Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಈ ವರ್ಷ ಕಾರ್ತಿಕ ಅಮವಾಸ್ಯೆ ಯಾವಾಗ? ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಕಾರ್ತಿಕ ಅಮವಾಸ್ಯೆಗೆ ಹಿಂದೂ ಧರ್ಮದಲ್ಲಿ ತುಂಬಾನೇ ಮಹತ್ವವಿದೆ. ಕಾರ್ತಿಕ ಅಮವಾಸ್ಯೆಯ ದಿನ ತುಳಸಿ ಪೂಜೆಗೆ ವಿಶೇಷವಾದ ಮಹತ್ವವಿದೆ. ಈ ದಿನ ನದಿ ಸ್ನಾನ ಮಾಡಿ, ಸೂರ್ಯನಿಗೆ ಆರ್ಘ್ಯ ಅರ್ಪಿಸಿ, ಈ ದಿನ ತುಳಸಿ ಗಿಡಗಳನ್ನು ದಾನ ಮಾಡಲಾಗುವುದು. ಈ ದಿನ ವಿಷ್ಣುವನ್ನು ಪೂಜಿಸಲಾಗುವುದು. ಅಲ್ಲದೆ ಲಕ್ಷ್ಮಿ ಪೂಜೆಯನ್ನು ಮಾಡಲಾಗುವುದು.

ಈ ಬಾರಿ ಕಾರ್ತಿಕ ಅಮವಾಸ್ಯೆ ಯಾವಾಗ? ಈ ದಿನದ ಮಹತ್ವವೇನು?
ಕಾರ್ತಿಕ ಅಮವಾಸ್ಯೆ ಈ ಬಾರಿ ಡಿಸೆಂಬರ್ 12ರಂದು ಬಂದಿದೆ.
ಕಾರ್ತಿಕ ಅಮವಾಸ್ಯೆ ಪ್ರಯೋಜನಗಳು
* ಕಾರ್ತಿಕ ಅಮವಾಸ್ಯೆಯಂದು ಗಣಪತಿ, ಲಕ್ಷ್ಮಿ, ಶ್ರೀ ವಿಷ್ಣುವನ್ನು ಆರಾಧನೆ ಮಾಡುವುದರಿಂದ ಆರ್ಥಿಕ ಸಂಕಷ್ಟ ದೂರಾಗುವುದು, ನೆಗೆಟಿವಿಟಿ ದೂರಾಗುವುದು.
* ಈ ದಿನ ಉಪವಾಸವಿದ್ದರೆ ಒಳ್ಳೆಯದು.
* ಈ ದಿನ ಅಮವಾಸ್ಯೆಯಂದು ಪೂಜೆ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುವುದು.
* ಈ ದಿನ ವಿಷ್ಣು ಸಹಸ್ರನಾಮ ಪಠಣೆ ಮಾಡುವುದರಿಂದ ನವಗ್ರಹ ದೋಷ ನಿವಾರಣೆಯಾಗುವುದು.
* ಈ ದಿನ ಶಿವಲಿಂಗಕ್ಕೆ ಅಭಿಷೇಕ ಮಾಡಿಸಿದರೆ ಒಳ್ಳೆಯದು.
* ಈ ದಿನ ಶನಿ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆ ಅಥವಾ ಸಾಸಿವೆಯೆಣ್ಣೆ ದೀಪ ಹಚ್ಚುವುದರಿಂದ ಶನಿ ದೋಷ ಕಡಿಮೆಯಾಗುವುದು.
* ಆರೋಗ್ಯ ಸಮಸ್ಯೆಯಿದ್ದರೆ ಮೃತ್ಯಂಜಯ ಮಂತ್ರ ಪಠಣೆ ಮಾಡಿದರೆ ಒಳ್ಳೆಯದು.
ಕಾರ್ತಿಕ ಅಮವಾಸ್ಯೆ ಕುರಿತ ಪೌರಾಣಿಕ ಕತೆ
ದಂತಕತೆಯ ಪ್ರಕಾರ, ಬಲಿ ಮಹಾರಾಜ ಎಲ್ಲಾ ದೇವತೆಗಳು ಹಾಗೂ ಲಕ್ಷ್ಮಿಯನ್ನು ಬಂಧಿಸುತ್ತಾನೆ, ಆದರೆ ಶ್ರೀ ವಿಷ್ಣುವು ಅವರನ್ನು ಕಾರ್ತಿಕ ಅಮಾವಾಸ್ಯೆಯಂದು ಬಣಧ ಮುಕ್ತಗೊಳಿಸಿದನು. ಆದ್ದರಿಂದ ಈ ದಿನ ಶ್ರೀ ವಿಷ್ಣುವಿನ ಆರಾಧನೆ ಮಾಡಿದರೆ ಎಲ್ಲಾ ಕಷ್ಟಗಳು ನಿವಾರಣೆಯಾಗುವುದು ಎಂದು ನಂಬಲಾಗಿದೆ. ಈ ದಿನ ಶ್ರೀ ವಿಷ್ಣು, ಲಕ್ಷ್ಮಿಯನ್ನು ಆರಾಧನೆ ಮಾಡುವುದರಿಂದ ಆರ್ಥಿಕ ತೊಂದರೆಗಳಿದ್ದರೆ ಅದು ನಿವಾರಣೆಯಾಗುವುದು, ಸಂಪತ್ತು ವೃದ್ಧಿಸುವುದು.
ಕಾರ್ತಿಕ ಅಮವಾಸ್ಯೆಯಂದು ಪೂಜಾ ನಿಯಮಗಳೇನು?
* ಬೆಳಗ್ಗೆ ಸೂರ್ಯೋದಯಕ್ಕೆ ಮುಂಚೆ ಎದ್ದು ನದಿ ಸ್ನಾನ ಮಾಡಬೇಕು.
* ನಂತರ ಮಡಿ ಬಟ್ಟೆಗಳನ್ನು ಧರಿಸಬೇಕು.
* ನಂತರ ಶ್ರೀ ವಿಷ್ಣು ಹಾಗೂ ಲಕ್ಷ್ಮಿಗೆ ತುಪ್ಪದ ದೀಪವನ್ನು ಹಚ್ಚಿ.
* ಹೂಗಳು, ಹಣ್ಣುಗಳು, ಸಿಹಿತಿಂಡಿಗಳನ್ನು ದೇವರಿಗೆ ಅರ್ಪಿಸಿ. ಜೇನು, ಹಾಲು, ನೈವೇದ್ಯಗಳನ್ನು ಅರ್ಪಿಸಿ.
* ಓಂ ನಮೋ ಭಗವತೇ ವಾಸುದೇವಾಯ ನಮಃ ಎಂಬ ಮಂತ್ರವನ್ನು ಪಠಿಸಿ.
* ಬ್ರಾಹ್ಮಣರಿಗೆ ದಕ್ಷಿಣೆ ನೀಡಿ.
ಪರಿಹಾರ
* ಈ ದಿನ ಲಕ್ಷ್ಮಿಯನ್ನು ಪೂಜಿಸಿದರೆ ಆರ್ಥಿಕ ಸಂಕಷ್ಟ ದೂರಾಗಲಿದೆ
* ಈ ದಿನ ಸಾಸಿವೆಯೆಣ್ಣೆಯ ದೀಪ ಹಚ್ಚಿದರೆ ನಮ್ಮ ಸುತ್ತ ಇರುವ ನೆಗೆಟಿವಿಟಿ ದೂರಾಗುವುದು
* ವಿಷ್ಣು ಸಹಸ್ರನಾಮ ಪಠಿಸುವುದರಿಂದ ಶಾಂತಿ, ಉತ್ತಮ ಆರೋಗ್ಯ ಎಲ್ಲವೂ ಸಿಗಲಿದೆ.
* ಮಹಾ ಮೃತ್ಯುಂಜಯ ಮಂತ್ರ ಪಠಿಸಿದರೆ ಅವ್ಯಕ್ತ ಭಯ ದೂರಾಗುವುದು
* ನದಿ ಸ್ನಾನ ಮಾಡುವುದರಿಂದ ದೇಹದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications