Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮಕರ ಸಂಕ್ರಾಂತಿ: ಈ ದಿನ ಯಾವ ವಸ್ತು ಮನೆಗೆ ತಂದರೆ ಒಳ್ಳೆಯದು, ಈ ಸೂರ್ಯ ಮಂತ್ರಗಳನ್ನು ಪಠಿಸಿ
ಈ ವರ್ಷ ಜನವರಿ 15ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುವುದು. ಮಕರ ಸಂಕ್ರಾಂತಿ ಪಂಚಾಂಗದ ಪ್ರಕಾರ ಮಹತ್ವದ ದಿನ, ಏಕೆಂದರೆ ಆ ದಿನದಿಂದ ಸೂರ್ಯ ತನ್ನ ಪಥ ಬದಲಾಯಿಸಲಿದೆ, ಮಕರ ಸಂಕ್ರಾಂತಿಯಿಂದ ಉತ್ತರಾಯಣ ಕಾಲ ಪ್ರಾರಂಭ.
ಮಕರ ಸಂಕ್ರಾಂತಿಯಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು, ಈ ದಿನ ಶಬರಿಮಲೆಯಲ್ಲಿ ಮಕರ ಜ್ಯೋತಿ ಕಾಣಿಸಿಕೊಳ್ಳುವುದರಿಂದ ಈ ದಿನ ಅಯ್ಯಪ್ಪ ಭಕ್ತರಿಗೆ ತುಂಬಾನೇ ವಿಶೇಷವಾಗಿದೆ. ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:
ಮಕರ ಸಂಕ್ರಾಂತಿ ದಿನ ಏನು ಮಾಡಬೇಕು?
* ಈ ದಿನ ನೀವು ಸೂರ್ಯ ದೇವನನ್ನು ಆರಾಧಿಸಬೇಕು. ಬ್ರಹ್ಮ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರಗಳನ್ನು ಪಠಿಸಿ.

ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಸೂರ್ಯ ಗಾಯತ್ರಿ ಮಂತ್ರ:
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
ಸೂರ್ಯ ಬೀಜ ಮಂತ್ರ:
ಓಂ ಹ್ರಾಂ ಹ್ರೀಂ ಹ್ರೌಂ ಸಹ ಸೂರ್ಯಾಯ ನಮಃ
ಆದಿತ್ಯ ಹೃದಯಂ ಮಂತ್ರ:
ಆದಿತ್ಯ ಹೃದಯ ಪುಣ್ಯಂ ಸರ್ವ ಶತ್ರು ವಿನಾಶನಂ
ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಂ ಶಿವಂ
* ಈ ದಿನ ಹಳದಿ ಬಟ್ಟೆಯನ್ನು ಧರಿಸುವುದು ಒಳ್ಳೆಯದು.
* ಈ ದಿನ ಉಪವಾಸವಿದ್ದು ವ್ರತ ಮಾಡಿದರೆ ಇನ್ನೂ ಒಳ್ಳೆಯದು.
* ಬ್ರಾಹ್ಮಣರಿಗೆ ದಕ್ಷಿಣೆ ನೀಡಿ, ಬಡವರಿಗೆ ದಾನ ಮಾಡಿ. ಈ ದಿನ ಹುಗ್ಗಿ ತಯಾರಿಸಿ ದೇವರಿಗೆ ನೈವೇದ್ಯವಾಗಿ ಅರ್ಪಿಸಿ.
* ಸೂರ್ಯ ಎಳ್ಳು, ಬೆಲ್ಲವನ್ನು ಅರ್ಪಿಸಿ.
* ಈ ದಿನ ಎಳ್ಳು, ಬೆಲ್ಲ ದಾನ ಮಾಡುವುದು ಒಳ್ಳೆಯದು
* ಎಳ್ಳು- ಬೆಲ್ಲ ಸವಿಯಿರಿ
ಮಕರ ಸಂಕ್ರಾಂತಿಯಂದು ಏನು ಮಾಡಬಾರದು?
* ಮಾಂಸಾಹಾರ ಸೇವನೆ ಮಾಡಬಾರದು
* ಯಾರಿಗೂ ನೋವುಂಟು ಮಾಡಬಾರದು
* ಮನೆಗೆ ಬಂದವರನ್ನು ಇಂದು ಬರಿಗೈನಲ್ಲಿ ಕಳುಹಿಸಬಾರದು
ಈ ದಿನ ಯಾವ ಕಾರ್ಯಗಳನ್ನು ಮಾಡಿದರೆ ಒಳ್ಳೆಯದು
* ಈ ದಿನ ಮನೆಗೆ ಹೊಸ ಪೊರಕೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
* ಹಿರಿಯರ ಆಶೀರ್ವಾದ ಪಡೆಯಿರಿ
* ಯಾರಿಗೆ ಅವಶ್ಯಕತೆ ಇದೆಯೋ ಅವರಿಗೆ ದಾನ ಮಾಡಿ
* ಈ ದಿನ ಹುಗ್ಗಿ ಅಥವಾ ಪೊಂಗಲ್ ಸವಿಯಿರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
