Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
18 ಮಾಸದ ಬಳಿಕ ವೃಷಭ ರಾಶಿಗೆ ಮಂಗಳ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟದ ಸಮಯವಿದು
ಜುಲೈ 12ಕ್ಕೆ ಮಂಗಳ ಸಂಚಾರವಾಗಿದೆ, ಸುಮಾರು 18 ಮಾಸಗಳ ಬಳಿಕ ಮಂಗಳನು ಗುರು ನೆಲೆಸಿರುವ ಮಂಗಳ ಗ್ರಹಕ್ಕೆ ಪ್ರವೇಶ ಮಾಡಿದೆ. ವೃಷಭದಲ್ಲಿ ಗುರು ಇರುವುದರಿಂದ ಮಂಗಳ ಗುರು ಯುತಿ ಕೂಡ ಉಂಟಾಗಿದೆ.
ಮಂಗಳನ ಈ ಸಂಚಾರದಿಂದಾಗಿ ಕೆಲ ರಾಶಿಯವರು ಅದ್ಭುತ ಪ್ರಯೋಜನ ಪಡೆದರೆ , ಯಾವ ರಾಶಿಯಲ್ಲಿ ಮಂಗಳ ಅನುಕೂಲಕರ ಸ್ಥಾನದಲ್ಲಿ ಇರುವುದಿಲ್ಲವೋ ಅವರು ಸ್ವಲ್ಪ ಸವಾಲು ಅನುಭವಿಸಬೇಕಾಗುತ್ತದೆ.

ಇದೀಗ ಮಂಗಳ ವೃಷಭ ರಾಶಿಗೆ ಸಂಚರಿಸಿರುವುದರಿಂದ ಈ ಕೆಲ ರಾಶಿಯವರು ಅದ್ಭುತ ಪ್ರಯೋಜನ ಪಡೆಯಲಿದ್ದಾರೆ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಸಂಚಾರ ತುಂಬಾನೇ ಶುಭವಾಗಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ, ನೀವೇನಾದರೂ ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ಪ್ರಯೋಜನ ಪಡೆಯುತ್ತೀರಿ. ಇನ್ನು ಸರ್ಕಾರಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ಆರ್ಥಿಕವಾಗಿ ಈ ಸಮಯ ಚೆನ್ನಾಗಿರಲಿದೆ. ಇನ್ನು ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ.
ವೃಷಭ ರಾಶಿ
ಮಂಗಳ ಈ ಸಂಚಾರ ವೃಷಭ ರಾಶಿಯರಿಗೂ ಅತ್ಯಧಿಕ ಪ್ರಯೋಜನ ನೀಡಲಿದೆ. ಈ ಅವಧಿಯಲ್ಲಿ ವೃಷಭ ರಾಶಿಯವರು ಇಟ್ಟ ಹೆಜ್ಜೆಯಲ್ಲಿ ಯಶಸ್ಸು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಏನಾದರೂ ಹೊಸ ಕಾರ್ಯ ಮಾಡಿದ್ದರೆ ಅದರಲ್ಲಿ ಯಶಸ್ಸು ಪಡೆಯುತ್ತೀರಿ. ಇನ್ನು ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಅದಕ್ಕೆ ಕೂಡ ಈ ಅವಧಿ ಉತ್ತಮವಾಗಿದೆ.
ಕರ್ಕ ರಾಶಿ
ಈ ಮಂಗಳ ಸಂಕ್ರಮಣವು ಕರ್ಕ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಏನಾದರು ಸಾಲ ಮಾಡಿದ್ದರೆ ಅದನ್ನು ತೀರಿಸಲು ಸಾಧ್ಯವಾಗಯವುದು. ಅಲ್ಲದೆ ಈ ಸಮಯದಲ್ಲಿ ಮಾಡಿದ ಹೂಡಿಕೆಯಿಂದ ಲಾಭ ಉಂಟಾಗಿದೆ.
ವೃಷಭ ರಾಶಿಯಲ್ಲಿ ಉಂಟಾಗಿದೆ ಮಂಗಳ-ಗುರು ಯುತಿ
ಇದೀಗ ವೃಷಭ ರಾಶಿಯಲ್ಲಿ ಮಂಗಳ-ಗುರು ಯುತಿ ನಡೆಯುತ್ತಿದೆ, ಸುಮಾರು 12 ವರ್ಷಗಳ ಬಳಿಕ ವೃಷಭದಲ್ಲಿ ಈ ರೀತಿಯ ಯುತಿ ಉಂಟಾಗಲಿದೆ. ಈ ಸಂಯೋಗವನ್ನು ಪ್ರಯೋಜನಕಾರಿಯಾರಿ ಎಂದು ವೈದಿಕ ಶಾಸ್ತ್ರದಲ್ಲಿ ಹೇಳಲಾಗಿದೆ. ಏಕೆಂದರೆ ಮಂಗಳ ಗುರು ಯುತಿಯಿಂದಾಗಿ ಗುರು ಮಂಗಳ ಯೋಗ ಉಂಟಾಗಿದೆ. ಈ ಯೋಗದಿಂದಾಗಿ ವ್ಯಕ್ತಿ ಜ್ಞಾನವನ್ನು ಪಡೆಯುತ್ತಾನೆ, ಈ ಅವಧಿಯಲ್ಲಿ ಸಂವಹನದಿಂದ ಜನರನ್ನು ಆಕರ್ಷಿಸುತ್ತಾರೆ. ಈ ಅವಧಿಯಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತೋರಿಸುತ್ತಾರೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತಾರೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications