Latest Updates
-
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ!
ಧನು ಸಂಕ್ರಾಂತಿ ಯಾವಾಗ? ಕಷ್ಟಗಳ ನಿವಾರಣೆಗೆ ಈ ದಿನ ಯಾವ ಪರಿಹಾರ ಮಾಡಿದರೆ ಒಳ್ಳೆಯದು?
ಹಿಂದೂ ಧರ್ಮದಲ್ಲಿ ಸೂರ್ಯ ಸಂಕ್ರಾಂತಿಗೆ ತುಂಬಾನೇ ಮಹತ್ವವಿದೆ. ಸೂರ್ಯನು ವೃಶ್ಚಿಕ ರಾಶಿಯಿಂದ ಧನು ರಾಶಿಗೆ ಸಂಚರಿಸುವುದಕ್ಕೆ ಧನು ಸಂಕ್ರಾಂತಿ ಎಂದು ಕರೆಯಲಾಗುವುದು. ಈ ದಿನ ಸೂರ್ಯನ ಪೂಜೆಗೆ ತುಂಬಾನೇ ಮಹತ್ವವಿದೆ.
ಧನು ಸಂಕ್ರಾಂತಿಯಿಂದ ಧರ್ನುಮಾಸ ಪ್ರಾರಂಭವಾಗುವುದು. ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಲಾಗುವುದು. ಈ ವರ್ಷ ಧನು ಸಂಕ್ರಾಂತಿ ಯಾವಾಗ, ಈ ದಿನ ಕಷ್ಟಗಳ ನಿವಾರಣೆಗೆ ಯಾವ ರೀತಿಯ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಧನು ಸಂಕ್ರಾಂತಿ ಯಾವಾಗ?
ಸೂರ್ಯ ದೇವನು ವೃಕ್ಷಕ ರಾಶಿಯಿಂದ ಧನು ರಾಶಿಗೆ ಡಿಸೆಂಬರ್ 16 ಸಂಜೆ 3:58ಕ್ಕೆ ಪ್ರವೇಶಿಸುತ್ತಾನೆ. ಇಲ್ಲಿಂದ ಧರ್ನುಮಾಸ ಪ್ರಾರಂಭ.
ಧನು ಸಂಕ್ರಾಂತಿಯಂದು ಮಂಗಳಕರ ಸಮಯ
ಹಿಂದೂ ಪಂಚಾಂಗದ ಪ್ರಕಾರ, ಧನು ಸಂಕ್ರಾಂತಿಯ ಪುಣ್ಯಕಾಲವು ಬೆಳಗ್ಗೆ 9.58 ಕ್ಕೆ ಪ್ರಾರಂಭವಾಗಿ ಸಂಜೆ 4.22 ಕ್ಕೆ ಕೊನೆಗೊಳ್ಳುತ್ತದೆ. ಈ ದಿನ ಪೂರ್ವಜರಿಗೆ ತರ್ಪಣ ಅರ್ಪಿಸಬಹುದು. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಧನು ಸಂಕ್ರಾಂತಿಯಂದು ಈ ರೀತಿ ಮಾಡಿದರೆ ನಿಮ್ಮ ಬದುಕಿನಲ್ಲಿರುವ ತೊಂದರೆಗಳು ದೂರಾಗುವುದು:
* ಧನು ಸಂಕ್ರಾಂತಿಯಂದು ಬೆಳಗ್ಗೆ ಸೂರ್ಯನಿಗೆ ಆರ್ಘ್ಯ ಅರ್ಪಿಸಿ.
* ಧನು ಸಂಕ್ರಾಂತಿಯಂದು ಶಿವನಿಗೆ ಜಲಾಭಿಷೇಕ ಮಾಡಿದರೆ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ.
* ಧನು ಸಂಕ್ರಾಂತಿಯ ದಿನದಂದು ನಿಮ್ಮ ಪೂರ್ವಜರ ಶಾಂತಿಗಾಗಿ ಗಾಯತ್ರಿ ಮಂತ್ರವನ್ನು ಪಠಿಸಿದರೆ ಒಳ್ಳೆಯದು, ಸೂರ್ಯ ದೇವ ನಿಮ್ಮ ಎಲ್ಲಾ ತೊಂದರೆಗಳನ್ನು ನಿವಾರಿಸುತ್ತಾನೆ.
* ಧನು ಸಂಕ್ರಾಂತಿಯ ದಿನದಂದು ಮಹಾಮೃತ್ಯುಂಜಯ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
* ಧನು ಸಂಕ್ರಾಂತಿಯಂದು ಭಗವಾನ್ ವಿಷ್ಣು, ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಅದೃಷ್ಟ ಒಲಿಯುವುದು, ಹಣಕಾಸಿನ ಸಮಸ್ಯೆ ಕಡಿಮೆಯಾಗುವುದು.
* ಧನು ಸಂಕ್ರಾಂತಿಯ ನಿಮ್ಮ ಶಕ್ತಿಗೆ ಅನುಸಾರ ನಿರ್ಗತಿಕರಿಗೆ ಅನ್ನದಾನ ಮಾಡಿ, ಬಡವರಿಗೆ ಬೆಚ್ಚನೆಯ ಬಟ್ಟೆ, ಗೋಧಿ, ಎಣ್ಣೆ ಹೊದಿಕೆ ಇತ್ಯಾದಿಗಳನ್ನು ದಾನ ಮಾಡಿ.
ಧರ್ನುಮಾಸದಲ್ಲಿ ಈ ಕಾರ್ಯ ಮಾಡುವಂತಿಲ್ಲ
ಧರ್ನುಮಾಸವನ್ನು ಕರ್ಮ ಮಾಸ ಎಂದು ಕರೆಯಲಾಗುವುದು. ಈ ತಿಂಗಳಿನಲ್ಲಿ ಶುಭ ಕಾರ್ಯ ಮಾಡುವಂತಿಲ್ಲ ಎಂದು ಹೇಳಲಾಗುವುದು, ಆದ್ದರಿಂದ ಈ ತಿಂಗಳಿನಲ್ಲಿ ಈ ಕಾರ್ಯಗಳನ್ನು ಮಾಡುವುದು ಅಷ್ಟು ಶುಭವಲ್ಲ:
* ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯ ಮಾಡುವಂತಿಲ್ಲ
* ಹೊಸ ಮನೆಗೆ ಹೋಗಲು ಈ ಸಮಯ ಶುಭವಲ್ಲ
* ಈ ಸಮಯದಲ್ಲಿ ಆಸ್ತಿ ಖರೀದಿ ಅಥವಾ ಹೊಸ ವ್ಯಾಪಾರವನ್ನು ಪ್ರಾರಂಭಿಸಬೇಡಿ.
* ಈ ತಿಂಗಳಿನಲ್ಲಿ ಸಾತ್ವಿಕ ಆಹಾರಕ್ರಮ ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications