Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕಾರ್ತಿಕ ಸೋಮವಾರ:ಪ್ರದೋಷ ಸಮಯದಲ್ಲಿ ಈ ರೀತಿ ಶಿವನ ಆರಾಧನೆ ಮಾಡಿದರೆ ಇಷ್ಟಾರ್ಥ ನೆರವೇರುವುದು
ಕಾರ್ತಿಕ ಮಾಸದಲ್ಲಿ ಪ್ರತಿಯೊಂದು ದಿನವೂ ಶಿವ ಪೂಜೆಗೆ ವಿಶೇಷವಾದ ದಿನ ಅದರಲ್ಲಿಯೂ ಕಾರ್ತಿಕ ಸೋಮವಾರ ಇನ್ನೂ ವಿಶೇಷ, ಕಾರ್ತಿಕ ಸೋಮವಾರದಂದು ಶಿವನಿಗೆ ಪೂಜೆ ಮಾಡುವುದರಿಂದ ಅದರಿಂದ ಸಿಗುವ ಪ್ರಯೋಜನನ ಹೆಚ್ಚಾಗುವುದು ಎಂಬುವುದು ಧಾರ್ಮಿಕ ನಂಬಿಕೆ.
ಕಾರ್ತಿಕ ಮಾಸದಲ್ಲಿ ಕಾರ್ತಿಕ ದೀಪವನ್ನು ಪ್ರದೋಷ ಸಮಯದಲ್ಲಿ ಹಚ್ಚಿ ಪೂಜಿಸಲಾಗುವುದು. ಕಾರ್ತಿಕ ಸೋಮವಾರ ಈ ಕಾರ್ಯಗಳನ್ನು ಮಾಡಿದರೆ ತುಂಬಾ ಒಳ್ಳೆಯದು ಎಂಬುವುದು ಧಾರ್ಮಿಕ ನಂಬಿಕೆ:

ಏಕಾದಶ ರುದ್ರಾಭಿಷೇಕ
ಕಾರ್ತಿಕ ಸೋಮವಾರದಂದು ರುದ್ರಾಭಿಷೇಕ ಮಾಡಿದರೆ ಒಳ್ಳೆಯದು. ಮನೆಯಲ್ಲಿ ಶಿವಲಿಂಗ ಇಟ್ಟು ಪೂಜಿಸುವ ವಿಧಾನ ಗೊತ್ತಿಲ್ಲದವರು ಶಿವನ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿಸಬಹುದು.
ಈ ದಿನ ಮಾಡುವ ದೀಪ ದಾನಕ್ಕೂ ತುಂಬಾನೇ ಮಹತ್ವವಿದೆ:
ಈ ದಿನ ದೇವಾಲಯಕ್ಕೆ ದೀಪ ದಾನ ಅಂದರೆ ಹಣತೆಗೆ ಎಣ್ಣೆಯನ್ನು ದಾನ ಮಾಡಿ. ಈ ದಿನದಂದು ಹಣತೆ ಹಚ್ಚುವುದರಿಂದ ಗೊತ್ತಿಲ್ಲದೆ ಮಾಡಿದ ಪಾಲ ನಿವಾರಣೆಯಾಗುತ್ತದೆ, ಮೋಕ್ಷ ಸಿಗುವುದು. ಬದುಕಿನಲ್ಲಿ ಏನಾದರು ಸಮಸ್ಯೆ ಎದುರಿಸುತ್ತಿದ್ದರೆ ಅದು ನಿವಾರಣೆಯಾಗುವುದು ಎಂದು ನಂಬಲಾಗಿದೆ.
ಕಾರ್ತಿಕ ಸೋಮವಾರದ ಉಪವಾಸದ ಮಹತ್ವ
ಕಾರ್ತಿಕ ಸೋಮವಾರದಂದು ಉಪವಾಸವಿದ್ದು ಶಿವನ ಆರಾಧೆ ಮಾಡಲಾಗುವುದು, ಈ ರೀತಿ ಉಪವಾಸವಿದ್ದು ರುದ್ರಾಭಿಷೇಕ ಮಾಡಿದರೆ ಕಷ್ಟಗಳು ದೂರಾಗುವುದು, ನೀವು ಮನಸ್ಸಿನಲ್ಲಿ ಏನಾದರು ಅಂದುಕೊಂಡಿದ್ದರೆ ಅದು ನೆರವೇರುವುದು ಎಂದು ನಂಬಲಾಗಿದೆ. ಶಿವನನ್ನು ಬೆಂಕಿ ಸ್ವರೂಪದಲ್ಲಿ ಅಂದರೆ ಉರಿಯುತ್ತಿರುವ ಹಣತೆಯ ಸ್ವರೂಪದಲ್ಲಿ ಕಾಣಲಾಗುವುದು, ಹೀಗಾಗಿ ಮಣ್ಣನ ಹಣತೆಯಲ್ಲಿ ದೀಪ ಹಚ್ಚಿ ಆರಾಧನೆ ಮಾಡಲಾಗುವುದು.
ಕಾರ್ತಿಕ ಸೋಮವಾರ ವ್ರತ ಮಾಡುವುದರಿಂದ ದೊರೆಯುವ ಪ್ರಯೋಜನಗಳು
- ಕಾರ್ತಿಕ ಸೋಮವಾರ ವ್ರತ ಮಾಡುವುದರಿಂದ ಆಧ್ಯಾತ್ಮಿಕ ಒಲವು ಹೆಚ್ಚಾಗುತ್ತದೆ
- ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು, ಉಪವಾಸ ಮಾಡುವುದರಿಂದ ದೇಹವನ್ನು ಡಿಟಾಕ್ಸ್ ಮಾಡಲು ಸಹಕಾರಿ
- ಸಾಲ ಬಾಧೆಯಿಂದ ಮುಕ್ತರಾಗುತ್ತೇವೆ
- ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಬೆಳವಣಿಗೆ ಕಂಡು ಬರಲಿದೆ
- ಮನಸ್ಸಿಗೆ ನೆಮ್ಮದಿ ದೊರೆಯಲಿದೆ
- ನಾವು ತುಂಬಾ ಸಮಯದಿಂದ ಬಯಸುತ್ತಿದ್ದ ವಿಷಯ ನೆರವೇರಲಿದೆ.
ಕಾರ್ತಿಕ ಮಾಸದಲ್ಲಿ ಪ್ರತಿದಿನ ಸಂಜೆ ಈ ಮಂತ್ರ ಪಠಣೆ ಮಾಡಿ:
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಶಿವ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ
ಮಹಾದೇವಾಯ ಧೀಮಹಿ
ತನ್ನೋ ರುದ್ರ ಪ್ರಚೋದಯಾತ್
ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಶಿವ ಧ್ಯಾನ ಮಂತ್ರ:
ಕರ್ಚರಾಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವನ್ನಾಯಂಜಂ ವಾ ಮಾನಸಂ ವಾ ಪಾರದಂ|
ವಿಹಿತಂ ವಿಹಿತಂ ವಾ ಸರ್ವ ಮೇತತ್ ಕ್ಷಮಸ್ವ ಜಯ ಕರುಣಾಬ್ಧೇ ಶ್ರೀ ಮಹಾದೇವ ಶಂಭೋ||
ಮಹಾಮೃತ್ಯುಂಜಯ ಮಂತ್ರ:
ಓಂ ತ್ರಯಂಬಕಂ ಯಜಾಮಹೇ '
ಸುಗಂಧಿಂ ಪುಷ್ಠಿವಧನಂ
ಊರ್ವರುಕಮಿವ ಬಂಧನಾನ್
ಮೃತ್ಯೋರ್ಮುಕ್ಷೀಯ ಮಾಮೃತಾತ್
ಶಿವ ಮಂತ್ರ:
ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ
ಅಮೃತೇಶಾಯ ಸರ್ವಾಯ ಮಹಾದೇವಾಯ ತೇ ನಮಃ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











