Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಾಶಿವರಾತ್ರಿ ಬಳಿಕ ಈ 4 ರಾಶಿಗಳ ಬದುಕಿನಲ್ಲಿ ಕಾಣುವಿರಿ ಧನಾತ್ಮಕ ಬದಲಾವಣೆ
ಹಿಂದೂಗಳ ಬಹುದೊಡ್ಡ ಹಬ್ಬ ಮಹಾಶಿವರಾತ್ರಿ. ಪ್ರತಿ ತಿಂಗಳು ಶಿವರಾತ್ರಿ ಹಬ್ಬ ಬರುತ್ತದೆ, ಆದರೆ ಮಹಾಶಿವರಾತ್ರಿ ಹಬ್ಬವನ್ನು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಆಚರಿಸಲಾಗುವುದು. ಪರಶಿವನು ಪಾರ್ವತಿಯನ್ನು ವಿವಾಹವಾದ ದಿನ, ಈ ದಿನ ವೈದಿಕ ದೃಷ್ಟಿಯಿಂದಲೂ ತುಂಬಾನೇ ಮಹತ್ವವಾದ ದಿನ, ಈ ದಿನ ಶಿವ ಭಕ್ತರು ಶಿವನಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಶಿವನ ಕೃಪೆ ದ್ವಾದಶ ರಾಶಿಗಳ ಮೇಲೆ ಇರಲಿದೆ, ಆದರೆ ಕೆಲವೊಂದು ರಾಶಿಗಳ ಮೇಲೆ ವಿಶೇಷ ಕೃಪೆ ಇರಲಿದೆ.

ಮೇಷ ರಾಶಿ
ಮೇಷ ರಾಶಿಯವರು ಈ ಶಿವರಾತ್ರಿಯ ಬಳಿಕ ತಮ್ಮ ಬದುಕಿನಲ್ಲಿ ಉತ್ತಮ ಧನ ಲಾಭ ಪಡೆಯುತ್ತೀರಿ. ಈ ಶಿವರಾತ್ರಿ ನಿಮ್ಮ ಬದುಕಿನಲ್ಲಿ ವಿಶೇಷವಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಉತ್ತಮ ಬೆಳವಣಿಗೆ ಪಡೆಯುತ್ತೀರಿ, ನಿಮ್ಮ ಬದುಕಿನಲ್ಲಿರುವ ಕೆಲ ಸವಾಲುಗಳು, ಅಡೆತಡೆಗಳು ದೂರಾಗಲಿದೆ, ವೈಯಕ್ತಿಕ ಬದುಕಿನಲ್ಲಿರುವ ಸಮಸ್ಯೆ ಕೂಡ ಕೊನೆಯಾಗುವುದು, ಆರೋಗ್ಯ ಸಂಬಂಧಿ ಸಮಸ್ಯೆಯಲ್ಲಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ, ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಈ ದಿನ ನೀವು ಶಿವನಿಗೆ ರುದ್ರಾಭಿಷೇಕ ಮಾಡಿಸಿ, ನಿಮ್ಮ ಬದುಕಿನಲ್ಲಿರುವ ಸವಾಲುಗಳು ದೂರಾಗಲಿದೆ, ನಿಮ್ಮ ಸಂಪತ್ತು ಹೆಚ್ಚಾಗಲಿದೆ, ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಶಿವನ ಕೃಪೆಯಿಂದ ನಿಮ್ಮ ಬದುಕಿನಲ್ಲಿ ಸಂಪತ್ತು, ಸಮೃದ್ದಿ ಹೆಚ್ಚಾಗಲಿದೆ.
ಮಕರ ರಾಶಿ
ಮಕರ ರಾಶಿಯವರು ಕೂಡ ಶಿವರಾತ್ರಿಯ ಬಳಿಕ ತಮ್ಮ ಬದುಕಿನಲ್ಲಿಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಬದುಕಿನಲ್ಲಿ ಈಗ ಏನಾದರು ಸಮಸ್ಯೆ ಎದುರಿಸುತ್ತಿದ್ದರೆ ಶಿವರಾತ್ರಿಯ ಬಳಿಕ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಕುಟುಂಬ ಬದುಕು ತುಂಬಾನೇ ಚೆನ್ನಾಗಿರಲಿದೆ, ಶಿವರಾತ್ರಿ ಶಿವನಿಗೆ ರುದ್ರಾಭಿಷೇಕ ಮಾಡಿಸಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಶಿವರಾತ್ರಿ ತುಂಬಾ ವಿಶೇಷವಾಗಿರಲಿದೆ, ಈ ದಿನದಂದು ನೀವು ಉಪವಾಸವಿದ್ದು ಶಿವನ ಆರಾಧನೆ ಮಾಡಿ, ಹೀಗೆ ಮಾಡುವುದರಿಂದ ನೀವು ಕೆಲಸದಲ್ಲಿ ಉತ್ತಮ ಪ್ರಗತಿ ಕಾಣುತ್ತೀರಿ. ಈ ದಿನದಂದು ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಧರ್ಮ ಮಾಡಿ ಇದರಿಂದ ಕೂಡ ಉತ್ತಮವಾಗುವುದು.
ಶಿವರಾತ್ರಿಯಂದು ಈ ಪರಿಹಾರ ಮಾಡುವುದು 12 ರಾಶಿಗಳಿಗೂ ಒಳ್ಳೆಯದು
* ಶಿವ ದೇವಾಲಯಕ್ಕೆ ಹೋಗಿ ದೀಪ ಹಚ್ಚಿ
* ಶಿವ ಲಿಂಗಕ್ಕೆ ಜಲಾಭಿಷೇಕ, ಜೇನು ತುಪ್ಪ, ಹಾಲು, ಮೊಸರು, ತುಪ್ಪ ಇವುಗಳಿಂದ ಅಭಿಷೇಕ ಮಾಡಿಸಿ
* ಈ ದಿನ ಹನುಮಾನ್ ಚಾಲೀಸಾ ಪಠಿಸಿ
* ಈ ದಿನ ನಿಮ್ಮ ಶಕ್ತಿಗೆ ಅನುಸಾರ ದಾನ ಧರ್ಮ ಮಾಡಿ.
* ಮಹಿಳೆಯರಿಗೆ ಹಸಿರು ಬಳೆ, ಸೌಂದರ್ಯವರ್ಧಕ ವಸ್ತುಗಳನ್ನು ದಾನ ಮಾಡಿ
* ಶಿವ ಮಂತ್ರಗಳನ್ನು ಪಠಿಸಿ
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications