Latest Updates
-
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ!
ಕಾರ್ತಿಕ ಸೋಮವಾರ:ಪ್ರದೋಷ ಸಮಯದಲ್ಲಿ ಈ ರೀತಿ ಶಿವನ ಆರಾಧನೆ ಮಾಡಿದರೆ ಇಷ್ಟಾರ್ಥ ನೆರವೇರುವುದು
ಕಾರ್ತಿಕ ಮಾಸದಲ್ಲಿ ಪ್ರತಿಯೊಂದು ದಿನವೂ ಶಿವ ಪೂಜೆಗೆ ವಿಶೇಷವಾದ ದಿನ ಅದರಲ್ಲಿಯೂ ಕಾರ್ತಿಕ ಸೋಮವಾರ ಇನ್ನೂ ವಿಶೇಷ, ಕಾರ್ತಿಕ ಸೋಮವಾರದಂದು ಶಿವನಿಗೆ ಪೂಜೆ ಮಾಡುವುದರಿಂದ ಅದರಿಂದ ಸಿಗುವ ಪ್ರಯೋಜನನ ಹೆಚ್ಚಾಗುವುದು ಎಂಬುವುದು ಧಾರ್ಮಿಕ ನಂಬಿಕೆ.
ಕಾರ್ತಿಕ ಮಾಸದಲ್ಲಿ ಕಾರ್ತಿಕ ದೀಪವನ್ನು ಪ್ರದೋಷ ಸಮಯದಲ್ಲಿ ಹಚ್ಚಿ ಪೂಜಿಸಲಾಗುವುದು. ಕಾರ್ತಿಕ ಸೋಮವಾರ ಈ ಕಾರ್ಯಗಳನ್ನು ಮಾಡಿದರೆ ತುಂಬಾ ಒಳ್ಳೆಯದು ಎಂಬುವುದು ಧಾರ್ಮಿಕ ನಂಬಿಕೆ:

ಏಕಾದಶ ರುದ್ರಾಭಿಷೇಕ
ಕಾರ್ತಿಕ ಸೋಮವಾರದಂದು ರುದ್ರಾಭಿಷೇಕ ಮಾಡಿದರೆ ಒಳ್ಳೆಯದು. ಮನೆಯಲ್ಲಿ ಶಿವಲಿಂಗ ಇಟ್ಟು ಪೂಜಿಸುವ ವಿಧಾನ ಗೊತ್ತಿಲ್ಲದವರು ಶಿವನ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿಸಬಹುದು.
ಈ ದಿನ ಮಾಡುವ ದೀಪ ದಾನಕ್ಕೂ ತುಂಬಾನೇ ಮಹತ್ವವಿದೆ:
ಈ ದಿನ ದೇವಾಲಯಕ್ಕೆ ದೀಪ ದಾನ ಅಂದರೆ ಹಣತೆಗೆ ಎಣ್ಣೆಯನ್ನು ದಾನ ಮಾಡಿ. ಈ ದಿನದಂದು ಹಣತೆ ಹಚ್ಚುವುದರಿಂದ ಗೊತ್ತಿಲ್ಲದೆ ಮಾಡಿದ ಪಾಲ ನಿವಾರಣೆಯಾಗುತ್ತದೆ, ಮೋಕ್ಷ ಸಿಗುವುದು. ಬದುಕಿನಲ್ಲಿ ಏನಾದರು ಸಮಸ್ಯೆ ಎದುರಿಸುತ್ತಿದ್ದರೆ ಅದು ನಿವಾರಣೆಯಾಗುವುದು ಎಂದು ನಂಬಲಾಗಿದೆ.
ಕಾರ್ತಿಕ ಸೋಮವಾರದ ಉಪವಾಸದ ಮಹತ್ವ
ಕಾರ್ತಿಕ ಸೋಮವಾರದಂದು ಉಪವಾಸವಿದ್ದು ಶಿವನ ಆರಾಧೆ ಮಾಡಲಾಗುವುದು, ಈ ರೀತಿ ಉಪವಾಸವಿದ್ದು ರುದ್ರಾಭಿಷೇಕ ಮಾಡಿದರೆ ಕಷ್ಟಗಳು ದೂರಾಗುವುದು, ನೀವು ಮನಸ್ಸಿನಲ್ಲಿ ಏನಾದರು ಅಂದುಕೊಂಡಿದ್ದರೆ ಅದು ನೆರವೇರುವುದು ಎಂದು ನಂಬಲಾಗಿದೆ. ಶಿವನನ್ನು ಬೆಂಕಿ ಸ್ವರೂಪದಲ್ಲಿ ಅಂದರೆ ಉರಿಯುತ್ತಿರುವ ಹಣತೆಯ ಸ್ವರೂಪದಲ್ಲಿ ಕಾಣಲಾಗುವುದು, ಹೀಗಾಗಿ ಮಣ್ಣನ ಹಣತೆಯಲ್ಲಿ ದೀಪ ಹಚ್ಚಿ ಆರಾಧನೆ ಮಾಡಲಾಗುವುದು.
ಕಾರ್ತಿಕ ಸೋಮವಾರ ವ್ರತ ಮಾಡುವುದರಿಂದ ದೊರೆಯುವ ಪ್ರಯೋಜನಗಳು
- ಕಾರ್ತಿಕ ಸೋಮವಾರ ವ್ರತ ಮಾಡುವುದರಿಂದ ಆಧ್ಯಾತ್ಮಿಕ ಒಲವು ಹೆಚ್ಚಾಗುತ್ತದೆ
- ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು, ಉಪವಾಸ ಮಾಡುವುದರಿಂದ ದೇಹವನ್ನು ಡಿಟಾಕ್ಸ್ ಮಾಡಲು ಸಹಕಾರಿ
- ಸಾಲ ಬಾಧೆಯಿಂದ ಮುಕ್ತರಾಗುತ್ತೇವೆ
- ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಬೆಳವಣಿಗೆ ಕಂಡು ಬರಲಿದೆ
- ಮನಸ್ಸಿಗೆ ನೆಮ್ಮದಿ ದೊರೆಯಲಿದೆ
- ನಾವು ತುಂಬಾ ಸಮಯದಿಂದ ಬಯಸುತ್ತಿದ್ದ ವಿಷಯ ನೆರವೇರಲಿದೆ.
ಕಾರ್ತಿಕ ಮಾಸದಲ್ಲಿ ಪ್ರತಿದಿನ ಸಂಜೆ ಈ ಮಂತ್ರ ಪಠಣೆ ಮಾಡಿ:
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಶಿವ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ
ಮಹಾದೇವಾಯ ಧೀಮಹಿ
ತನ್ನೋ ರುದ್ರ ಪ್ರಚೋದಯಾತ್
ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಶಿವ ಧ್ಯಾನ ಮಂತ್ರ:
ಕರ್ಚರಾಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವನ್ನಾಯಂಜಂ ವಾ ಮಾನಸಂ ವಾ ಪಾರದಂ|
ವಿಹಿತಂ ವಿಹಿತಂ ವಾ ಸರ್ವ ಮೇತತ್ ಕ್ಷಮಸ್ವ ಜಯ ಕರುಣಾಬ್ಧೇ ಶ್ರೀ ಮಹಾದೇವ ಶಂಭೋ||
ಮಹಾಮೃತ್ಯುಂಜಯ ಮಂತ್ರ:
ಓಂ ತ್ರಯಂಬಕಂ ಯಜಾಮಹೇ '
ಸುಗಂಧಿಂ ಪುಷ್ಠಿವಧನಂ
ಊರ್ವರುಕಮಿವ ಬಂಧನಾನ್
ಮೃತ್ಯೋರ್ಮುಕ್ಷೀಯ ಮಾಮೃತಾತ್
ಶಿವ ಮಂತ್ರ:
ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ
ಅಮೃತೇಶಾಯ ಸರ್ವಾಯ ಮಹಾದೇವಾಯ ತೇ ನಮಃ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications