Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಮಹಾಲಯ ಅಮವಾಸ್ಯೆ: ತರ್ಪಣ ನೀಡುವಾಗ ಈ ಮಂತ್ರ ಪಠಿಸಿ
ಪಿತೃಪಕ್ಷ ಭಾದ್ರಪದ ಶುಕ್ಲ ಪೂರ್ಣಿಮಾದಂದು ಪ್ರಾರಂಭವಾಗಿ ಅಶ್ವಿನಿ ಕೃಷ್ನ ಅಮವಾಸ್ಯೆಯಂದು ಮುಕ್ತಾಯವಾಗುವುದು. ಈ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲಾಗುವುದು. ಅಕ್ಟೋಬರ್ 14ಕ್ಕೆ ಪಿತೃಪಕ್ಷ ಕೊನೆಯ ದಿನ, ದಿನ ಅಮವಾಸ್ಯೆ. ಸರ್ವ ಪಿತೃ ಅಮವಾಸ್ಯೆ. ಈ ದಿನ ಕೆಲವೊಂದು ವಿಷಯಗಳು ಮನೆಗೆ ಶ್ರೇಯಸ್ಸು ಅಲ್ಲ, ಈ ದಿನ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಪಿತೃದೋಷದ ಲಕ್ಷಣಗಳು
* ಮನೆಯ ಹಿರಿಯರ ಕೂದಲು ಬೆಳ್ಳಗಾಗಿದ್ದು ನಂತರ ಹಳದಿ ಬಣ್ಣಕ್ಕೆ ತಿರುಗಿದರೆ ಅಥವಾ ಕುಟುಂಬದ ಸದಸ್ಯರು ವಿಪರೀತ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದರೆ ಅದು ಪಿತೃದೋಷದ ಲಕ್ಷಣವಾಗಿದೆ.
* ಸಮಾಜದಲ್ಲಿ ನಿಮ್ಮ ಗೌರವಕ್ಕೆ ಧಕ್ಕೆಯಾಗುವ ಸಂಗತಿಗಳು ನಡೆಯುವುದು
* ಕುಟುಂಬದಲ್ಲಿ ಆಗಾಗ ಜಗಳ, ಭಿನ್ನಾಭಿಪ್ರಾಯ, ಮನಸ್ಸಿನಲ್ಲಿ ನೆಮ್ಮದಿಯೇ ಇಲ್ಲದಿರುವುದು
* ತುಂಬಾನೇ ಆರ್ಥಿಕ ಸಮಸ್ಯೆ
* ಮಕ್ಕಳಾಗಲು ಅಡಚಣೆ
* ಮನೆ ಮಕ್ಕಳಿಗೆ ಮದುವೆ ವಿಳಂಬ
ಈ ದಿನ ಎನು ಮಾಡಬಾರದು?
*ಪಿತೃಪಕ್ಷ ಪೂಜೆ ಮಾಡುವಾಗ ಮಾಂಸ ಸೇವಿಸಬಾರದು
* ಸ್ಟೀಲ್, ಕಬ್ಬಿಣ, ಪ್ಲಾಸ್ಟಿಕ್, ಗಾಜಿನ ಪಾತ್ರೆಗಳನ್ನು ಪೂಜೆಗೆ ಬಳಸಬಾರದು
* ಪೂಜೆ ಮಾಡುವಾಗ ಘಂಟೆ ಭಾರಿಸಬೇಡಿ.
* ಪೂಜೆ ಮಾಡುವಾಗ ಪೂಜೆಗೆ ಯಾವುದೇ ಭಂಗ ಉಂಟಾಗಬಾರದು.
* ಹಿರಿಯರನ್ನು ಗೌರವಿಸಿ.
ಪಿತೃ ಪೂಜೆ ಮಾಡುವಾಗ ಈ ಮಂತ್ರ ಪಠಿಸಿ
ಓಂ ದೇವತಾಭ್ಯ ಪಿತೃಭಕ್ಷ್ಯ ಮಹಾಯೋಗಿಭ್ಯೇವ ಚನಮಃ ಸ್ವಾಹಾಯಃ ।।
ಈ ಮಂತ್ರವನ್ನು ಶ್ರದ್ಧೆಯಿಂದ ಪಠಿಸಿ.
ಅಚನಂ ಮಾಡುವಾಗ ಈ ಮಂತ್ರ ಪಠಿಸಿ
ಓಂ ಕೇಶವಾಯ ನಮಃ, ಓಂ ಮಾಧವಾಯ ನಮಃ, ಓಂ ನಾರಾಯಣಾಯ ನಮಃ ಮಂತ್ರ ಪಠಿಸಿ.
ಸಂಕಲ್ಪ ಹೇಗೆ ತೆಗೆದುಕೊಳ್ಳಬೇಕು?
ಕುಶ (ಹುಲ್ಲು), ಯಾವ (ಬಾರ್ಲಿ), ಕೆಲವು ದಾನ್ಯಗಳು, ಅಕ್ಷತೆ ಇವುಗಳನ್ನು ಕೈಯಲ್ಲಿ ಹಿಡಿದು ಸಂಕಲ್ಪ ತೆಗೆದುಕೊಳ್ಳಬೇಕು. ನಂತರ ಮಂತ್ರ ಹೇಳುತ್ತಾ ಅವುಗಳನ್ನು ದೇವರಿಗೆ ಅರ್ಪಿಸಬೇಕು. ಒಂದು ತಾಮ್ರದ ತಟ್ಟೆಯಲ್ಲಿ ಅಕ್ಕಿ, ಬಾರ್ಲಿ, ಹೂಗಳು, ತುಳಸಿ ಎಲೆಯನ್ನು ಹಾಕಿಡಿ, ಅದನ್ನು ಕೈಯಲ್ಲಿ ಹಿಡಿದುಕೊಳ್ಳಬೇಕು, ನಂತರ ಮೂರು ಕುಶ ಪ್ಲೇಟ್ನಲ್ಲಿ ಇಡಬೇಕು. ನಂತರ ನೀರನ್ನು ಚಿಮುಕಿಸಿ ನಂತರ ನೀರನ್ನು ಮಂತ್ರ ಪಠಿಸುತ್ತಾ ಅರ್ಪಿಸಬೇಕು. ತರ್ಪಣ ಅರ್ಪಣೆ ಮಾಡುವಾಗ ಪವಿತ್ರ ದಾರ ಧರಿಸಬೇಕು, ಬಿಳಿ ಟವಲ್ ಕುತ್ತಿಗೆಯಲ್ಲಿರಬೇಕು. ನಂತರ ಉತ್ತರಕ್ಕೆ ಮುಖ ಮಾಡಿ ಕೂರಬೇಕು, ಪಿಂಡ, ಎಳ್ಳು, ನೀರನ್ನು ಮೂರು ಬಾರಿ ಅರ್ಪಿಸಬೇಕು. ದಕ್ಷಿಣಕ್ಕೆ ಮುಖ ನೀಡಿ ನಿಂತು ಯಮಧರ್ಮನಿಗೂ ತರ್ಪಣ ಅರ್ಪಿಸಬೇಕು.
ಓಂ ಯಮಾಯ ನಮಃ, ಓಂ ಧರ್ಮ ರಾಜಾಯ ನಮಃ, ಓಂ ಮೃತ್ಯವೇ ನಮಃ, ಓಂ ಅನಂತ ಕಾಯ ನಮಃ, ಓಂ ವೈವಸ್ವತಾಯ ನಮಃ, ಓಂ ಕಾಲಾಯ ನಮಃ, ಓಂ ಸರ್ವ ಭೂತ ಕ್ಷಯ ನಮಃ, ಓಂ ಪ್ರದುಮ್ಬ್ರಾಯ ನಮಃ, ಓಂ ದಧ್ನಾಯ ನಮಃ, ಓಂ ನೀಲಾಯ ನಮಃ, ಓಂ ಪರಮೇಷ್ಟಿನೇ ನಮಃ, ಓಂ ವೃಕೋದರಾಯ ನಮಃ,ಓಂ ಚಿತ್ರಾಯ ನಮಃ, ಓಂ ಚಿತ್ರಗುಪ್ತಾಯ ನಮಃ
ಈ ಮಂತ್ರ ಪಠಣೆ ಮಾಡಿ, ತರ್ಪಣ ಅರ್ಪಿಸಿ, ನಂತರ ಅಲ್ಲಿಂದ ಸ್ವಲ್ಪ ಹೊತ್ತು ದೂರ ನಿಲ್ಲಿ. ಆವಾಗ ಪಿತೃ ಬಂದು ತರ್ಪಣ ಸ್ವೀಕರಿಸುತ್ತಾರೆ ಎಂಬ ನಂಬಿಕೆ.
ಪಿತೃತರ್ಪಣ ನೀಡುವುದರಿಂದ ಕುಟುಂಬಕ್ಕೆ ಒಳಿತಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
