Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಧನು ಸಂಕ್ರಾಂತಿ ಯಾವಾಗ? ಕಷ್ಟಗಳ ನಿವಾರಣೆಗೆ ಈ ದಿನ ಯಾವ ಪರಿಹಾರ ಮಾಡಿದರೆ ಒಳ್ಳೆಯದು?
ಹಿಂದೂ ಧರ್ಮದಲ್ಲಿ ಸೂರ್ಯ ಸಂಕ್ರಾಂತಿಗೆ ತುಂಬಾನೇ ಮಹತ್ವವಿದೆ. ಸೂರ್ಯನು ವೃಶ್ಚಿಕ ರಾಶಿಯಿಂದ ಧನು ರಾಶಿಗೆ ಸಂಚರಿಸುವುದಕ್ಕೆ ಧನು ಸಂಕ್ರಾಂತಿ ಎಂದು ಕರೆಯಲಾಗುವುದು. ಈ ದಿನ ಸೂರ್ಯನ ಪೂಜೆಗೆ ತುಂಬಾನೇ ಮಹತ್ವವಿದೆ.
ಧನು ಸಂಕ್ರಾಂತಿಯಿಂದ ಧರ್ನುಮಾಸ ಪ್ರಾರಂಭವಾಗುವುದು. ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಲಾಗುವುದು. ಈ ವರ್ಷ ಧನು ಸಂಕ್ರಾಂತಿ ಯಾವಾಗ, ಈ ದಿನ ಕಷ್ಟಗಳ ನಿವಾರಣೆಗೆ ಯಾವ ರೀತಿಯ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಧನು ಸಂಕ್ರಾಂತಿ ಯಾವಾಗ?
ಸೂರ್ಯ ದೇವನು ವೃಕ್ಷಕ ರಾಶಿಯಿಂದ ಧನು ರಾಶಿಗೆ ಡಿಸೆಂಬರ್ 16 ಸಂಜೆ 3:58ಕ್ಕೆ ಪ್ರವೇಶಿಸುತ್ತಾನೆ. ಇಲ್ಲಿಂದ ಧರ್ನುಮಾಸ ಪ್ರಾರಂಭ.
ಧನು ಸಂಕ್ರಾಂತಿಯಂದು ಮಂಗಳಕರ ಸಮಯ
ಹಿಂದೂ ಪಂಚಾಂಗದ ಪ್ರಕಾರ, ಧನು ಸಂಕ್ರಾಂತಿಯ ಪುಣ್ಯಕಾಲವು ಬೆಳಗ್ಗೆ 9.58 ಕ್ಕೆ ಪ್ರಾರಂಭವಾಗಿ ಸಂಜೆ 4.22 ಕ್ಕೆ ಕೊನೆಗೊಳ್ಳುತ್ತದೆ. ಈ ದಿನ ಪೂರ್ವಜರಿಗೆ ತರ್ಪಣ ಅರ್ಪಿಸಬಹುದು. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಧನು ಸಂಕ್ರಾಂತಿಯಂದು ಈ ರೀತಿ ಮಾಡಿದರೆ ನಿಮ್ಮ ಬದುಕಿನಲ್ಲಿರುವ ತೊಂದರೆಗಳು ದೂರಾಗುವುದು:
* ಧನು ಸಂಕ್ರಾಂತಿಯಂದು ಬೆಳಗ್ಗೆ ಸೂರ್ಯನಿಗೆ ಆರ್ಘ್ಯ ಅರ್ಪಿಸಿ.
* ಧನು ಸಂಕ್ರಾಂತಿಯಂದು ಶಿವನಿಗೆ ಜಲಾಭಿಷೇಕ ಮಾಡಿದರೆ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ.
* ಧನು ಸಂಕ್ರಾಂತಿಯ ದಿನದಂದು ನಿಮ್ಮ ಪೂರ್ವಜರ ಶಾಂತಿಗಾಗಿ ಗಾಯತ್ರಿ ಮಂತ್ರವನ್ನು ಪಠಿಸಿದರೆ ಒಳ್ಳೆಯದು, ಸೂರ್ಯ ದೇವ ನಿಮ್ಮ ಎಲ್ಲಾ ತೊಂದರೆಗಳನ್ನು ನಿವಾರಿಸುತ್ತಾನೆ.
* ಧನು ಸಂಕ್ರಾಂತಿಯ ದಿನದಂದು ಮಹಾಮೃತ್ಯುಂಜಯ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
* ಧನು ಸಂಕ್ರಾಂತಿಯಂದು ಭಗವಾನ್ ವಿಷ್ಣು, ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಅದೃಷ್ಟ ಒಲಿಯುವುದು, ಹಣಕಾಸಿನ ಸಮಸ್ಯೆ ಕಡಿಮೆಯಾಗುವುದು.
* ಧನು ಸಂಕ್ರಾಂತಿಯ ನಿಮ್ಮ ಶಕ್ತಿಗೆ ಅನುಸಾರ ನಿರ್ಗತಿಕರಿಗೆ ಅನ್ನದಾನ ಮಾಡಿ, ಬಡವರಿಗೆ ಬೆಚ್ಚನೆಯ ಬಟ್ಟೆ, ಗೋಧಿ, ಎಣ್ಣೆ ಹೊದಿಕೆ ಇತ್ಯಾದಿಗಳನ್ನು ದಾನ ಮಾಡಿ.
ಧರ್ನುಮಾಸದಲ್ಲಿ ಈ ಕಾರ್ಯ ಮಾಡುವಂತಿಲ್ಲ
ಧರ್ನುಮಾಸವನ್ನು ಕರ್ಮ ಮಾಸ ಎಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಶುಭ ಕಾರ್ಯ ಮಾಡುವಂತಿಲ್ಲ ಎಂದು ಹೇಳಲಾಗುವುದು, ಆದ್ದರಿಂದ ಈ ತಿಂಗಳಿನಲ್ಲಿ ಈ ಕಾರ್ಯಗಳನ್ನು ಮಾಡುವುದು ಅಷ್ಟು ಶುಭವಲ್ಲ:
* ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯ ಮಾಡುವಂತಿಲ್ಲ
* ಹೊಸ ಮನೆಗೆ ಹೋಗಲು ಈ ಸಮಯ ಶುಭವಲ್ಲ
* ಈ ಸಮಯದಲ್ಲಿ ಆಸ್ತಿ ಖರೀದಿ ಅಥವಾ ಹೊಸ ವ್ಯಾಪಾರವನ್ನು ಪ್ರಾರಂಭಿಸಬೇಡಿ.
* ಈ ತಿಂಗಳಿನಲ್ಲಿ ಸಾತ್ವಿಕ ಆಹಾರಕ್ರಮ ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications