Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಫೆ.6ರಂದು ಷಟಿಲಾ ಏಕಾದಶಿ: ಅದೃಷ್ಟಕ್ಕಾಗಿ, ಆರೋಗ್ಯಕ್ಕಾಗಿ ಯಾವ ಪರಿಹಾರ ಮಾಡಿದರೆ ಒಳ್ಳೆಯದು?
ಫೆಬ್ರವರಿ 6ಕ್ಕೆ ಷಟಿಲಾ ಏಕಾದಶಿ, ಪ್ರತಿಯೊಂದು ಏಕಾದಶಿ ಅದರದ್ದೇ ಆದ ಮಹತ್ವವನ್ನು ಹೊಂದಿದೆ. ಈ ಏಕಾದಶಿಯಂದ ಅನ್ನದಾನಕ್ಕೆ ತುಂಬಾನೇ ಮಹತ್ವವಿದೆ. ಅನ್ನದಾನ ಮಾಡುವುದರಿಂದ ಇಷ್ಟಾರ್ಥಗಳು ನೆರವೇರುವುದು, ಅಲ್ಲದೆ ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂಬ ನಿಯಮಗಳಿವೆ, ಈ ದಿನ ಯಾವ ಪರಿಹಾರ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಷಟಿಲಾ ಏಕಾದಶಿಯ ಪೂಜಾ ಮುಹೂರ್ತ
ತಿಥಿ ಪ್ರಾರಂಭ: ಮಾಘ ಮಾಸದ ಸಕೃಷ್ಣ ಏಕಾದಶಿ ದಿನಾಂಕ ಆರಂಭ: 5 ಫೆಬ್ರವರಿ ಸಂಜೆ 05:24ಕ್ಕೆ ಪ್ರಾರಂಭ
ಮಾಘ ಕೃಷ್ಣ ಏಕಾದಶಿ ತಿಥಿಯ ಅಂತ್ಯ: ಫೆಬ್ರವರಿ 6, ಸಂಜೆ 04:07 ಕ್ಕೆ
ಪಾರಣ ಸಮಯ: 7 ಫೆಬ್ರವರಿ ಬೆಳಗ್ಗೆ 07:06 ರಿಂದ 09:18 ರವರೆಗೆ
ಷಟಿಲಾ ಏಕಾದಶಿಯಂದು ಏನು ಮಾಡಬೇಕು?
- ಷಟಿಲಾ ಏಕಾದಶಿಯ ದಿನದಂದು ಪುಣ್ಯ ನದಿಯಲ್ಲಿ ಸ್ನಾನ ಮಾಡುವುದು ಒಳ್ಳೆಯದು, ಪುಣ್ಯ ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಬಕೆಟ್ ನೀರಿಗೆ ಸ್ವಲ್ಪ ಗಂಗಾಜಲ ಸೇರಿಸಿ ಸ್ನಾನ ಮಾಡಿ.
- ಈ ದಿನದ ದಾನಕ್ಕೂ ವಿಶೇಷ ಮಹತ್ವವಿದೆ. ಈ ದಿನದಂದು ಎಳ್ಳನ್ನು ದಾನ ಮಾಡುವುದರಿಂದ ಸಮಸ್ಯೆಗಳು ದೂರಾಗುವುದು.
- ಷಟಿಲಾ ಏಕಾದಶಿಯ ದಿನದಂದು ಎಳ್ಳನ್ನು ವಿಷ್ಣುವಿಗೆ ಅರ್ಪಿಸಬೇಕು ಹೀಗೆ ಅರ್ಪಿಸುವಾಗ ವಿಷ್ಣು ಮಂತ್ರಗಳನ್ನು ಪಠಿಸುತ್ತಾ ಎಳ್ಳನ್ನು ಅರ್ಪಿಸಿ. ದೇವರ ಪಂಚಾಮೃತದಲ್ಲಿ ಎಳ್ಳು ಬೆರೆಸಿ ತಯಾರಿಸಿ.
- ಈ ದಿನ ಸ್ನಾನದ ನೀರಿಗೂ ಎಳ್ಳು ಸೇರಿಸಬೇಕು. ಹೀಗೆ ಮಾಡುವುದರಿಂದ ರೋಗ ಬಾಧೆಯಿಂದ ಮುಕ್ತರಾಗುವುದು ಎಂದು ನಂಬಲಾಗಿದೆ.
- ಷಟಿಲಾ ಏಕಾದಶಿಯ ದಿನದಂದು ಉಪವಾಸವಿದ್ದು ವಿಷ್ಣುವನ್ನು ಸ್ಮರಿಸಿ.
ಷಟಿಲಾ ಏಕಾದಶಿಯಂದು ಏನು ಮಾಡಬಾರದು?
- ಷಟಿಲಾ ಏಕಾದಶಿಯಂದು ತಾಮಸಿಕ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಈ ದಿನ ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.
- ಷಟಿಲಾ ಏಕಾದಶಿಯಂದು ದೈಹಿಕ ಸಂಪರ್ಕ ಮಾಡಬಾರದು, ಇಡೀ ದಿನ ವಿಷ್ಣುವಿನ ಧ್ಯಾನದಲ್ಲಿ ಕಾಲ ಕಳೆಯಬೇಕು
- ಈ ದಿನ ಬದನೆಯನ್ನು ಸೇವಿಸಬೇಡಿ.
- ಈ ದಿನ ಕೋಪಗೊಳ್ಳಬೇಡಿ, ಬೇರೆಯವರಿಗೆ ನೋವುಂಟು ಮಾಡಬೇಡಿ
- ಏಕಾದಶಿಯ ದಿನ ಸೌದೆ ಒಡೆಯಬೇಡಿ.
ಷಟಿಲಾ ಏಕಾದಶಿಯಂದು ಪರಿಹಾರ
ಉತ್ತಮ ಆರೋಗ್ಯಕ್ಕೆ
ಏಕಾದಶಿಯಂದು ಸ್ನಾನ ಮಾಡುವಾಗ ಅದಕ್ಕೆ ಸ್ವಲ್ಪ ಎಳ್ಳನ್ನು ಹಾಕಿ ಸ್ನಾನ ಮಾಡಿ. ಹೀಗೆ ಮಾಡುವುದರಿಂದ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ದೂರಾಗುವುದು ಎಂದು ಹೇಳಲಾಗುವುದು. ಎಳ್ಳು ತಿನ್ನುವುದರಿಂದ ವ್ಯಕ್ತಿಯ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟಕ್ಕಾಗಿ
ಎಳ್ಳುಂಡೆ ಹಾಗೂ ನಾಣ್ಯಗಳನ್ನು ದಾನ ಮಾಡಿ, ಹೀಗೆ ಮಾಡುವುದರಿಂದ ನಿಮ್ಮ ಅದೃಷ್ಟ ಬಲವಾಗುವುದು ಎಂದು ಹೇಳಲಾಗುವುದು.
ಶನಿದೋಷಕ್ಕೆ ಪರಿಹಾರ
ನಿಮ್ಮ ಜಾತಕದಲ್ಲಿ ಶನಿ ದೋಷವಿದ್ದರೆ, ರಾಹು ಅಥವಾ ಕೇತು ಅಥವಾ ಪಿತ್ರ ದೋಷಗಳ ದುಷ್ಪರಿಣಾಮಗಳು ಇದ್ದರೆ, ನೀವು ಷಟಿಲಾ ಏಕಾದಶಿಯ ದಿನದಂದು ಕಪ್ಪು ಎಳ್ಳನ್ನು ದಾನ ಮಾಡಬೇಕು.
ಅನ್ನದಾನ
ಈ ದಿನ ಬಡವರಿಗೆ , ನಿರ್ಗತಿಕರಿಗೆ ಅನ್ನದಾನ ಮಾಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
