Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಜೂನ್ 6ಕ್ಕೆ ಶನಿ ಜಯಂತಿ: ಶನಿ ಸಾಡೇಸಾತಿಯ ಕೆಟ್ಟ ಪ್ರಭಾವ ಕಡಿಮೆ ಮಾಡಲು ಈ ಪರಿಹಾರ ಮಾಡಿದರೆ ಒಳ್ಳೆಯದು
ಈ ವರ್ಷ ಜೂನ್ 6ರಂದು ಶನಿ ಜಯಂತಿಯನ್ನು ಆಚರಿಸಲಾಗುವುದು, ಜ್ಯೇಷ್ಠಮಾಸದ ಕೃಷ್ಣ ಪಕ್ಷದ ಅಮವಾಸ್ಯೆಯಂದು ಶನಿ ಜಯಂತಿಯನ್ನು ಆಚರಿಸಲಾಗುವುದು.
ಶನಿಯು ನಮ್ಮ ಕರ್ಮದ ಫಲ ನೀಡುವ ಗ್ರಹವಾಗಿದೆ. ಶನಿಯು ಒಳ್ಳೆಯ ಹಾಗೂ ಕೆಟ್ಟ ಪ್ರಭಾವವಿರುತ್ತದೆ, ಕೆಟ್ಟ ಪ್ರಭಾವ ತುಂಬಾನೇ ಕಠೋರವಾಗಿರುವುದರಿಂದ ಜನರು ತುಂಬಾನೇ ಭಯ ಪಡುತ್ತಾರೆ.

ಶನಿಯು ಒಂದು ರಾಶಿಯಲ್ಲಿ ಎರಡೂವರೆ ವರ್ಷ ಇದ್ದು ನಂತರ ರಾಶಿ ಬದಲಾವಣೆ ಮಾಡುತ್ತದೆ, ಇದೀಗ ಶನಿಯು ಕುಂಭ ರಾಶಿಯಲ್ಲಿದೆ. ಇದೀಗ ಮಕರ, ಕುಂಭ, ಮೀನ ರಾಶಿಯಲ್ಲಿ ಶನಿ ಸಾಡೇಸಾತಿ ನಡೆಯುತ್ತಿದೆ.
ಶನಿ ಶಾಡೇಸಾತಿ ಇರುವವರು ಶನಿ ಜಯಂತಿಯಂದು ಈ ಪರಿಹಾರ ಮಾಡಿದರೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ.
ಮಕರ ರಾಶಿಯಲ್ಲಿ ಶನಿ ಸಾಡೇಸಾತಿ ಕೊನೆಯ ಹಂತ ನಡೆಯುತ್ತಿದೆ
ಮಕರ ರಾಶಿಯವರಲ್ಲಿ ಶನಿ ಸಾಡೇ ಸಾತಿಯ ಕೊನೆಯ ಹಂತವಿದು. ಈ ರಾಶಿಯವರಿಗೆ ಸಾಡೇ ಸತಿ 26 ಜನವರಿ 2017 ರಿಂದ ಪ್ರಾರಂಭವಾಯಿತು. 2025 ಮಾರ್ಚ್ 29 ರಂದು ಕೊನೆಗೊಳ್ಳುತ್ತದೆ.
ಕುಂಭ ರಾಶಿಯ ಮೇಲೆ ಸಾಡೇ ಸತಿ ಪ್ರಭಾವ
ಕುಂಭ ರಾಶಿಯ ಅಧಿಪತಿಯೂ ಶನಿದೇವನಾಗಿದ್ದು, ಈ ರಾಶಿಯಲ್ಲಿ ಶನಿಯ ಸಾಡೇ ಸತಿಯ ಎರಡನೇ ಹಂತ ನಡೆಯುತ್ತಿದೆ. ಕುಂಭ ರಾಶಿಯವರಿಗೆ 23 ಫೆಬ್ರವರಿ 2028 ರವರೆಗೆ ಶನಿ ಸಾಡೇಸಾತಿ ಪ್ರಭಾವ ಇರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಸಾಡೇ ಸತಿಯ ಮೊದಲ ಘಟ್ಟ ನಡೆಯುತ್ತಿದೆ. ಏಳೂವರೆ ವರ್ಷದ ಇದರ ಪ್ರಭಾವ ಇರಲಿದೆ, 2023ರಿಂದ ಶುರುವಾದ ಶನಿ ಸಾಡೇಸಾತಿಯಿಂದ 2030ರಲ್ಲಿ ಮುಕ್ತರಾಗುತ್ತಾರೆ.
ಶನಿ ಸಾಡೇಸಾತಿಯ ಕೆಟ್ಟ ಪ್ರಭಾವ ಕಡಿಮೆ ಮಾಡಲು ಸಾಡೇಸಾತಿಯಂದು ಈ ಪರಿಹಾರ ಮಾಡಿದರೆ ಒಳ್ಳೆಯದು:
ನೆರಳು ದಾನ ಮಾಡಿ
ಶನಿಯ ಸಾಡೇ ಸತಿ ಇರುವವರು ಶನಿ ಜಯಂತಿಯಂದು ಬೆಳಗ್ಗೆ ಸ್ನಾನ ಮಾಡಿ ದಿನ ಶನಿದೇವನ ದೇವಸ್ಥಾನಕ್ಕೆ ತೆರಳಿ ವಿಧಿವಿಧಾನಗಳ ಪ್ರಕಾರ ಪೂಜೆ ಮಾಡಿದರೆ ಒಳ್ಳೆಯದು. ಸಾಸಿವೆಯೆಣ್ಣೆಯನ್ನು ಕಬ್ಬಿಣದ ತಟ್ಟೆಗೆ ಹಾಕಿ ಅದರಲ್ಲಿ ಮುಖವನ್ನು ನೋಡಿ ಆ ಎಣ್ಣೆಯನ್ನು ಬಡವರಿಗೆ ದಾನ ಮಾಡಿ. ಈ ರೀತಿ ಮಾಡುವುದರಿಂದ ಸಾಡೇಸಾತಿ ಮತ್ತು ಶನಿ ಧೈಯ್ಯಾದ ದುಷ್ಪರಿಣಾಮಗಳು ದೂರವಾಗುವುದು.
ಈ ದಿನ ಬಡವರಿಗೆ ದಾನ ಮಾಡಿ
ಶನಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿದ ಬಳಿಕ ಬಡವರಿಗೆ ಮತ್ತು ನಿರ್ಗತಿಕರಿಗೆ ಹೊದಿಕೆ, ಕಪ್ಪು ಬಟ್ಟೆ, ಕಬ್ಬಿಣ, ಉಕ್ಕಿನ ಪಾತ್ರೆಗಳು, ಕಪ್ಪು ಎಳ್ಳು, ಕಪ್ಪು ಎಳ್ಳುಂಡೆ ಇವುಗಳನ್ನು ದಾನ ಮಾಡಿ. ಇದರಿಂದ ಶನಿಯು ಸಂತುಷ್ಟನಾಗುತ್ತಾನೆ, ಶನಿ ಕೆಟ್ಟ ಪ್ರಬಾವ ಕಡಿಮೆಯಾಗುವುದು. ಈ ದಿನ ಆಲದ ಮರದ ಕೆಳಗಡೆ ಸಾಸಿವೆಯೆಣ್ಣೆ ದೀಪ ಹಚ್ಚಿದರೆ ಒಳ್ಳೆಯದು.
ಹನುಮಂತನ ಪೂಜೆ ಮಾಡಿ
- ಜ್ಯೇಷ್ಠ ಅಮಾವಾಸ್ಯೆಯ ದಿನದಂದು ಹನುಮಂತನನ್ನು ಪೂಜಿಸಿ, ಈ ದಿನ ಹನುಮಾನ್ ಚಾಲೀಸ ಪಠಿಸಿ. ಈ ದಿನ ಹನುಮಾನ್ ಚಾಲೀಸ ಪಠಿಸಿ.ಸ
- ಶನಿಯ ಕೆಟ್ಟ ಪ್ರಭಾವ ಕಡಿಮೆ ಮಾಡಲು ಕಪ್ಪು ಕುದುರೆಯ ಉಗುರಿನಿಂದ ಮಾಡಿದ ಉಂಗುರವನ್ನು ಶನಿ ಜಯಂತಿಯಂದು ಸೂರ್ಯಾಸ್ತದ ಸಮಯದಲ್ಲಿ ಬಲಗೈಯ ಮಧ್ಯದ ಬೆರಳಿಗೆ ಧರಿಸಿದರೆ ಶನಿಯ ಕೆಟ್ಟ ಪ್ರಭಾವ ಕಡಿಮೆಯಾಗುವುದು.
- ಶನಿ ಜಯಂತಿಯಂದು ಬೆಳಗ್ಗೆ ಸ್ನಾನ ಇತ್ಯಾದಿ ಮಾಡಿದ ನಂತರ ಆಲದ ಮರಕ್ಕೆ ನೀರನ್ನು ಅರ್ಪಿಸಿ 7 ಬಾರಿ ಪ್ರದಕ್ಷಿಣೆ ಮಾಡಿ. ಸಂಜೆ ಬಂದು ಸಂಜೆ ಸಾಸಿವೆಯೆಣ್ಣೆಯ ದೀಪವನ್ನು ಬೆಳಗಿಸಿ.
- ಈ ದಿನ ನೀವು ಹಿಟ್ಟು, ಸಕ್ಕರೆ, ಕಪ್ಪು ಎಳ್ಳು ಬೆರೆಸಿ ಇರುವೆಗಳಿಗೆ ಆಹಾರ ನೀಡಿ.
- ಶನಿ ಜಯಂತಿಯಂದು ಅಸಹಾಯಕ ಜನರಿಗೆ ನಿಮ್ಮ ಕೈಯಲ್ಲಿ ಎಷ್ಟು ಆಗುತ್ತೋ ಅಷ್ಟು ಸಹಾಯ ಮಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications