Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಜುಲೈ 16ರವರೆಗೆ ಶುಕ್ರಾದಿತ್ಯ ಯೋಗ: ಈ 3 ರಾಶಿಯವರಿಗೆ ಅದೃಷ್ಟದ ಸಮಯವಿದು
ಈ ಮಾಸ ಎರಡು ಪ್ರಮುಖ ಗ್ರಹಗಳ ಸಂಯೋಗವಾಗಿದೆ , ಅದು ಕರ್ಕ ರಾಶಿಯಲ್ಲಿ ಸಂಭವಿಸಿದೆ. ಎಲ್ಲಾ ಗ್ರಹಗಳ ಅಧಿಪತಿಯಾಗಿರುವ ಸೂರ್ಯ ಹಾಗೂ ಅದೃಷ್ಟದ ಗ್ರಹವಾದ ಶುಕ್ರನ ಯುತಿ ಅಥವಾ ಸಂಯೋಗ ಜುಲೈ 7ಕ್ಕೆ ಸಂಭವಿಸಿದೆ.
ಸೂರ್ಯನು ಜೂನ್ 15ರಿಂದ ಕರ್ಕ ರಾಶಿಯಲ್ಲಿಯೇ ಇದ್ದಾನೆ, ಇದೀಗ ಜುಲೈ 7ಕ್ಕೆ ಆ ರಾಶಿಗೆ ಶುಕ್ರನ ಸಂಚಾರವಾಗಿರುವುದರಿಂದ ಶುಕ್ರಾದಿತ್ಯ ಯೋಗ ಉಂಟಾಗಿದೆ. ಈ ಶುಕ್ರಾದಿತ್ಯ ಯೋಗವನ್ನು ತುಂಬಾನೇ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅಲ್ಲದೆ ಈ ಯೋಗವು ಗ್ರಹಗಳ ಸ್ಥಾನದ ಅನುಸಾರ ಕೆಲವೊಂದು ರಾಶಿಗಳಿಗೆ ಹೆಚ್ಚಿನ ಪ್ರಯೋಜನ ನೀಡಲಿದೆ.

ಜುಲೈ 16ಕ್ಕೆ ಸೂರ್ಯನು ಸಿಂಹ ರಾಶಿಗೆ ಸಂಚರಿಸಲಿದೆ, ಅಲ್ಲಿಯವರೆಗೆ ಈ ಶುಕ್ರಾದಿತ್ಯ ಯೋಗ ಇರಲಿದೆ, ಈ ರಾಶಿಗಳಿಗೆ ಅನುಕೂಲಕರವಾಗಿದೆ ನೋಡಿ:
ಮಿಥುನ ರಾಶಿ
ಮಿಥುನ ರಾಶಿಯ 2ನೇ ಮನೆಯಲ್ಲಿ ಈ ಶುಕ್ರಾದಿತ್ಯ ಯೋಗವು ರೂಪುಗೊಂಡಿದೆ. ಇದು ಮಿಥುನ ರಾಶಿಯವರಿಗೆ ಹೆಚ್ಚು ಪ್ರಯೋಜನ ನೀಡಲಿದೆ. ನಿಮ್ಮ ಯಾವುದಾದರೂ ಅಪೂರ್ಣ ಕೆಲಸವಿದ್ದರೆ ಈ ಅವಧಿಯಲ್ಲಿ ಪ್ರಯತ್ನಿಸಿದರೆ ಪೂರ್ಣವಾಗಲಿದೆ. ವೃತ್ತಿ ಬದುಕಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ಅವಧಿ ಅನುಕೂಲಕರವಾಗಿದೆ, ನಿಮ್ಮಲ್ಲಿ ಧೈರ್ಯವಿರುತ್ತದೆ ಜೊತೆಗೆ ಅದೃಷ್ಟದ ಬೆಂಬಲವೂ ಇರುವುದರಿಂದ ನಿಮ್ಮ ಕಾರ್ಯಗಳಲ್ಲಿ ಯಶಸ್ಸಿ ಪಡೆಯಲು ಸಾಧ್ಯವಾಗುವುದು. ಬೇರೆ ಕಡೆ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ತುಂಬಾನೇ ಉತ್ತಮವಾಗಿದೆ. ಇನ್ನು ಆರ್ಥಿಕವಾಗಿಯೂ ಉತ್ತಮ ಪ್ರಯೋಜನ ಪಡೆಯುತ್ತೀರಿ.
ಕನ್ಯಾರಾಶಿ
ಕನ್ಯಾ ರಾಶಿಯವರಲ್ಲಿ 11ನೇ ಮನೆಯಲ್ಲಿ ಈ ಶುಕ್ರಾದಿತ್ಯ ಯೋಗ ಉಂಟಾಗಿದೆ. ಈ ಅವಧಿ ನಿಮಗೆ ಲಾಭದಾಯಕವಾಗಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರಿಗೆ ಈ ಅವಧಿ ಉತ್ತಮವಾಗಿದೆ. ಈ ಸಮಯದಲ್ಲಿ ಮಾಡುವ ಆಸ್ತಿ ವ್ಯವಹಾರ ಲಾಭದಾಯಕವಾಗಿದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ಶುಕ್ರಾದಿತ್ಯ ಯೋಗವು ಕುಂಭ ರಾಶಿಯವರಿಗೂ ತುಂಬಾನೇ ಪ್ರಯೋಜನಕಾರಿಯಾಗಿದೆ. ಶುಕ್ರ ಮತ್ತು ಸೂರ್ಯನ ಸಂಯೋಗದಿಂದಾಗಿ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತಾರೆ. ಇದು 5ನೇ ಮನೆಯಲ್ಲಿ ರೂಪುಗೊಂಡಿರುವುದರಿಂದ ಐದನೇ ಮನೆಯಲ್ಲಿ ಶುಕ್ರಾದಿತ್ಯ ರಾಜಯೋಗವು ರೂಪುಗೊಂಡಿದೆ, ಅಲ್ಲದೆ ಶನಿಯೂ ಕೂಡ ಇದೇ ಮನೆಯಲ್ಲಿದೆ ಈ ಎಲ್ಲಾ ಗ್ರಹಗಳಿಂದಾಗಿ ನೀವು ತುಂಬಾನೇ ಅನುಕೂಲಕರ ಪ್ರಯೋಜನ ಪಡೆಯುತ್ತೀರಿ. ಉದ್ಯೋಗಿಗಳು ಲಾಭ ಗಳಿಸುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications