಸ್ತುಗಳನ್ನು ಖರೀದಿಸಿದರೆ ಒಳ್ಳೆಯದು?
ಧನ್ತೇರಸ್ ಶುಭ ಮುಹೂರ್ತ ಶುಕ್ರವಾರ ಮಾತ್ರವಲ್ಲ ಶನಿವಾರ ಮಧ್ಯಾಹ್ನದವರೆಗೆ ಇರಲಿದೆ. ಈ ಶುಭ ಘಳಿಗೆಯಲ್ಲಿ ನೀವು ಈ ವಸ್ತುಗಳನ್ನು ಮನೆಗೆ ತಂದರೆ ಒಳ್ಳೆಯದು
* ಈ ದಿನ ಲಕ್ಷ್ಮಿಯ ಮೂರ್ತಿ ಖರೀದಿಸಿ ಪೂಜಿಸಿ
* ಈ ದಿನ ಚಿನ್ನ- ಬೆಳ್ಳಿ ಖರೀದಿಗೆ ಈ ದಿನ ತುಂಬಾನೇ ಶುಭವಾಗಿದೆ.
* ಬೆಳ್ಳಿಯ ಪಾತ್ರೆಗಳನ್ನು ಖರೀದಿಸುವುದು ಶುಭವಾಗಿದೆ.
* ಇದೇ ಆಯುರ್ವೇದ ದೇವರಾದ ಧನ್ವಂತರಿ ಜನಿಸಿದರು ಎಂದು ಹೇಳಲಾಗುವುದು, ಆದ್ದರಿಂದ ಈ ದಿನ ಧನ್ವಂತಿರಿಗೆ ಪೂಜೆ ಸಲ್ಲಿಸಿ.
* ಕುಬೇರ, ಲಕ್ಷ್ಮಿಗೆ ಪೂಜೆ ಸಲ್ಲಿಸಿ
* ಮನೆಗೆ ಶ್ರೀಯಂತ್ರ ತನ್ನಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications