Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಮಕರ ಸಂಕ್ರಾಂತಿ: ಈ ದಿನ ಯಾವ ವಸ್ತು ಮನೆಗೆ ತಂದರೆ ಒಳ್ಳೆಯದು, ಈ ಸೂರ್ಯ ಮಂತ್ರಗಳನ್ನು ಪಠಿಸಿ
ಈ ವರ್ಷ ಜನವರಿ 15ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುವುದು. ಮಕರ ಸಂಕ್ರಾಂತಿ ಪಂಚಾಂಗದ ಪ್ರಕಾರ ಮಹತ್ವದ ದಿನ, ಏಕೆಂದರೆ ಆ ದಿನದಿಂದ ಸೂರ್ಯ ತನ್ನ ಪಥ ಬದಲಾಯಿಸಲಿದೆ, ಮಕರ ಸಂಕ್ರಾಂತಿಯಿಂದ ಉತ್ತರಾಯಣ ಕಾಲ ಪ್ರಾರಂಭ.
ಮಕರ ಸಂಕ್ರಾಂತಿಯಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು, ಈ ದಿನ ಶಬರಿಮಲೆಯಲ್ಲಿ ಮಕರ ಜ್ಯೋತಿ ಕಾಣಿಸಿಕೊಳ್ಳುವುದರಿಂದ ಈ ದಿನ ಅಯ್ಯಪ್ಪ ಭಕ್ತರಿಗೆ ತುಂಬಾನೇ ವಿಶೇಷವಾಗಿದೆ. ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:
ಮಕರ ಸಂಕ್ರಾಂತಿ ದಿನ ಏನು ಮಾಡಬೇಕು?
* ಈ ದಿನ ನೀವು ಸೂರ್ಯ ದೇವನನ್ನು ಆರಾಧಿಸಬೇಕು. ಬ್ರಹ್ಮ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರಗಳನ್ನು ಪಠಿಸಿ.

ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಸೂರ್ಯ ಗಾಯತ್ರಿ ಮಂತ್ರ:
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
ಸೂರ್ಯ ಬೀಜ ಮಂತ್ರ:
ಓಂ ಹ್ರಾಂ ಹ್ರೀಂ ಹ್ರೌಂ ಸಹ ಸೂರ್ಯಾಯ ನಮಃ
ಆದಿತ್ಯ ಹೃದಯಂ ಮಂತ್ರ:
ಆದಿತ್ಯ ಹೃದಯ ಪುಣ್ಯಂ ಸರ್ವ ಶತ್ರು ವಿನಾಶನಂ
ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಂ ಶಿವಂ
* ಈ ದಿನ ಹಳದಿ ಬಟ್ಟೆಯನ್ನು ಧರಿಸುವುದು ಒಳ್ಳೆಯದು.
* ಈ ದಿನ ಉಪವಾಸವಿದ್ದು ವ್ರತ ಮಾಡಿದರೆ ಇನ್ನೂ ಒಳ್ಳೆಯದು.
* ಬ್ರಾಹ್ಮಣರಿಗೆ ದಕ್ಷಿಣೆ ನೀಡಿ, ಬಡವರಿಗೆ ದಾನ ಮಾಡಿ. ಈ ದಿನ ಹುಗ್ಗಿ ತಯಾರಿಸಿ ದೇವರಿಗೆ ನೈವೇದ್ಯವಾಗಿ ಅರ್ಪಿಸಿ.
* ಸೂರ್ಯ ಎಳ್ಳು, ಬೆಲ್ಲವನ್ನು ಅರ್ಪಿಸಿ.
* ಈ ದಿನ ಎಳ್ಳು, ಬೆಲ್ಲ ದಾನ ಮಾಡುವುದು ಒಳ್ಳೆಯದು
* ಎಳ್ಳು- ಬೆಲ್ಲ ಸವಿಯಿರಿ
ಮಕರ ಸಂಕ್ರಾಂತಿಯಂದು ಏನು ಮಾಡಬಾರದು?
* ಮಾಂಸಾಹಾರ ಸೇವನೆ ಮಾಡಬಾರದು
* ಯಾರಿಗೂ ನೋವುಂಟು ಮಾಡಬಾರದು
* ಮನೆಗೆ ಬಂದವರನ್ನು ಇಂದು ಬರಿಗೈನಲ್ಲಿ ಕಳುಹಿಸಬಾರದು
ಈ ದಿನ ಯಾವ ಕಾರ್ಯಗಳನ್ನು ಮಾಡಿದರೆ ಒಳ್ಳೆಯದು
* ಈ ದಿನ ಮನೆಗೆ ಹೊಸ ಪೊರಕೆ ತಂದರೆ ಒಳ್ಳೆಯದು ಎಂದು ಹೇಳಲಾಗುವುದು.
* ಹಿರಿಯರ ಆಶೀರ್ವಾದ ಪಡೆಯಿರಿ
* ಯಾರಿಗೆ ಅವಶ್ಯಕತೆ ಇದೆಯೋ ಅವರಿಗೆ ದಾನ ಮಾಡಿ
* ಈ ದಿನ ಹುಗ್ಗಿ ಅಥವಾ ಪೊಂಗಲ್ ಸವಿಯಿರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications