Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮಾರ್ಚ್ನಲ್ಲಿ ಈ 3 ರಾಶಿಗಳಿಗೆ ಪ್ರತಿ ಹೆಜ್ಜೆಯಲ್ಲಿಯೂ ಯಶಸ್ಸು ಗ್ಯಾರಂಟಿ, ಈ ರಾಶಿಗಳಲ್ಲಿ ಕೇಂದ್ರ ಯೋಗವಿದೆ
ಗ್ರಹಗತಿಗಳ ರಾಶಿ ಬದಲಾವಣೆ ಪ್ರತಿಯೊಂದು ರಾಶಿಯ ಮೇಲೂ ಪ್ರಭಾವ ಬೀರುತ್ತದೆ, ಹಾಗಾಗಿ ಗ್ರಹಗಳ ಸಂಚಾರ ವೈದಿಕ ದೃಷ್ಟಿಯಿಂದ ಈ ವೈದಿಕ ದೃಷ್ಟಿಯಿಂದ ತುಂಬಾನೇ ಮುಖ್ಯವಾಗಿರುತ್ತದೆ. ಮಾರ್ಚ್ 2ಕ್ಕೆ ಸೂರ್ಯ ಮತ್ತು ಗುರು 90 ಡಿಗ್ರಿಯಲ್ಲಿರುತ್ತದೆ, ಇದರಿಂದಾಗಿ ಅತ್ಯಂತ ಶುಭಯೋಗ ಉಂಟಾಗಲಿದೆ, ಈ ಎರಡು ರಾಶಿಯಿಂದಾಗಿ ಕೇಂದ್ರ ಯೋಗ ಉಂಟಾಗುತ್ತದೆ.
ಈ ಕೇಂದ್ರ ಯೋಗ ಕೆಲವೊಂದು ರಾಶಿಗಳಿಗೆ ತುಂಬಾನೇ ಶುಭವಾಗಿದೆ, ಈ ಕೇಂದ್ರ ಯೋಗದಿಂದಾಗಿ ಬದುಕಿನಲ್ಲಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತಾರೆ, ಆ ರಾಶಿಗಳೆಂದರೆ:

ವೃಷಭ ರಾಶಿ
ಈ ಯೋಗದ ಬಲದಿಂದಾಗಿ ಈ ಅವಧಿಯಲ್ಲ ಅಪೂರ್ಣವಾದ ಕೆಲಸ ಪೂರ್ಣವಾಗಲಿದೆ, ನಿಮ್ಮ ಪ್ರಯತ್ನಕ್ಕೆ ಉತ್ತಮ ಲಾಭ ದೊರೆಯಲಿದೆ. ಕೆಲಸ ಕಾರ್ಯಗಳಿಗೆ ಉತ್ತಮವಾಗಿರಲಿದೆ, ವೃತ್ತಿ ಬದುಕಿನಲ್ಲಿ ಹೊಸ ಜವಾಬ್ದಾರಿ ದೊರೆಯಲಿದೆ, ವೃತ್ತಿ ಬದುಕಿನಲ್ಲಿ ಬಡ್ತಿ ದೊರೆಯಲಿದೆ. ಈ ಅವಧಿಯಲ್ಲಿ ನಿಮಗೆ ಏನಾದರು ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಯೋಗ ಬರಬಹುದು, ವಿವಾಹಿತರ ವೈವಾಹಿಕ ಬದುಕು ಚೆನ್ನಾಗಿರಲಿದೆ. ಇನ್ನು ಕೆಲಸದಲ್ಲಿ ಬದಲಾವಣೆ ಮಾಡಬೇಕೆಂದಿದ್ದರೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಮಿಥುನ ರಾಶಿ
ಸೂರ್ಯ ಮತ್ತು ಗುರು ಸಂಯೋಗ ಮಿಥುನ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ಪ್ರತಿಫಲ ದೊರೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುತ್ತಿರುವವರು ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಬಡ್ತಿ ದೊರೆಯುತ್ತದೆ, ವ್ಯಾಪಾರಸ್ಥರಿಗೆ ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ. ವೃತ್ತಿ ಜೀವನಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಅನುಭವಿಗಳ ಅಭಿಪ್ರಾಯ ಪಡೆದು ತೆಗೆದುಕೊಳ್ಳಿ. ಒಟ್ಟಿನಲ್ಲಿ ಈ ಅವಧಿ ಎಲ್ಲಾ ರೀತಿಯಿಂದಲೂ ನಿಮಗೆ ಒಳ್ಳೆಯದಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಕೇಂದ್ರ ಯೋಗದಿಂದ ಕುಟುಂಬದ ದೃಷ್ಟಿಯಿಂದ ತುಂಬಾ ಉತ್ತಮವಾಗಿರಲಿದೆ, ಹೂಡಿಕೆಯಿಂದ ನೀವು ಉತ್ತಮ ಲಾಭ ಪಡೆಯುತ್ತೀರಿ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಸಿಗಲಿದೆ, ನಿಮ್ಮ ಸಂಬಳ ಹೆಚ್ಚಾಗಲಿದೆ, ವ್ಯಾಪಾರಿಗಳು ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ.
ಕೇಂದ್ರ ಯೋಗದಿಂದ ದೊರೆಯುವ ಪ್ರಯೋಜನಗಳು
ವೃತ್ತಿ ಜೀವನಕ್ಕೆ ಒಳ್ಳೆಯದು
ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ, ವೃತ್ತಿ ಜೀವನದಲ್ಲಿ ಪ್ರಗತಿ ಪಡೆಯಲು ಸಾಧ್ಯವಾಗಲಿದೆ.
ಆರ್ಥಿಕವಾಗಿ ಒಳ್ಳೆಯದು
ಕೇಂದ್ರ ಯೋಗ ಆರ್ಥಿಕ ಪ್ರಯೋಜನ ನೀಡಲಿದೆ, ಆರ್ಥಿಕ ಕಾರಣದಿಂದ ಬಾಕಿಯುಳಿದ ಕಾರ್ಯಗಳು ಈ ಅವಧಿಯಲ್ಲಿ ಪೂರ್ಣವಾಗಲಿದೆ.
ಸಾಮಾಜಿಕವಾಗಿ ನಿಮ್ಮ ಖ್ಯಾತಿ ಹೆಚ್ಚಾಗಲಿದೆ
ಈ ಯೋಗದ ಬಲದಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ, ಆರ್ಥಿಕವಾಗಿ ಕೂಡ ಬೆಳವಣಿಗೆ ಕಾಣುತ್ತೀರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications