Latest Updates
-
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ?
ಅಪರೂಪದ ಶನಿ ಪುಷ್ಯ ಯೋಗ: ಕಷ್ಟನಿವಾರಣೆಗೆ ಶನಿಗೆ ಈ ಪರಿಹಾರ ಮಾಡುವುದು ಒಳ್ಳೆಯದು
ನವೆಂಬರ್ ತಿಂಗಳ ಮೊದಕಲ ಶನಿವಾರ ಬಹಳ ವಿಶೇಷವಾಗಿದೆ. ಜ್ಯೋತಿಷ್ಯದಲ್ಲಿ 27 ನಕ್ಷತ್ರಗಳಲ್ಲಿ ಪುಷ್ಯ ನಕ್ಷತ್ರವನ್ನು ತುಂಬಾ ಶ್ರೇಷ್ಠ ನಕ್ಷತ್ರವೆಂದು ಪರಿಗಣಿಸಲಾಗಿದೆ. ಈ ಶನಿವಾರದಂದು ಶನಿ ಪುಷ್ಯ ಯೋಗದ ಅಪರೂಪದ ಸಂಯೋಜನೆ ನಡೆಯಲಿದೆ. ಈ ರೀತಿಯ ಅಪರೂಪದ ಘಟನೆ ವರ್ಷದಲ್ಲಿ ಒಂದು ಬಾರಿ ಮಾತ್ರ ಸಂಭವಿಸಲಿದೆ, ಅದರಲ್ಲೂ ಈ ಬಾರಿ ಶನಿ ಪುಷ್ಯ ಹಾಗೂ ರವಿ ಪುಷ್ಯ ಏರ್ಪಟ್ಟಿದೆ, 400 ವರ್ಷಗಳಿಗೊಮ್ಮೆ ಸಂಭವಿಸುವುದು ಎಂದು ಹೇಳಲಾಗುವುದು.
ಅಲ್ಲದೆ ಈ ದಿನ ಶನಿಯೂ ರಾಶಿ ಬದಲಾವಣೆ ಮಾಡುತ್ತಿರುವುದು ಕಾಕತಾಳೀಯವೇ ಸರಿ. ಜ್ಯೋತಿಷ್ಯದಲ್ಲಿ ಗುರು ಪುಷ್ಯ ಯೋಗದಷ್ಟೇ ಶನಿ ಪುಷ್ಯ ಯೋಗವೂ ಮಂಗಳಕರ ಹಾಗೂ ಅಪರೂಪದ ಯೋಗವಾಗಿದೆ.

ಈ ಶನಿ ಪುಷ್ಯ ಯೋಗದಲ್ಲಿ ದೀರ್ಘಕಾಲದ ಹೂಡಿಕೆ ಮಾಡುವುದು ಬಹಳ ಮಂಗಳಕರವೆಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪುಷ್ಯ ನಕ್ಷತ್ರದಲ್ಲಿ ಮಾಡುವ ಪೂಜೆ ಮತ್ತು ಪರಿಹಾರಗಳು ಕೂಡ ಶುಭ ಫಲವನ್ನು ನೀಡುತ್ತವೆ. ಈ ಬಾರಿ ಇಂದು ಅಂದರೆ ಜೂನ್ 4, ಶನಿವಾರದಂದು ಪುಷ್ಯ ನಕ್ಷತ್ರದ ನಿಮಿತ್ತ ಶನಿ-ಪುಷ್ಯರ ಶುಭ ಸಂಯೋಗ ಉಂಟಾಗಿದೆ.
ಶನಿ ಪುಷ್ಯ ಯೋಗದಂದ ಈ ಪರಿಹಾರಗಳನ್ನು ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು:
* ಈ ದಿನ ಹನುಮಂತನನ್ನು ಆರಾಧಿಸಿ.
* ಶನಿವಾರದಂದು ಹನುಮಾನ್ ಚಾಲೀಸಾ ಅಥವಾ ಹನುಮಾನ್ ಬಹು ಅಷ್ಟಕವನ್ನು ಪಠಿಸುವುದರಿಂದ ಶನಿಯ ಬಾಧೆಯಿಂದ ಪರಿಹಾರ ಸಿಗುವುದು.
* ಆಲದ ಮರದ ಎಲೆಯಲ್ಲಿ ಓಂ ಶಂ ಶನೈಶ್ಚರಾಯ ನಮಃ ಎಂಬ ಮಂತ್ರವನ್ನು ಬರೆದು ಈ ಮಂತ್ರವನ್ನು 108 ಬಾರಿ ಪಠಿಸುತ್ತಾ ಆಲದ ಮರಕ್ಕೆ ಸುತ್ತು ಹಾಕಿ.
* ಈ ದಿನ ಶನಿ ದೇವರಿಗೆ ಸಾಸಿವೆಯೆಣ್ಣೆ ಅರ್ಪಿಸಿ.
* ಅನಾಥರಿಗೆ ದಾನ ಮಾಡಿ
* ಕಪ್ಪು ಎಳ್ಳು, ಕಪ್ಪು ಕಂಬಳಿಗಳನ್ನು ದಾನ ಮಾಡಿ
ಶನಿ ಮಂತ್ರಗಳನ್ನು ಪಠಿಸಿ
ಶನಿ ಮಹಾಮಂತ್ರ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ|
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ||''
ಶನಿ ಗಾಯತ್ರಿ ಮಂತ್ರ
ಓಂ ಭಗಭವಾಯ ವಿದ್ಮಹೈಂ ಮೃತ್ಯುರೂಪಾಯ ಧೀಮಹಿ ತನ್ನೋ ಶನಿಃ ಪ್ರಚೋದಯಾತ್|
ಓಂ ಶನ್ನೋದೇವೀರ್ಭೀಷ್ಟಯ ಆಪೋ ಭವಂತು ಪೀತಯೇ ಶಂಯೋರ್ಭಿಶ್ರವಂತು ನಃ|''
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
