Latest Updates
-
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಹಾಶಿವರಾತ್ರಿ ಬಳಿಕ ಈ 4 ರಾಶಿಗಳ ಬದುಕಿನಲ್ಲಿ ಕಾಣುವಿರಿ ಧನಾತ್ಮಕ ಬದಲಾವಣೆ
ಹಿಂದೂಗಳ ಬಹುದೊಡ್ಡ ಹಬ್ಬ ಮಹಾಶಿವರಾತ್ರಿ. ಪ್ರತಿ ತಿಂಗಳು ಶಿವರಾತ್ರಿ ಹಬ್ಬ ಬರುತ್ತದೆ, ಆದರೆ ಮಹಾಶಿವರಾತ್ರಿ ಹಬ್ಬವನ್ನು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಆಚರಿಸಲಾಗುವುದು. ಪರಶಿವನು ಪಾರ್ವತಿಯನ್ನು ವಿವಾಹವಾದ ದಿನ, ಈ ದಿನ ವೈದಿಕ ದೃಷ್ಟಿಯಿಂದಲೂ ತುಂಬಾನೇ ಮಹತ್ವವಾದ ದಿನ, ಈ ದಿನ ಶಿವ ಭಕ್ತರು ಶಿವನಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಶಿವನ ಕೃಪೆ ದ್ವಾದಶ ರಾಶಿಗಳ ಮೇಲೆ ಇರಲಿದೆ, ಆದರೆ ಕೆಲವೊಂದು ರಾಶಿಗಳ ಮೇಲೆ ವಿಶೇಷ ಕೃಪೆ ಇರಲಿದೆ.

ಮೇಷ ರಾಶಿ
ಮೇಷ ರಾಶಿಯವರು ಈ ಶಿವರಾತ್ರಿಯ ಬಳಿಕ ತಮ್ಮ ಬದುಕಿನಲ್ಲಿ ಉತ್ತಮ ಧನ ಲಾಭ ಪಡೆಯುತ್ತೀರಿ. ಈ ಶಿವರಾತ್ರಿ ನಿಮ್ಮ ಬದುಕಿನಲ್ಲಿ ವಿಶೇಷವಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಉತ್ತಮ ಬೆಳವಣಿಗೆ ಪಡೆಯುತ್ತೀರಿ, ನಿಮ್ಮ ಬದುಕಿನಲ್ಲಿರುವ ಕೆಲ ಸವಾಲುಗಳು, ಅಡೆತಡೆಗಳು ದೂರಾಗಲಿದೆ, ವೈಯಕ್ತಿಕ ಬದುಕಿನಲ್ಲಿರುವ ಸಮಸ್ಯೆ ಕೂಡ ಕೊನೆಯಾಗುವುದು, ಆರೋಗ್ಯ ಸಂಬಂಧಿ ಸಮಸ್ಯೆಯಲ್ಲಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ, ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಈ ದಿನ ನೀವು ಶಿವನಿಗೆ ರುದ್ರಾಭಿಷೇಕ ಮಾಡಿಸಿ, ನಿಮ್ಮ ಬದುಕಿನಲ್ಲಿರುವ ಸವಾಲುಗಳು ದೂರಾಗಲಿದೆ, ನಿಮ್ಮ ಸಂಪತ್ತು ಹೆಚ್ಚಾಗಲಿದೆ, ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಶಿವನ ಕೃಪೆಯಿಂದ ನಿಮ್ಮ ಬದುಕಿನಲ್ಲಿ ಸಂಪತ್ತು, ಸಮೃದ್ದಿ ಹೆಚ್ಚಾಗಲಿದೆ.
ಮಕರ ರಾಶಿ
ಮಕರ ರಾಶಿಯವರು ಕೂಡ ಶಿವರಾತ್ರಿಯ ಬಳಿಕ ತಮ್ಮ ಬದುಕಿನಲ್ಲಿಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಬದುಕಿನಲ್ಲಿ ಈಗ ಏನಾದರು ಸಮಸ್ಯೆ ಎದುರಿಸುತ್ತಿದ್ದರೆ ಶಿವರಾತ್ರಿಯ ಬಳಿಕ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಕುಟುಂಬ ಬದುಕು ತುಂಬಾನೇ ಚೆನ್ನಾಗಿರಲಿದೆ, ಶಿವರಾತ್ರಿ ಶಿವನಿಗೆ ರುದ್ರಾಭಿಷೇಕ ಮಾಡಿಸಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಶಿವರಾತ್ರಿ ತುಂಬಾ ವಿಶೇಷವಾಗಿರಲಿದೆ, ಈ ದಿನದಂದು ನೀವು ಉಪವಾಸವಿದ್ದು ಶಿವನ ಆರಾಧನೆ ಮಾಡಿ, ಹೀಗೆ ಮಾಡುವುದರಿಂದ ನೀವು ಕೆಲಸದಲ್ಲಿ ಉತ್ತಮ ಪ್ರಗತಿ ಕಾಣುತ್ತೀರಿ. ಈ ದಿನದಂದು ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಧರ್ಮ ಮಾಡಿ ಇದರಿಂದ ಕೂಡ ಉತ್ತಮವಾಗುವುದು.
ಶಿವರಾತ್ರಿಯಂದು ಈ ಪರಿಹಾರ ಮಾಡುವುದು 12 ರಾಶಿಗಳಿಗೂ ಒಳ್ಳೆಯದು
* ಶಿವ ದೇವಾಲಯಕ್ಕೆ ಹೋಗಿ ದೀಪ ಹಚ್ಚಿ
* ಶಿವ ಲಿಂಗಕ್ಕೆ ಜಲಾಭಿಷೇಕ, ಜೇನು ತುಪ್ಪ, ಹಾಲು, ಮೊಸರು, ತುಪ್ಪ ಇವುಗಳಿಂದ ಅಭಿಷೇಕ ಮಾಡಿಸಿ
* ಈ ದಿನ ಹನುಮಾನ್ ಚಾಲೀಸಾ ಪಠಿಸಿ
* ಈ ದಿನ ನಿಮ್ಮ ಶಕ್ತಿಗೆ ಅನುಸಾರ ದಾನ ಧರ್ಮ ಮಾಡಿ.
* ಮಹಿಳೆಯರಿಗೆ ಹಸಿರು ಬಳೆ, ಸೌಂದರ್ಯವರ್ಧಕ ವಸ್ತುಗಳನ್ನು ದಾನ ಮಾಡಿ
* ಶಿವ ಮಂತ್ರಗಳನ್ನು ಪಠಿಸಿ
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications