Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಪಿಶಾಚ ಯೋಗ: ಶನಿ-ರಾಹು ಸಂಯೋಗ, ಅ.17ರವರೆಗೆ ಈ 3 ರಾಶಿಯವರು ಜಾಗ್ರತೆ
ಶನಿ ತುಂಬಾ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ರಾಹು ಹಿಮ್ಮುಖವಾಗಿ ಚಲಿಸುವ ಗ್ರಹವಾಗಿದೆ. ಶನಿಯು ಕರ್ಮದ ಫಲ ನೀಡುವ ಗ್ರಹವಾಗಿದೆ, ರಾಹುವನ್ನು ಆಶುಭ ಗ್ರಹವೆಂದು ಪರಿಗಣಿಸಲಾಗುವುದು. ಇದೆರಡು ಜೊತೆ ಸೇರಿದಾಗ ಪಿಶಾಚ ಯೋಗ ಏರ್ಪಡುವುದು. ಶನಿ ಕುಂಭ ರಾಶಿಯಲ್ಲಿದೆ ಆದರೆ ಶತಾಭಿಶಾ ನಕ್ಷತ್ರದಲ್ಲಿದೆ, ಇದು ರಾಹುಗೆ ಸೇರಿದ ಗ್ರಹವಾಗಿದೆ. ಇದರಿಂದ ಪಿಶಾಚ ಯೋಗ ಏರ್ಪಟ್ಟಿದೆ. ಇದರಿಂದ ರಾಶಿಗಳ ಮೇಲೆ ಪ್ರಭಾವ ಬೀರಲಿದೆ.

ಪಿಶಾಚ ಯೋಗ
ಪಿಶಾಚ ಯೋಗ ವ್ಯಕ್ತಿಯ ಬದುಕಿನ ಮೇಲೆ ಕೆಟ್ಟ ಪ್ರಭಾವ ಬೀರುವುದು. ಈ ಸಮಯದಲ್ಲಿ ಗೊಂದಲ, ಕೆಟ್ಟ ಆಲೋಚನೆ, ಅತ್ಯಧಿಕ ಸವಾಲುಗಳು ಎಲ್ಲವೂ ಏರ್ಪಡುವುದು. ಇದರಿಂದ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುವುದು. ಇದರಿಂದ ದೈಹಿಕ ಹಾಗೂ ಮಾನಸಿಕ ಒತ್ತಡಗಳು ಉಂಟಾಗುವುದು.
ಈ ಸಮಯದಲ್ಲಿ ಧಾರ್ಮಿಕ ಕಾರ್ಯಗಳನ್ನು ಮಾಡುವುದರ ಮುಖಾಂತರ, ಒಳ್ಳೆಯ ಕಾರ್ಯಗಳನ್ನು ಮಾಡುವುದರ ಮುಖಾಂತರ ದೇವರ ಪ್ರಾರ್ಥನೆ ಮಾಡುವುದರಿಂದ ಈ ಕೆಟ್ಟ ಪರಿಣಾಮವನ್ನು ಕಡಿಮೆ ಮಾಡಬಹುದು.
ಪಿಶಾಚ ಯೋಗದ ಸಮಯದಲ್ಲಿ ಯಾವೆಲ್ಲಾ ರಾಶಿಯವರು ಜಾಗ್ರತೆಯಿಂದಿರಬೇಕು ನೋಡೋಣ ಬನ್ನಿ:
ಕರ್ಕ ರಾಶಿ
ಶತಾಭಿಷ ನಕ್ಷತ್ರದಲ್ಲಿ ಈ ಶನಿ ಹಾಗೂ ರಾಹು ಸಂಯೋಗವಾಗಿರುವುದರಿಂದ ಕರ್ಕ ರಾಶಿಯವರು ತುಂಬಾನೇ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆ ಕಂಡು ಬರುವುದು, ಮಾನಸಿಕ ಒತ್ತಡ ಹೆಚ್ಚಾಗುವುದು. ವೃತ್ತಿ ಜೀವನದಲ್ಲಿ ಹಾಗೂ ಉದ್ಯಮದಲ್ಲಿ ಹಲವು ಸವಾಲುಗಳು ಎದುರಾಗುವುದು. ಈ ಅವಧಿಯಲ್ಲಿ ಆರ್ಥಿಕ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು. ನೀವು ಅಕ್ಟೋಬರ್ 17ರವರೆಗೆ ಜಾಗ್ರತೆವಹಿಸಬೇಕಾಗಿದೆ. ವೈವಾಹಿಕ ಸಂಬಂಧದಲ್ಲಿ ಸಮಸ್ಯೆಗಳು ಕಂಡು ಬರುವುದು. ವಾಹನ ಚಲಾಯಿಸುವಾಗ ತುಂಬಾನೇ ಜಾಗ್ರತೆವಹಿಸಿ.
ಕನ್ಯಾ ರಾಶಿ
ಪಿಶಾಚ ಯೋಗದ ಕೆಟ್ಟ ಪರಿಣಾಮ ಕನ್ಯಾ ರಾಶಿಯ ಮೇಲೆ ಇರುವುದರಿಂದ ನೀವು ಅಕ್ಟೋಬರ್ 17ರವರೆಗೆ ತುಂಬಾನೇ ಜಾಗ್ರತೆವಹಿಸಬೇಕಾಗಿದೆ. ಈ ಸಮಯದಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗುವುದು. ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಕೆಟ್ಟದಾಗಿರುತ್ತದೆ. ವೃತ್ತಿ ಜೀವನದಲ್ಲಿ ತುಂಬಾನೇ ಅಡೆತಡೆ ಎದುರಾಗುವುದು. ಜೀವನದಲ್ಲಿ ತುಂಬಾನೇ ಏರಳಿತವಿರುತ್ತದೆ.
ಮೀನ ರಾಶಿ
ಈ ಶನಿ ಮತ್ತು ರಾಹು ಸಂಯೋಜನೆ ನಿಮಗೆ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಕುಟುಂಬದ ಸದಸ್ಯರ ನಡುವೆ ಆರೋಗ್ಯ ಸಮಸ್ಯೆವಿರಬಹುದು. ಮಾನಸಿಕವಾಗಿ ತುಂಬಾ ತೊಳಲಾಟವಿರುತ್ತದೆ. ಋಣಾತ್ಮಕ ಚಿಂತೆ ಕಾಡುವುದು. ವೃತ್ತಿ ಜೀವನದಲ್ಲಿ ಅನೇಕ ಅಡೆತಡೆಗಳು ಉಂಟಾಗುವುದು.
ಈ ಮೂರು ರಾಶಿಯವರು ಅಕ್ಟೋಬರ್ 17ರವರೆಗೆ ತುಂಬಾನೇ ಜಾಗ್ರತೆವಹಿಸಬೇಕು. ನೀವು ಈ ಅವಧಿಯಲ್ಲಿ ಧನಾತ್ಮಕವಾಗಿರಲು ಪ್ರಯತ್ನಿಸಿ. ದೇವರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ, ಇಷ್ಟದ ದೇವರನ್ನು ಪ್ರಾರ್ಥಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











