Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಶನಿ ಅಮವಾಸ್ಯೆಯಂದು ಈ ಪರಿಹಾರ ಮಾಡಿದರೆ ಜೀವನದಲ್ಲಿ ಏಳಿಗೆ ಉಂಟಾಗುವುದು
ಅಕ್ಟೋಬರ್ 14ಕ್ಕೆ ಈ ವರ್ಷದ ಪಿತೃಪಕ್ಷ ಮುಕ್ತಾಯವಾಗಲಿದೆ. ತಮ್ಮ ಪೂರ್ವಜರಿಗೆ ಶ್ರಾದ್ಧ, ತರ್ಪಣವನ್ನು ಮಾಡಲು ಸಾಧ್ಯವಾಗದವರು ಈ ದಿನ ತರ್ಪಣ ನೀಡುವುದರ ಮೂಲಕ ಪುಣ್ಯದ ಫಲ ಪಡೆಯಲು ಸಾಧ್ಯವಾಗುವುದು.
ಪಿತೃದೋಷವಿದ್ದರೆ ತುಂಬಾನೇ ಸಮಸ್ಯೆ ಎದುರಿಸಬೇಕಾಗುವುದು, ಕುಟುಂಬದಲ್ಲಿ ನೆಮ್ಮದಿ ಇರಲ್ಲ, ವ್ಯಾಪಾರದಲ್ಲಿ, ವೃತ್ತಿ ಜೀವನದಲ್ಲಿ ಏಳಿಗೆ ಉಂಟಾಗುವುದಿಲ್ಲ, ತುಂಬಾನೇ ನಷ್ಟ ಅನುಭವಿಸಬೇಕಾಗುವುದು, ಸಂತಾನ ಭಾಗ್ಯ ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಇದಕ್ಕೆಲ್ಲಾ ಪರಿಹಾರ ಕಂಡುಕೊಳ್ಳಲು ಪಿತೃಪಕ್ಷ ಅತ್ಯುತ್ತಮವಾದ ಪರಿಹಾರ ಮಾರ್ಗವಾಗಿದೆ. ಪಿತೃತರ್ಪಣ ಮಾಡುವುದರಿಂದ ಪಿತೃಗಳಿಗೆ ಮೋಕ್ಷ ಸಿಗುತ್ತದೆ, ಅಲೆಯುತ್ತಿರುವ ಆತ್ಮಗಳಿಗೆ ಮೋಕ್ಷ ಸಿಕ್ಕಾಗ ಅವರು ಸಂತುಷ್ಟರಾಗಿ ಅನುಗ್ರಹಿಸುತ್ತಾರೆ. ಇದರಿಂದ ಕುಟುಂಬಕ್ಕೆ ಒಳಿತಾಗುವುದು, ಆದ್ದರಿಂದ ಪಿತೃಪಕ್ಷಕ್ಕೆ ತುಂಬಾನೇ ಮಹತ್ವವಿದೆ.

ಅಮವಾಸ್ಯೆ ತಿಥಿಯಂದು ಧಾರ್ಮಿಕ ವಿಧಿಯ ಪ್ರಕಾರ ತರ್ಪಣ ನೀಡಬೇಕು. ಈ ವರ್ಷ ಮಹಾಲಯ ಅಮವಾಸ್ಯೆ ಶನಿವಾರ ಬಂದಿರುವುದರಿಂದ ಈ ದಿನಾಂಕಕ್ಕೆ ವಿಶೇಷ ಮಹತ್ವವಿದೆ. ಈ ದಿನ ಈ ರೀತಿ ಮಾಡುವುದರಿಂದ ಪಿತೃದೋಷದಿಂದ ಮುಕ್ತರಾಗಬಹುದು:
* ಸರ್ವ ಪಿತೃ ಅಮಾವಾಸ್ಯೆಯಂದು ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಧ್ಯಾನ ಮಾಡಿ ಶುಭ್ರ ಬಟ್ಟೆ ಧರಿಸಿ ನಂತರ ಆಲದ ಮರಕ್ಕೆ ನೀರು ಹಾಕಿ, ಸಾಸಿವೆಯೆಣ್ಣೆಯಿಂದ ದೀಪ ಹಚ್ಚಿ.
* ಪಿತೃ ಪಕ್ಷದ ಅಮವಾಸ್ಯೆಯಂದು ಕಾಗೆಗಳಿಗೆ ಆಹಾರವನ್ನು ನೀಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದರಿಂದ ಶನಿಕೃಪೆಗೆ ಪಾತ್ರರಾಗುವುದು.
* ಸರ್ವ ಪಿತೃ ಅಮವಾಸ್ಯೆಯಂದು ಕಪ್ಪು ಹಸುವಿಗೆ ಸಾಸಿವೆ ಎಣ್ಣೆ ಸ್ವಲ್ಪ ಹಾಕಿ ತಯಾರಿಸಿದ ಹಿಟ್ಟು ತಿನ್ನಿಸಿ. ಇದರಿಂದ ಶನಿ ಕೃಪೆಗೆ ಪಾತ್ರರಾಗಬಹುದು.
* ಈ ದಿನ ಬಡವರಿಗೆ ಮತ್ತು ನಿರ್ಗತಿಕರಿಗೆ ದಾನ ಮಾಡಬೇಕು. ಇದರಿಂದ ಶನಿಯ ಆಶೀರ್ವಾದ ಸಿಗಲಿದೆ.
* ಶಾಸ್ತ್ರ ಪ್ರಕಾರ ಪಿತೃತರ್ಪಣ ಅರ್ಪಿಸಿ. ಬೆಳಗ್ಗೆ ಸೂರ್ಯನಿಗೆ ಆರ್ಘ್ಯ ಅರ್ಪಿಸುವಾಗ ಎಳ್ಳು ಹಾಕಿರುವ ಆರ್ಘ್ಯ ಅರ್ಪಿಸಿ.
* ಪಿಂಡದಾನ ಮಾಡಿ
ಪಿತೃ ಪೂಜೆ ಮಾಡುವಾಗ ಈ ಮಂತ್ರ ಪಠಿಸಿ ಓಂ ದೇವತಾಭ್ಯ ಪಿತೃಭಕ್ಷ್ಯ ಮಹಾಯೋಗಿಭ್ಯೇವ ಚನಮಃ ಸ್ವಾಹಾಯಃ ।। ಈ ಮಂತ್ರವನ್ನು ಶ್ರದ್ಧೆಯಿಂದ ಪಠಿಸಿ.
ಅಚನಂ ಮಾಡುವಾಗ ಈ ಮಂತ್ರ ಪಠಿಸಿ ಓಂ ಕೇಶವಾಯ ನಮಃ, ಓಂ ಮಾಧವಾಯ ನಮಃ, ಓಂ ನಾರಾಯಣಾಯ ನಮಃ ಮಂತ್ರ ಪಠಿಸಿ.
ಈ ಮಂತ್ರ 108 ಬಾರಿ ಪಠಿಸಿ
ಓಂ ಶ್ರೀ ಸರ್ವ ಪಿತೃ ದೋಷ ನಿವಾರಣಾಯ ಕ್ಲೇಷಂ ಹನ್ ಹನ್ ಸುಖ್ ಶಾಂತಿ ದೇಹಿ ಪತ್ ಸ್ವಾಹಾ
ಪಿತೃದೋಷವಿದೆ ಎಂದು ತಿಳಿಯುವುದು ಹೇಗೆ?
* ಮನೆಯಲ್ಲಿ ನೆಮ್ಮದಿ ಇಲ್ಲದಿರುವುದು
* ಮನೆಯ ಸದಸ್ಯರಿಗೆ ಬಿಡದೆ ಕಾಡುವ ಕಾಯಿಲೆ
* ಆಗಾಗ ಗರ್ಭಪಾತ ಉಂಟಾಗುವುದು
* ಸಂತಾನ ಭಾಗ್ಯ ದೊರೆಯದಿರುವುದು
* ಗಂಡ-ಹೆಂಡತಿ ನಡುವೆ ಹೊಂದಾಣಿಕೆಯೇ ಇಲ್ಲದಿರುವುದು
* ಹಣಕಾಸಿನ ತೊಂದರೆ ಉಂಟಾಗುವುದು
* ದೈಹಿಕ, ಮಾನಸಿ ಸಮಸ್ಯೆಗಳು ಕಾಡುವುದು
ತರ್ಪ ನೀಡುವುದರಿಂದ ಪಿತೃದೋಷ ದೂರಾಗುವುದು, ಪಿತೃಗಳ ಆಶೀರ್ವಾದದಿಂದ ಬದುಕು ತುಂಬಾ ಚೆನ್ನಾಗಿ ಆಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications