Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಫೆಬ್ರವರಿ 24, ಸೋಮವಾರದ ದಿನ ಬಂದಿದೆ ವಿಜಯ ಏಕಾದಶಿ : ಈ ದಿನ ಏನು ಮಾಡಿದರೆ ತುಂಬಾ ಒಳ್ಳೆಯದು?
ಫೆಬ್ರವರಿ 24ಕ್ಕೆ ವಿಜಯ ಏಕಾದಶಿ, ಈ ಏಕಾದಶಿಯನ್ನು ಫಾಲ್ಗುಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದಲ್ಲಿ ಆಚರಿಸಲಾಗುವುದು. ಈ ವಿಜಯದ ಏಕಾದಶಿ ಆಚರಣೆ ಮಾಡುವುದರಿಂದ ನಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ ಎಂದು ಹೇಳಲಾಗುವುದು.
ಈ ಏಕಾದಶಿಯನ್ನು ಉದಯ ತಿಥಿ ಪ್ರಕಾರ ಫೆಬ್ರವರಿ 24ರಂದು ಆಚರಣೆ ಮಾಡಲಾಗುತ್ತಿದೆ. ಇನ್ನು ಪಾರಣ ಸಮಯ ಫೆಬ್ರವರಿ 25 ಬೆಳಗ್ಗೆ 6:49ರಿಂದ 09:07ರವರೆಗೆ ಇದೆ.
ವಿಜಯ ಏಕಾದಶಿ ಹೆಸರೇ ಸೂಚಿಸುವಂತೆ ಈ ಏಕಾದಶಿ ಆಚರಣೆ ಮಾಡುವುದರಿಂದನಾವು ಏನು ಅಂದುಕೊಂಡಿದ್ದೆವೋ ಅದಲ್ಲಿ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಯಶಸ್ಸು ಬಯಸಿದರೆ, ಉದ್ಯೋಗಿಗಳು ವೃತ್ತಿ ಬದುಕಿನಲ್ಲಿ ಯಶಸ್ಸು ಬಯಸುತ್ತಾರೆ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಹೀಗೆ ಒಬ್ಬೊಬ್ಬರಿಗೆ ಒಂದೊಂದು ಗುರಿ ಇರುತ್ತದೆ, ಆ ಗುರಿ ನೆರವೇರಲು ವಿಜಯ ಏಕಾದಶಿ ಆಚರಣೆ ಮಾಡಲಾಗುವುದು.

ಯಾರು ಭಕ್ತಿಯಿಂದ ಏಕಾದಶಿ ಆಚರಿಸುತ್ತಾರೋ ಅವರೆಲ್ಲಾ ಕನಸುಗಳು ಸಾಕಾರವಾಗಲು ಶ್ರೀ ವಿಷ್ಣುವಿನ ಕೃಪೆ ದೊರೆಯಲಿದೆ ಎಂದು ಹೇಳಲಾಗುವುದು. ಈ ಏಕಾದಶಿ ಆಚರಣೆ ಮಾಡುವುದರಿಂದ ನಮಗಿರುವ ಪ್ರಮುಖ ಸವಾಲುಗಳು ದೂರಾಗಲಿದೆ, ಜಯ ನಮ್ಮದಾಗಲಿದೆ ಎಂದು ಹೇಳಲಾಗುವುದು.
ವಿಜಯ ಏಕಾದಶಿಯಂದು ಈ ಪರಿಹಾರ ಮಾಡಿದರೆ ಒಳ್ಳೆಯದು:
ವಿಜಯ ಏಕಾದಶಿಯನ್ನು ಆರ್ಥಿಕ ಸಮಸ್ಯೆ ನಿವಾರಣೆಗೆ ಪರಿಹಾರ ಕ್ರಮ
ಈ ದಿನ ನೀವು ಶ್ರೀವಿಷ್ಣುವಿಗೆ ಕೊಬ್ಬರಿ ಅರ್ಪಿಸಿ, ನಂತರ ಆ ಕೊಬ್ಬರಿಗೆ ಬೆಲ್ಲ ಸೇರಿಸಿ ಹಸುವಿಗೆ ನೀಡಿ, ವಿಜಯ ಏಕಾದಶಿ ದಿನ ಈ ರೀತಿ ಮಾಡುವುದರಿಂದ ಆರ್ಥಿಕ ಸಮಸ್ಯೆ ಬಗೆಹರಿಯುವುದು ಎಂಬ ನಂಬಿಕೆ ಭಕ್ತರಲ್ಲಿದೆ.
ಈ ದಿನ ನೀವು ಏನಾದರೂ ಸಂಕಲ್ಪ ತೆಗೆದುಕೊಂಡು 'ಓಂ ನಮೋ ಭಗವತೇ ನಾರಾಯಣಾಯ' ಎಂಬ ಮಂತ್ರವನ್ನು ನಿರಂತರವಾಗಿ ಪಠಿಸಿ, ಈ ಮಂತ್ರ 108 ಬಾರಿ ಪಠಿಸಿದರೆ ತುಂಬಾನೇ ಒಳ್ಳೆಯದು.
ಕೆಲಸ-ಕಾರ್ಯದಲ್ಲಿ ಯಶಸ್ಸು ದೊರೆಯಲು
ಇತ್ತೀಚಿನ ದಿನಗಳಲ್ಲಿ ಕೆಲಸ ಕಾರ್ಯದಲ್ಲಿ ತುಂಬಾನೇ ಅಡಚಣೆ ಉಂಟಾಗಿದ್ದರೆ ಈ ದಿನದಂದು ಸ್ನಾನ ಮಾಡಿ ಮಡಿಬಟ್ಟೆ ಧರಿಸಿ ಕಲಶವಿಟ್ಟು, ಶ್ರೀ ವಿಷ್ಣುವಿನ ಮಂತ್ರವನ್ನು ಹೇಳಿ ಪೂಜೆ ಸಲ್ಲಿಸಿ, ಇದರಿಂದ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ.
ಈ ದಿನ ಮಾಡುವ ದಾನ ಧರ್ಮಕ್ಕೂ ತುಂಬಾನೇ ಮಹತ್ವವಿದೆ: ಏಕಾದಶಿಯಂದು ಬಡವರಿಗೆ ದಾನ ಮಾಡಬೇಕು. ದೇವರಿಗೆ ನೈವೇದ್ಯ ಅರ್ಪಿಸಿದ ಬಳಿಕ ದಾನ ಮಾಡಿ.
ಮದುವೆ ಸಂಬಂಧ ಕೂಡಿ ಬರಲು
ಕೆಲವರಿಗೆ ಎಷ್ಟೇ ಸಂಬಂಧ ಬಂದಿದ್ದರೂ ಒಂದು ಸಂಬಂಧ ಕೂಡ ಬಂದಿರಲ್ಲ, ಅಂತವರು ಈ ಏಕಾದಶಿ ಆಚರಣೆ ಮಾಡುವುದರಿಂದ ಮದುವೆ ಸಂಬಂಧ ಕೂಡಿ ಬರಲಿದೆ. ಈ ದಿನ ಬಾಳೆಗಿಡಕ್ಕೆ ನೀರು ಹಾಕಿ, ಶ್ರೀ ವಿಷ್ಣುವಿನ ಪೂಜಿಸಿದರೆ ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











