Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಫೆಬ್ರವರಿ 24, ಸೋಮವಾರದ ದಿನ ಬಂದಿದೆ ವಿಜಯ ಏಕಾದಶಿ : ಈ ದಿನ ಏನು ಮಾಡಿದರೆ ತುಂಬಾ ಒಳ್ಳೆಯದು?
ಫೆಬ್ರವರಿ 24ಕ್ಕೆ ವಿಜಯ ಏಕಾದಶಿ, ಈ ಏಕಾದಶಿಯನ್ನು ಫಾಲ್ಗುಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದಲ್ಲಿ ಆಚರಿಸಲಾಗುವುದು. ಈ ವಿಜಯದ ಏಕಾದಶಿ ಆಚರಣೆ ಮಾಡುವುದರಿಂದ ನಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ ಎಂದು ಹೇಳಲಾಗುವುದು.
ಈ ಏಕಾದಶಿಯನ್ನು ಉದಯ ತಿಥಿ ಪ್ರಕಾರ ಫೆಬ್ರವರಿ 24ರಂದು ಆಚರಣೆ ಮಾಡಲಾಗುತ್ತಿದೆ. ಇನ್ನು ಪಾರಣ ಸಮಯ ಫೆಬ್ರವರಿ 25 ಬೆಳಗ್ಗೆ 6:49ರಿಂದ 09:07ರವರೆಗೆ ಇದೆ.
ವಿಜಯ ಏಕಾದಶಿ ಹೆಸರೇ ಸೂಚಿಸುವಂತೆ ಈ ಏಕಾದಶಿ ಆಚರಣೆ ಮಾಡುವುದರಿಂದನಾವು ಏನು ಅಂದುಕೊಂಡಿದ್ದೆವೋ ಅದಲ್ಲಿ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಯಶಸ್ಸು ಬಯಸಿದರೆ, ಉದ್ಯೋಗಿಗಳು ವೃತ್ತಿ ಬದುಕಿನಲ್ಲಿ ಯಶಸ್ಸು ಬಯಸುತ್ತಾರೆ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಹೀಗೆ ಒಬ್ಬೊಬ್ಬರಿಗೆ ಒಂದೊಂದು ಗುರಿ ಇರುತ್ತದೆ, ಆ ಗುರಿ ನೆರವೇರಲು ವಿಜಯ ಏಕಾದಶಿ ಆಚರಣೆ ಮಾಡಲಾಗುವುದು.

ಯಾರು ಭಕ್ತಿಯಿಂದ ಏಕಾದಶಿ ಆಚರಿಸುತ್ತಾರೋ ಅವರೆಲ್ಲಾ ಕನಸುಗಳು ಸಾಕಾರವಾಗಲು ಶ್ರೀ ವಿಷ್ಣುವಿನ ಕೃಪೆ ದೊರೆಯಲಿದೆ ಎಂದು ಹೇಳಲಾಗುವುದು. ಈ ಏಕಾದಶಿ ಆಚರಣೆ ಮಾಡುವುದರಿಂದ ನಮಗಿರುವ ಪ್ರಮುಖ ಸವಾಲುಗಳು ದೂರಾಗಲಿದೆ, ಜಯ ನಮ್ಮದಾಗಲಿದೆ ಎಂದು ಹೇಳಲಾಗುವುದು.
ವಿಜಯ ಏಕಾದಶಿಯಂದು ಈ ಪರಿಹಾರ ಮಾಡಿದರೆ ಒಳ್ಳೆಯದು:
ವಿಜಯ ಏಕಾದಶಿಯನ್ನು ಆರ್ಥಿಕ ಸಮಸ್ಯೆ ನಿವಾರಣೆಗೆ ಪರಿಹಾರ ಕ್ರಮ
ಈ ದಿನ ನೀವು ಶ್ರೀವಿಷ್ಣುವಿಗೆ ಕೊಬ್ಬರಿ ಅರ್ಪಿಸಿ, ನಂತರ ಆ ಕೊಬ್ಬರಿಗೆ ಬೆಲ್ಲ ಸೇರಿಸಿ ಹಸುವಿಗೆ ನೀಡಿ, ವಿಜಯ ಏಕಾದಶಿ ದಿನ ಈ ರೀತಿ ಮಾಡುವುದರಿಂದ ಆರ್ಥಿಕ ಸಮಸ್ಯೆ ಬಗೆಹರಿಯುವುದು ಎಂಬ ನಂಬಿಕೆ ಭಕ್ತರಲ್ಲಿದೆ.
ಈ ದಿನ ನೀವು ಏನಾದರೂ ಸಂಕಲ್ಪ ತೆಗೆದುಕೊಂಡು 'ಓಂ ನಮೋ ಭಗವತೇ ನಾರಾಯಣಾಯ' ಎಂಬ ಮಂತ್ರವನ್ನು ನಿರಂತರವಾಗಿ ಪಠಿಸಿ, ಈ ಮಂತ್ರ 108 ಬಾರಿ ಪಠಿಸಿದರೆ ತುಂಬಾನೇ ಒಳ್ಳೆಯದು.
ಕೆಲಸ-ಕಾರ್ಯದಲ್ಲಿ ಯಶಸ್ಸು ದೊರೆಯಲು
ಇತ್ತೀಚಿನ ದಿನಗಳಲ್ಲಿ ಕೆಲಸ ಕಾರ್ಯದಲ್ಲಿ ತುಂಬಾನೇ ಅಡಚಣೆ ಉಂಟಾಗಿದ್ದರೆ ಈ ದಿನದಂದು ಸ್ನಾನ ಮಾಡಿ ಮಡಿಬಟ್ಟೆ ಧರಿಸಿ ಕಲಶವಿಟ್ಟು, ಶ್ರೀ ವಿಷ್ಣುವಿನ ಮಂತ್ರವನ್ನು ಹೇಳಿ ಪೂಜೆ ಸಲ್ಲಿಸಿ, ಇದರಿಂದ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯಲಿದೆ.
ಈ ದಿನ ಮಾಡುವ ದಾನ ಧರ್ಮಕ್ಕೂ ತುಂಬಾನೇ ಮಹತ್ವವಿದೆ: ಏಕಾದಶಿಯಂದು ಬಡವರಿಗೆ ದಾನ ಮಾಡಬೇಕು. ದೇವರಿಗೆ ನೈವೇದ್ಯ ಅರ್ಪಿಸಿದ ಬಳಿಕ ದಾನ ಮಾಡಿ.
ಮದುವೆ ಸಂಬಂಧ ಕೂಡಿ ಬರಲು
ಕೆಲವರಿಗೆ ಎಷ್ಟೇ ಸಂಬಂಧ ಬಂದಿದ್ದರೂ ಒಂದು ಸಂಬಂಧ ಕೂಡ ಬಂದಿರಲ್ಲ, ಅಂತವರು ಈ ಏಕಾದಶಿ ಆಚರಣೆ ಮಾಡುವುದರಿಂದ ಮದುವೆ ಸಂಬಂಧ ಕೂಡಿ ಬರಲಿದೆ. ಈ ದಿನ ಬಾಳೆಗಿಡಕ್ಕೆ ನೀರು ಹಾಕಿ, ಶ್ರೀ ವಿಷ್ಣುವಿನ ಪೂಜಿಸಿದರೆ ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications