Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
ಮಹಾಶಿವರಾತ್ರಿಗೆ ರೂಪುಗೊಳ್ಳಲಿದೆ ಅತ್ಯಂತ ಶುಭ ಯೋಗ: ಈ ರಾಶಿಗಳಿಗೆ ಅತ್ಯಂತ ಶುಭ
ಮಹಾ ಶಿವರಾತ್ರಿ ಹಿಂದೂಗಳಿಗೆ ಬಹು ದೊಡ್ಡ ಧಾರ್ಮಿಕ ಆಚರಣೆ, ಈ ದಿನ ಜಾಗರಣೆವಿದ್ದು ಶಿವ ರಾತ್ರಿಯನ್ನು ಆಚರಿಸಲಾಗುವುದು. ಮಹಾ ಶಿವರಾತ್ರಿ ಪಾರ್ವತಿ-ಪರಶಿವನ ವಿವಾಹದ ದಿನವೆಂದು ಹೇಳಲಾಗುವುದು. ಪ್ರತಿವರ್ಷ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿಯನ್ನು ಆಚರಿಸಲಾಗುವುದು.
ಈ ವರ್ಷ ಮಹಾಶಿವರಾತ್ರಿಗೆ ಅತ್ಯಂತ ಮಂಗಳಕರ ಯೋಗ ಉಂಟಾಗಲಿದೆ, ಆ ಯೋಗ ಯಾವುದು? ಯಾವ ರಾಶಿಗಳಿಗೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಮಹಾಶಿವರಾತ್ರಿಯಂದು ಶ್ರವಣ ನಕ್ಷತ್ರ ಸಂಜೆ 05:08ರವರೆಗೆ ಇರಲಿದೆ, ಈ ಅವಧಿಯಲ್ಲಿ ಪರಿಧ್ ಯೋಗ ಉಂಟಾಗಲಿದೆ. ಈ ಯೋಗ ಈ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ.
ಮೇಷ ರಾಶಿ
ಮೇಷ ರಾಶಿಯವರು ಮಹಾಶಿವರಾತ್ರಿಗೆ ತುಂಬಾನೇ ಅದ್ಭುತ ಪ್ರಯೋಜನ ಪಡೆಯುತ್ತೀರಿ. ನಿಮಗೆ ವೃತ್ತಿ ಬದುಕಿನ ದೃಷ್ಟಿಯಿಂದ ಈ ಶಿವರಾತ್ರಿ ತುಂಬಾನೇ ಅದ್ಭುತವಾಗಿರಲಿದೆ. ಹಣಕಾಸು ತುಂಬಾ ಚೆನ್ನಾಗಿರಲಿದೆ. ಈ ದಿನ ನೀವು ಶಿವನಿಗೆ ಅಭಿಷೇಕ ಮಾಡಿ ಬಿಲ್ವೆಪತ್ರೆ ಅರ್ಪಿಸಿ ಪೂಜೆ ಮಾಡಿ ಇದರಿಂದ ಶಿವನ ಕೃಪೆಯಿಂದ ನೀವು ಮತ್ತಷ್ಟು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಮಿಥುನ ರಾಶಿ
ಮಿಥುನ ರಾಶಿಯವರು ಈ ಶಿವರಾತ್ರಿಗೆ ತುಂಬಾನೇ ಶುಭ ಫಲ ಪಡೆಯುವರಿ. ನಿಮಗೆ ವೃತ್ತಿ ಜೀವನದಲ್ಲಿ ದೊಡ್ಡ ಅವಕಾಶಗಳು ಹುಡುಕಿ ಬರಲಿದೆ, ಭವಿಷ್ಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮ ಪಡಿಸಲು ತುಂಬಾನೇ ಒಳ್ಳೆಯ ಅವಕಾಶ ದೊರೆಯಲಿದೆ. ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಮಹಾಶಿವರಾತ್ರಿಗೆ ರುದ್ರಾಭಿಷೇಕ ಮಾಡಿಸಿ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಮಹಾಶಿವರಾತ್ರಿ ಅತ್ಯಂತ ಮಂಗಳಕರಕರವಾಗಿರಲಿದೆ. ಶುಭ ಯೋಗದ ಫಲದಿಂದ ನೀವು ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ದುಬಾರಿ ವಸ್ತುಗಳನ್ನು ಖರೀದಿಸಲು ಸಾಧ್ಯವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ದಿನ ಶಿವಲಿಂಗ ಹಾಲು ಮತ್ತು ಜೇನಿನ ಅಭಿಷೇಕ ಮಾಡಿ.
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಶಿವ ಧ್ಯಾನ ಮಂತ್ರ
ಕರ್ಚರನ್ಕೃತಂ ವಾ ಕೈಜಮ್ ಕರ್ಮಜಂ ವಾ ಶ್ರಾವಣ್ಣನಂಜಂ ವಾ ಮಾನ್ಸಮ್ ವಾ ಪರಧಮ್
ವಿಹಿತಂ ವಿಹಿತಂ ವಾ ಸರ್ವ್ ಮೆಟಾಟ್ ಕ್ಷಮಾಸ್ವ ಜೇ ಜೇ ಕರುನಾಬ್ಧೆ ಶ್ರೀ ಮಹಾದೇವ್ ಶಂಭೋ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
