Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಪೂರ್ವ ಭಾದ್ರಪದ ನಕ್ಷತ್ರಕ್ಕೆ ರಾಹು ಸಂಚಾರದಿಂದ ಈ 3 ರಾಶಿಯವರಿಗೆ ಅದೃಷ್ಟಕರ
ನವಗ್ರಹಗಳಲ್ಲಿ ರಾಹು ಮತ್ತು ಕೇತು ನೆರಳಿನ ಗ್ರಹವಾಗಿದ್ದು ಹಿಮ್ಮುಖವಾಗಿ ಚಲಿಸುವ ಗ್ರಹಗಳಾಗಿವೆ. ಈ ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು 18 ತಿಂಗಳು ತೆಗೆದುಕೊಳ್ಳುತ್ತದೆ.
ಇದೀಗ ರಾಹು ಗ್ರಹವು ಮೀನ ರಾಶಿಯಲ್ಲಿದೆ ಇದೆ, ಈ ರಾಹು ನಕ್ಷತ್ರ ಬದಲಾವಣೆ ಮಾಡಲಿದೆ. ರಾಹು ಶನಿ ಇರುವ ಪೂರ್ವ ಭಾದ್ರಪದ ನಕ್ಷತ್ರಕ್ಕೆ ಸಂಚರಿಸಿದೆ. ಈ ಎರಡೂ ಗ್ರಹಗಳು ಒಂದೇ ರಾಶಿಯಲ್ಲಿ ಅಥವಾ ನಕ್ಷತ್ರದಲ್ಲಿ ಇರುವುದು ಒಳ್ಳೆಯದಲ್ಲ.

ರಾಹು ಜುಲೈ 8ಕ್ಕೆ ಪೂರ್ವ ಭಾದ್ರಪದ ನಕ್ಷತ್ರಕ್ಕೆ ಸಂಚರಿಸಲಿದೆ, ಅಲ್ಲಿ ಶನಿ ಜೊತೆ ಸಂಯೋಗವಾಗಲಿದೆ, ಈ ಸಂಯೋಗ ಬಹುತೇಕ ರಾಶಿಗಳಿಗೆ ಒಳ್ಳೆಯದಲ್ಲ, ಆದರೆ 12 ರಾಶಿಗಳ ಮೇಲೂ ಒಂದೇ ರೀತಿ ಪ್ರಭಾವ ಬೀರುತ್ತದೆ ಎಂದೇನೂ ಇಲ್ಲ, ಈ ರಾಶಿಯವರು ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯಲಿದ್ದಾರೆ:
ವೃಷಭ ರಾಶಿ
ರಾಹು ಪೂರ್ವಭಾದ್ರಪದ ನಕ್ಷತ್ರಕ್ಕೆ ಸಂಚರಿಸಿದಾಗ ವೃಷಭ ರಾಶಿಯ ಜನರಿಗೆ ಮಂಗಳಕರವಾಗಿರುತ್ತದೆ. ಈ ಅವಧಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಇನ್ನು ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಇನ್ನು ಈ ಅವಧಿಯಲ್ಲಿ ಉದ್ಯೋಗ ಹುಡುಕುತ್ತಿರುವವರೆಗೆ ಉತ್ತಮ ಕೆಲಸ ಸಿಗಲಿದೆ. ಇನ್ನು ಕೆಲಸ ಬದಲಾವಣೆ ಮಾಡಬೇಕೆಂದು ಇರುವವರೆಗೆ ಈ ಅವಧಿ ಒಳ್ಳೆಯದಿದೆ. ಆದಾಯ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಒಳ್ಳೆಯ ಯಶಸ್ಸು ಸಿಗಲಿದೆ.
ತುಲಾ ರಾಶಿ
ರಾಹು ನಿಮ್ಮ ಆರನೇ ಮನೆಯಲ್ಲಿ ನಕ್ಷತ್ರ ಬದಲಾಯಿಸುತ್ತಿದೆ. ಈ ರಾಶಿಯವರು ಜನರು ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಅವಧಿಯಲ್ಲಿ ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯಬಹುದು, ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿ ಇರುವುದರಿಂದ ಹಣದ ಕೊರತೆಯಿಂದ ನಿಂತ ಕೆಲಸ ಮತ್ತು ಚುರುಕುಗೊಳ್ಳಲಿದೆ. ಉದ್ಯೋಗಿಗಳು ಬಡ್ತಿ ಪಡೆಯುತ್ತೀರಿ, ಈ ಅವಧಿಯಲ್ಲಿ ನಿಮ್ಮ ಸಂಬಳ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಉತ್ತಮ ಧನ ಲಾಭವಾಗಲಿದೆ.
ವೃಶ್ಚಿಕ ರಾಶಿ
ರಾಹು ಮತ್ತು ಶನಿಯ ಸ್ಥಾನವು ನಿಮಗೆ ಮಂಗಳಕರವಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ಉದ್ತೋಗಿಗಳಿಗೆ ಬಡ್ತಿ ಸಿಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕಾಗಿ ಚೆನ್ನಾಗಿ ಇರುವುದರಿಂದ ಮನೆಯ ಸೌಕರ್ಯ ಹೆಚ್ಚಾಗಲಿದೆ.
ಈ ಮಂತ್ರಗಳ ಪಠಣೆ ಮಾಡಿದರೆ ಇನ್ನೂ ಒಳ್ಳೆಯದು
ರಾಹು ಬೀಜ ಮಂತ್ರ
ಓಂ ಭ್ರಂ ಭ್ರೂಂ ಸಃ ರಾಹವೇ ನಮಃ
ರಾಹು ಮಂತ್ರ
ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಂ ಸಿಂಘಿಕ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ ।
ರಾಹು ಗಾಯತ್ರಿ ಮಂತ್ರ
ಓಂ ನಾಕಧ್ವಜಾಯ ವಿದ್ಮಹೇ ಪದ್ಮ ಹಸ್ತಾಯ ಧೀಮಹಿ ತನ್ನೋ ರಾಹು ಪ್ರಚೋದಯಾತ್"
ರಾಹು ಶಾಂತಿ ಮಂತ್ರ
ಓಂ ರಾಹುವೇ ದೇವಯೇ ಶಾಂತಿಂ ರಾಹುವೇ ಕೃಪಯೇ ಕರೋತಿ ರಾಹುವಾಯೇ ಚಾಮಯೇ ಅಭಿಲಾಷತ್ ಓಂ ರಾಹುವೇ ನಮಃ ನಮಃ
ಈ ಮಂತ್ರಗಳ ಪಠಣೆಯಿಮದ ಅತ್ಯುತ್ತಮವಾದ ಪ್ರಯೋಜನ ಪಡೆಯಬಹುದು.
ಶನಿಯ ಈ ಮಂತ್ರಗಳನ್ನೂ ಪಠಿಸಿ
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ
ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ
ಈ ಮಂತ್ರಗಳ ಪಠಣೆಯಿಂದ ಶನಿಯ ಕೃಪೆಗೆ ಪಾತ್ರರಾಗಬಹುದು, ಅಲ್ಲದೆ ಶನಿ ಹಾಗೂ ರಾಹು ಕೃಪೆಯಿಂದ ನೀವು ಅತ್ಯುತ್ತಮ ಪ್ರಯೊಜನ ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications