Latest Updates
-
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು?
ಮಕರ ಸಂಕ್ರಾಂತಿ: ಈ ದಿನ ಯಾವ ವಸ್ತು ಮನೆಗೆ ತಂದರೆ ಒಳ್ಳೆಯದು, ಈ ಸೂರ್ಯ ಮಂತ್ರಗಳನ್ನು ಪಠಿಸಿ
ಈ ವರ್ಷ ಜನವರಿ 15ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುವುದು. ಮಕರ ಸಂಕ್ರಾಂತಿ ಪಂಚಾಂಗದ ಪ್ರಕಾರ ಮಹತ್ವದ ದಿನ, ಏಕೆಂದರೆ ಆ ದಿನದಿಂದ ಸೂರ್ಯ ತನ್ನ ಪಥ ಬದಲಾಯಿಸಲಿದೆ, ಮಕರ ಸಂಕ್ರಾಂತಿಯಿಂದ ಉತ್ತರಾಯಣ ಕಾಲ ಪ್ರಾರಂಭ.
ಮಕರ ಸಂಕ್ರಾಂತಿಯಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು, ಈ ದಿನ ಶಬರಿಮಲೆಯಲ್ಲಿ ಮಕರ ಜ್ಯೋತಿ ಕಾಣಿಸಿಕೊಳ್ಳುವುದರಿಂದ ಈ ದಿನ ಅಯ್ಯಪ್ಪ ಭಕ್ತರಿಗೆ ತುಂಬಾನೇ ವಿಶೇಷವಾಗಿದೆ. ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:
ಮಕರ ಸಂಕ್ರಾಂತಿ ದಿನ ಏನು ಮಾಡಬೇಕು?
* ಈ ದಿನ ನೀವು ಸೂರ್ಯ ದೇವನನ್ನು ಆರಾಧಿಸಬೇಕು. ಬ್ರಹ್ಮ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರಗಳನ್ನು ಪಠಿಸಿ.

ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಸೂರ್ಯ ಗಾಯತ್ರಿ ಮಂತ್ರ:
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
ಸೂರ್ಯ ಬೀಜ ಮಂತ್ರ:
ಓಂ ಹ್ರಾಂ ಹ್ರೀಂ ಹ್ರೌಂ ಸಹ ಸೂರ್ಯಾಯ ನಮಃ
ಆದಿತ್ಯ ಹೃದಯಂ ಮಂತ್ರ:
ಆದಿತ್ಯ ಹೃದಯ ಪುಣ್ಯಂ ಸರ್ವ ಶತ್ರು ವಿನಾಶನಂ
ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಂ ಶಿವಂ
* ಈ ದಿನ ಹಳದಿ ಬಟ್ಟೆಯನ್ನು ಧರಿಸುವುದು ಒಳ್ಳೆಯದು.
* ಈ ದಿನ ಉಪವಾಸವಿದ್ದು ವ್ರತ ಮಾಡಿದರೆ ಇನ್ನೂ ಒಳ್ಳೆಯದು.
* ಬ್ರಾಹ್ಮಣರಿಗೆ ದಕ್ಷಿಣೆ ನೀಡಿ, ಬಡವರಿಗೆ ದಾನ ಮಾಡಿ. ಈ ದಿನ ಹುಗ್ಗಿ ತಯಾರಿಸಿ ದೇವರಿಗೆ ನೈವೇದ್ಯವಾಗಿ ಅರ್ಪಿಸಿ.
* ಸೂರ್ಯ ಎಳ್ಳು, ಬೆಲ್ಲವನ್ನು ಅರ್ಪಿಸಿ.
* ಈ ದಿನ ಎಳ್ಳು, ಬೆಲ್ಲ ದಾನ ಮಾಡುವುದು ಒಳ್ಳೆಯದು
* ಎಳ್ಳು- ಬೆಲ್ಲ ಸವಿಯಿರಿ
ಮಕರ ಸಂಕ್ರಾಂತಿಯಂದು ಏನು ಮಾಡಬಾರದು?
* ಮಾಂಸಾಹಾರ ಸೇವನೆ ಮಾಡಬಾರದು
* ಯಾರಿಗೂ ನೋವುಂಟು ಮಾಡಬಾರದು
* ಮನೆಗೆ ಬಂದವರನ್ನು ಇಂದು ಬರಿಗೈನಲ್ಲಿ ಕಳುಹಿಸಬಾರದು
ಈ ದಿನ ಯಾವ ಕಾರ್ಯಗಳನ್ನು ಮಾಡಿದರೆ ಒಳ್ಳೆಯದು
* ಈ ದಿನ ಮನೆಗೆ ಹೊಸ ಪೊರಕೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
* ಹಿರಿಯರ ಆಶೀರ್ವಾದ ಪಡೆಯಿರಿ
* ಯಾರಿಗೆ ಅವಶ್ಯಕತೆ ಇದೆಯೋ ಅವರಿಗೆ ದಾನ ಮಾಡಿ
* ಈ ದಿನ ಹುಗ್ಗಿ ಅಥವಾ ಪೊಂಗಲ್ ಸವಿಯಿರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











