Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಮಕರ ಸಂಕ್ರಾಂತಿ: ಈ ದಿನ ಯಾವ ವಸ್ತು ಮನೆಗೆ ತಂದರೆ ಒಳ್ಳೆಯದು, ಈ ಸೂರ್ಯ ಮಂತ್ರಗಳನ್ನು ಪಠಿಸಿ
ಈ ವರ್ಷ ಜನವರಿ 15ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುವುದು. ಮಕರ ಸಂಕ್ರಾಂತಿ ಪಂಚಾಂಗದ ಪ್ರಕಾರ ಮಹತ್ವದ ದಿನ, ಏಕೆಂದರೆ ಆ ದಿನದಿಂದ ಸೂರ್ಯ ತನ್ನ ಪಥ ಬದಲಾಯಿಸಲಿದೆ, ಮಕರ ಸಂಕ್ರಾಂತಿಯಿಂದ ಉತ್ತರಾಯಣ ಕಾಲ ಪ್ರಾರಂಭ.
ಮಕರ ಸಂಕ್ರಾಂತಿಯಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು, ಈ ದಿನ ಶಬರಿಮಲೆಯಲ್ಲಿ ಮಕರ ಜ್ಯೋತಿ ಕಾಣಿಸಿಕೊಳ್ಳುವುದರಿಂದ ಈ ದಿನ ಅಯ್ಯಪ್ಪ ಭಕ್ತರಿಗೆ ತುಂಬಾನೇ ವಿಶೇಷವಾಗಿದೆ. ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:
ಮಕರ ಸಂಕ್ರಾಂತಿ ದಿನ ಏನು ಮಾಡಬೇಕು?
* ಈ ದಿನ ನೀವು ಸೂರ್ಯ ದೇವನನ್ನು ಆರಾಧಿಸಬೇಕು. ಬ್ರಹ್ಮ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರಗಳನ್ನು ಪಠಿಸಿ.

ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಸೂರ್ಯ ಗಾಯತ್ರಿ ಮಂತ್ರ:
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
ಸೂರ್ಯ ಬೀಜ ಮಂತ್ರ:
ಓಂ ಹ್ರಾಂ ಹ್ರೀಂ ಹ್ರೌಂ ಸಹ ಸೂರ್ಯಾಯ ನಮಃ
ಆದಿತ್ಯ ಹೃದಯಂ ಮಂತ್ರ:
ಆದಿತ್ಯ ಹೃದಯ ಪುಣ್ಯಂ ಸರ್ವ ಶತ್ರು ವಿನಾಶನಂ
ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಂ ಶಿವಂ
* ಈ ದಿನ ಹಳದಿ ಬಟ್ಟೆಯನ್ನು ಧರಿಸುವುದು ಒಳ್ಳೆಯದು.
* ಈ ದಿನ ಉಪವಾಸವಿದ್ದು ವ್ರತ ಮಾಡಿದರೆ ಇನ್ನೂ ಒಳ್ಳೆಯದು.
* ಬ್ರಾಹ್ಮಣರಿಗೆ ದಕ್ಷಿಣೆ ನೀಡಿ, ಬಡವರಿಗೆ ದಾನ ಮಾಡಿ. ಈ ದಿನ ಹುಗ್ಗಿ ತಯಾರಿಸಿ ದೇವರಿಗೆ ನೈವೇದ್ಯವಾಗಿ ಅರ್ಪಿಸಿ.
* ಸೂರ್ಯ ಎಳ್ಳು, ಬೆಲ್ಲವನ್ನು ಅರ್ಪಿಸಿ.
* ಈ ದಿನ ಎಳ್ಳು, ಬೆಲ್ಲ ದಾನ ಮಾಡುವುದು ಒಳ್ಳೆಯದು
* ಎಳ್ಳು- ಬೆಲ್ಲ ಸವಿಯಿರಿ
ಮಕರ ಸಂಕ್ರಾಂತಿಯಂದು ಏನು ಮಾಡಬಾರದು?
* ಮಾಂಸಾಹಾರ ಸೇವನೆ ಮಾಡಬಾರದು
* ಯಾರಿಗೂ ನೋವುಂಟು ಮಾಡಬಾರದು
* ಮನೆಗೆ ಬಂದವರನ್ನು ಇಂದು ಬರಿಗೈನಲ್ಲಿ ಕಳುಹಿಸಬಾರದು
ಈ ದಿನ ಯಾವ ಕಾರ್ಯಗಳನ್ನು ಮಾಡಿದರೆ ಒಳ್ಳೆಯದು
* ಈ ದಿನ ಮನೆಗೆ ಹೊಸ ಪೊರಕೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
* ಹಿರಿಯರ ಆಶೀರ್ವಾದ ಪಡೆಯಿರಿ
* ಯಾರಿಗೆ ಅವಶ್ಯಕತೆ ಇದೆಯೋ ಅವರಿಗೆ ದಾನ ಮಾಡಿ
* ಈ ದಿನ ಹುಗ್ಗಿ ಅಥವಾ ಪೊಂಗಲ್ ಸವಿಯಿರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications