Latest Updates
-
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ?
ಅಕ್ಟೋಬರ್ 30ಕ್ಕೆ ರಾಹು-ಕೇತು ಸಂಚಾರ: ರಾಹು-ಕೇತು ದೋಷಕ್ಕೆ ಪರಿಹಾರವೇನು?
ಅಕ್ಟೋಬರ್ 30ರಂದು ಎರಡು ಪ್ರಮುಖ ಗ್ರಹಗಳು ರಾಶಿ ಬದಲಾವಣೆ ಮಾಡುತ್ತಿವೆ. ಈ ದಿನ ನೆರಳು ಗ್ರಹಗಳಾದ ರಾಹು ಹಾಗೂ ಕೇತು ಸಂಚಾರ. ಶನಿಯ ನಂತರ, ನಿಧಾನವಾಗಿ ಚಲಿಸುವ ಗ್ರಹಗಳು ರಾಹು ಮತ್ತು ಕೇತುಗಳಾಗಿವೆ. ರಾಹು-ಕೇತುಗಳು ಹಿಮ್ಮುಖವಾಗಿ ಚಲಿಸುತ್ತವೆ, ಈ ಗ್ರಹಗಳು 1.8 ವರ್ಷಕ್ಕೊಮ್ಮೆ ತಮ್ಮ ರಾಶಿ ಬದಲಾವಣೆ ಮಾಡುತ್ತವೆ. ಈ ಸಂಚಾರದಲ್ಲಿ ರಾಹು ಮೀನ ರಾಶಿಗೆ ಕೇತು ಕನ್ಯಾ ರಾಶಿಗೆ ಪ್ರವೇಶಿಸಲಿದೆ.
ರಾಹು-ಕೇತುವನ್ನು ಶುಭ ಗ್ರಹಗಳೆಂದು ಪರಿಗಣಿಸುವುದಿಲ್ಲ, ಇವುಗಳು ಅನೇಕ ಸಮಸ್ಯೆಗಳನ್ನು ತರುವ ಗ್ರಹಗಳಾಗಿರುವುದರಿಂದ ಇವುಗಳನ್ನು ಅಶುಭ ಗ್ರಹಗಳೆಂದು ಕರೆಯಲಾಗುವುದು. ಜ್ಯೋತಿಷ್ಯವು ರಾಹು-ಕೇತು ದೋಷಕ್ಕೆ ಕೆಲವು ಪರಿಹಾರ ಹೇಳಿದೆ, ಆ ಪರಿಹಾರಗಳೇನು ಎಂದು ನೋಡೋಣ:

ಮೊದಲಿಗೆ ರಾಹು-ಕೇತು ದೋಷ ವ್ಯಕ್ತಿಯ ಮೇಲೆ ಬೀರುವ ಪ್ರಭಾವವೇನು?
ರಾಹು-ಕೇತು ದೋಷವಿದ್ದಾಗ ಮಾನಸಿಕ ಅಸ್ವಸ್ಥತೆ, ಹಣಕಾಸಿನಲ್ಲಿ ನಷ್ಟ, ಕಾನೂನು ಸಂಬಂಧಿತ ಸಮಸ್ಯೆ, ಕುಟುಂಬದಲ್ಲಿ ಸಾವು ಅಥವಾ ಕಾಯಿಲೆ, ಬದುಕಿನಲ್ಲಿ ಇದ್ದಕ್ಕಿದ್ದಂತೆ ತುಂಬಾ ತೊಂದರೆ ಬರುವುದು, ತ್ವಚೆ ಸಮಸ್ಯೆ, ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆ ಈ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವುದು.
ಕೇತುವಿನ ಸ್ಥಾನ ಸರಿಯಾಗಿ ಇಲ್ಲದಿದ್ದರೆ ಮೆದುಳಿನ ಸಮಸ್ಯೆ, ಕಿವಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ ಈ ರೀತಿಯ ತೊಂದರೆಗಳು ಉಂಟಾಗುವುದು. ರಾಹು-ಕೇತು ದೊಷವಿದ್ದರೆ ಬದುಕಿನ ಮೇಲೆ ತುಂಬಾನೇ ಋಣಾತ್ಮಕ ಪ್ರಭಾವ ಬೀರುವುದು.
ರಾಹು-ಕೇತುವಿಗೆ ಪರಿಹಾರ
* ಅನಾಥ ಮಕ್ಕಳಿಗೆ ಸಿಹಿತಿಂಡಿ ನೀಡಿ
* ದೋಷ ನಿವಾರಣ ಮಂತ್ರ 108 ಮಂತ್ರ ಪಠಿಸಿ.
* ರುದ್ರಾಕ್ಷ ಮಾಲೆ ಧರಿಸಿ
* ಬೆಳ್ಳಿಯ ನಿವಾರಣ ರಿಂಗ್ ಧರಿಸಿ
* ಶಿವನ ದೇವಾಲಯಕ್ಕೆ ಬೆಳ್ಳಿ ಅಥವಾಚಿನ್ನದ ಹೂವಿನ ಮೂರ್ತಿ ನೀಡಿ
* ಕೇತು, ರಾಹು ಮಂತ್ರ ಪಠಿಸಿ.
* ಸಾಸಿವೆಯೆಣ್ಣೆ ದಾನ ಮಾಡಿ
* ಬೀದಿ ನಾಯಿಗಳಿಗೆ ಆಹಾರ ನೀಡಿ.
* ಕಪ್ಪು ಬಟ್ಟೆ ಧರಿಸಿ
* ಹಳದಿ ಮತ್ತು ಬಿಳಿ ಕೇತುವಿಗೆ ಪ್ರಿಯವಾದ ಬಣ್ಣಗಳಾಗಿದೆ.
* ರಾಹು ದೋಷದ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಅಥವಾ ನೀಲಿ ಬಣ್ಣದ ಕರವಸ್ತ್ರ ಇಟ್ಟುಕೊಳ್ಳಿ. ಕೇತುದೋಷದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸಿ, ಗುಲಾಬಿ ಬಣ್ಣದ ಕರವಸ್ತ್ರ ಸದಾ ನಿಮ್ಮ ಜೊತೆ ಇರಿಸಿ.
* ಪ್ರತಿದಿಮ 108 ಬಾರಿ 'ಓಂ ನಮಃ ಶಿವಾಯ' ಮಂತ್ರವನ್ನು ಪಠಿಸಿ. ಸೋಮವಾರ ರುದ್ರಾಭಿಷೇಕ ಮಾಡಿಸಿ.
* ರಾಹು ಮತ್ತು ಕೇತು ಗ್ರಹಗಳನ್ನು ಶಾಂತಗೊಳಿಸಲು, ಮನೆಯಲ್ಲಿ ಶ್ರೀಕೃಷ್ಣನ ಫೋಟೋವಿರಿಸಿ, ನಿತ್ಯವೂ ಪೂಜಿಸಿ.
* 'ಓಂ ನಮೋ ಭಗವತೇ ವಾಸುದೇವಾಯ ನಮಃ' ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications