Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಧನು ಸಂಕ್ರಾಂತಿ ಯಾವಾಗ? ಕಷ್ಟಗಳ ನಿವಾರಣೆಗೆ ಈ ದಿನ ಯಾವ ಪರಿಹಾರ ಮಾಡಿದರೆ ಒಳ್ಳೆಯದು?
ಹಿಂದೂ ಧರ್ಮದಲ್ಲಿ ಸೂರ್ಯ ಸಂಕ್ರಾಂತಿಗೆ ತುಂಬಾನೇ ಮಹತ್ವವಿದೆ. ಸೂರ್ಯನು ವೃಶ್ಚಿಕ ರಾಶಿಯಿಂದ ಧನು ರಾಶಿಗೆ ಸಂಚರಿಸುವುದಕ್ಕೆ ಧನು ಸಂಕ್ರಾಂತಿ ಎಂದು ಕರೆಯಲಾಗುವುದು. ಈ ದಿನ ಸೂರ್ಯನ ಪೂಜೆಗೆ ತುಂಬಾನೇ ಮಹತ್ವವಿದೆ.
ಧನು ಸಂಕ್ರಾಂತಿಯಿಂದ ಧರ್ನುಮಾಸ ಪ್ರಾರಂಭವಾಗುವುದು. ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಲಾಗುವುದು. ಈ ವರ್ಷ ಧನು ಸಂಕ್ರಾಂತಿ ಯಾವಾಗ, ಈ ದಿನ ಕಷ್ಟಗಳ ನಿವಾರಣೆಗೆ ಯಾವ ರೀತಿಯ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಧನು ಸಂಕ್ರಾಂತಿ ಯಾವಾಗ?
ಸೂರ್ಯ ದೇವನು ವೃಕ್ಷಕ ರಾಶಿಯಿಂದ ಧನು ರಾಶಿಗೆ ಡಿಸೆಂಬರ್ 16 ಸಂಜೆ 3:58ಕ್ಕೆ ಪ್ರವೇಶಿಸುತ್ತಾನೆ. ಇಲ್ಲಿಂದ ಧರ್ನುಮಾಸ ಪ್ರಾರಂಭ.
ಧನು ಸಂಕ್ರಾಂತಿಯಂದು ಮಂಗಳಕರ ಸಮಯ
ಹಿಂದೂ ಪಂಚಾಂಗದ ಪ್ರಕಾರ, ಧನು ಸಂಕ್ರಾಂತಿಯ ಪುಣ್ಯಕಾಲವು ಬೆಳಗ್ಗೆ 9.58 ಕ್ಕೆ ಪ್ರಾರಂಭವಾಗಿ ಸಂಜೆ 4.22 ಕ್ಕೆ ಕೊನೆಗೊಳ್ಳುತ್ತದೆ. ಈ ದಿನ ಪೂರ್ವಜರಿಗೆ ತರ್ಪಣ ಅರ್ಪಿಸಬಹುದು. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಧನು ಸಂಕ್ರಾಂತಿಯಂದು ಈ ರೀತಿ ಮಾಡಿದರೆ ನಿಮ್ಮ ಬದುಕಿನಲ್ಲಿರುವ ತೊಂದರೆಗಳು ದೂರಾಗುವುದು:
* ಧನು ಸಂಕ್ರಾಂತಿಯಂದು ಬೆಳಗ್ಗೆ ಸೂರ್ಯನಿಗೆ ಆರ್ಘ್ಯ ಅರ್ಪಿಸಿ.
* ಧನು ಸಂಕ್ರಾಂತಿಯಂದು ಶಿವನಿಗೆ ಜಲಾಭಿಷೇಕ ಮಾಡಿದರೆ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ.
* ಧನು ಸಂಕ್ರಾಂತಿಯ ದಿನದಂದು ನಿಮ್ಮ ಪೂರ್ವಜರ ಶಾಂತಿಗಾಗಿ ಗಾಯತ್ರಿ ಮಂತ್ರವನ್ನು ಪಠಿಸಿದರೆ ಒಳ್ಳೆಯದು, ಸೂರ್ಯ ದೇವ ನಿಮ್ಮ ಎಲ್ಲಾ ತೊಂದರೆಗಳನ್ನು ನಿವಾರಿಸುತ್ತಾನೆ.
* ಧನು ಸಂಕ್ರಾಂತಿಯ ದಿನದಂದು ಮಹಾಮೃತ್ಯುಂಜಯ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
* ಧನು ಸಂಕ್ರಾಂತಿಯಂದು ಭಗವಾನ್ ವಿಷ್ಣು, ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಅದೃಷ್ಟ ಒಲಿಯುವುದು, ಹಣಕಾಸಿನ ಸಮಸ್ಯೆ ಕಡಿಮೆಯಾಗುವುದು.
* ಧನು ಸಂಕ್ರಾಂತಿಯ ನಿಮ್ಮ ಶಕ್ತಿಗೆ ಅನುಸಾರ ನಿರ್ಗತಿಕರಿಗೆ ಅನ್ನದಾನ ಮಾಡಿ, ಬಡವರಿಗೆ ಬೆಚ್ಚನೆಯ ಬಟ್ಟೆ, ಗೋಧಿ, ಎಣ್ಣೆ ಹೊದಿಕೆ ಇತ್ಯಾದಿಗಳನ್ನು ದಾನ ಮಾಡಿ.
ಧರ್ನುಮಾಸದಲ್ಲಿ ಈ ಕಾರ್ಯ ಮಾಡುವಂತಿಲ್ಲ
ಧರ್ನುಮಾಸವನ್ನು ಕರ್ಮ ಮಾಸ ಎಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಶುಭ ಕಾರ್ಯ ಮಾಡುವಂತಿಲ್ಲ ಎಂದು ಹೇಳಲಾಗುವುದು, ಆದ್ದರಿಂದ ಈ ತಿಂಗಳಿನಲ್ಲಿ ಈ ಕಾರ್ಯಗಳನ್ನು ಮಾಡುವುದು ಅಷ್ಟು ಶುಭವಲ್ಲ:
* ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯ ಮಾಡುವಂತಿಲ್ಲ
* ಹೊಸ ಮನೆಗೆ ಹೋಗಲು ಈ ಸಮಯ ಶುಭವಲ್ಲ
* ಈ ಸಮಯದಲ್ಲಿ ಆಸ್ತಿ ಖರೀದಿ ಅಥವಾ ಹೊಸ ವ್ಯಾಪಾರವನ್ನು ಪ್ರಾರಂಭಿಸಬೇಡಿ.
* ಈ ತಿಂಗಳಿನಲ್ಲಿ ಸಾತ್ವಿಕ ಆಹಾರಕ್ರಮ ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications