Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ತಿರುಪತಿಯ ಗರ್ಭಗುಡಿಯಲ್ಲಿ ಮಂದಹಾಸ ಬೀರಿದ ತಿಮ್ಮಪ್ಪ: ಈ ಪವಾಡ ದೃಶ್ಯದ ವೀಡಿಯೋ ವೈರಲ್
ತಿರುಪತಿ ತಿಮ್ಮಪ್ಪನ ಆಗಾಗ ಚಮತ್ಕಾರ ತೋರಿಸುತ್ತಲೇ ಇರುತ್ತಾನೆ, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಪ್ರತಿನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಹರಿಕೆಗಳನ್ನು ತೀರಿಸಲೆಂದೇ ಇಲ್ಲಿಗೆ ಜನರು ಬರುತ್ತಾರೆ, ತಿಮ್ಮಪ್ಪನ ಬಳಿ ಭಕ್ತಿಯಿಂದ ಬೇಡಿಕೊಂಡರೆ ತನ್ನ ಭಕ್ತರ ಎಲ್ಲಾ ಕೋರಿಕೆ ನೆರವೇರಿಸಿಕೊಡುತ್ತಾರೆ ತಿಮ್ಮಪ್ಪ ಎಂದು ಭಕ್ತರು ಬಲವಾಗಿ ನಂಬುತ್ತಾರೆ. ಇದೀಗ ಒಂದು ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಪೂಜೆಯ ವೇಳೆ ತಿಮ್ಮಪ್ಪ ಮುಖದಲ್ಲಿ ಮಂದಹಾಸ ಕಂಡು ಬಂದ ದೃಶ್ಯ ಅದಾಗಿದ್ದು ಅದನ್ನು ನೋಡಿದ ಭಕ್ತರು ಭಾವಪರವಶರಾಗಿದ್ದಾರೆ.

ನವರಾತ್ರಿಯ ಸಂದರ್ಭದಲ್ಲಿ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲೂ ಹಲವು ವಿಶೇಷ ಪೂಜೆಗಳನ್ನು ನಡೆಯುತ್ತಿದೆ. ಹಾಗಾಗಿ ಈ ಸಮಯದಲ್ಲಿ ಇಲ್ಲಿಗೆ ಆಗಮಿಸುವ ಭಕ್ತರ ಸಂಖ್ಯೆಯೂ ಅಧಿಕವಿರುತ್ತದೆ. ಇಲ್ಲಿ ಅಕ್ಟೋಬರ್ 23ರವರೆಗೆ ನವರಾತ್ರಿ ಬ್ರಹ್ಮೋತ್ಸವ ನಡೆಯುತ್ತಿದ್ದು ಪೂಜೆಯ ವೇಳೆ ತಿಮ್ಮಪ್ಪನ ಮುಖದಲ್ಲಿ ಮಂದಹಾಸ ಮೂಡಿರುವುದು ವೀಡಿಯೋದಲ್ಲಿ ಚಿತ್ರೀಕರಣವಾಗಿದ್ದು ಆ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ.
ಕಳೆದ ಬಾರಿಯೂ ಅಪರೂಪದ ಘಟನೆ ನಡೆದಿತ್ತು
ಆಕಾಶದಲ್ಲಿ ಕಾಮನ ಬಿಲ್ಲು ಮೂಡುವುದು ಸಹಜ, ಆದರೆ ತಿರುಪತಿ ತಿಮ್ಮಪ್ಪನ ದೇವಾಲಯ ಸುತ್ತಲೂ ಆಕಾಶದಲ್ಲಿ ಕಾಮನಬಿಲ್ಲು ಮೂಡಿ ಬಂದಿತ್ತು, ಆ ಸುಂದರ ದೃಶ್ಯವನ್ನು ನೋಡಿದವರು ಬಾಲಾಜಿಯೇ ಕಾಮನಬಿಲ್ಲಿನ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಿದ್ದಾನೆ ಎಂದು ಭಕ್ತಿಯಿಂದ ಕೈ ಮುಗಿದಿದ್ದರು, ಅಷ್ಡೊಂದು ಆಕರ್ಷಕವಾಗಿತ್ತು ಆ ದೃಶ್ಯ. ಇದುವರೆಗೂ ಅಂಥ ಘಟನೆ ಯಾರೂ ನೋಡಿರಲಿಲ್ಲ, ದೇವಾಲಯವನ್ನು ಸಂಪೂರ್ಣವಾಗಿ ಆವರಿಸಿದ ಕಾಮನ ಬಿಲ್ಲಿನ ಸುಂದರ ದೃಶ್ಯದ ವೀಡಿಯೋ ತುಂಬಾನೇ ವೈರಲ್ ಆಗಿತ್ತು, ಇದೀಗ ಗರ್ಭಗುಡಿಯಲ್ಲಿರುವ ತಿಮ್ಮಪ್ಪ ಮಂದಹಾಸ ಬೀರಿರುವ ವೀಡಿಯೋ ವೈರಲ್ ಆಗುತ್ತಿದೆ.
ದೇಶದ ಅತ್ಯಂತ ಶ್ರೀಮಂತ ದೇವಾಲಯವಾಗಿರುವ ತಿರುಪತಿಗೆ ಪ್ರತಿನಿತ್ಯವೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಿರುಪತಿ ದೇವಾಲಯದ ಗರ್ಭಗುಡುಯನ್ನು ಆನಂದ ನಿಲಯಂ ಎಂದು ಕರೆಯಲಾಗುವುದು. ಇಲ್ಲಿ ಬಾಲಾಜಿಯ ಸುಂದರವಾದ ವಿಗ್ರಹವಿದೆ. ಆ ವಿಗ್ರಹಕ್ಕೆ ಪ್ರತಿನಿತ್ಯ ಪೂಜೆ ಸಲ್ಲಿಸಲಾಗುವುದು, ಅದರಂತೆ ನವರಾತ್ರಿ ಬ್ರಹ್ಮೋತ್ಸವ ಪೂಜೆಯನ್ನು ಅರ್ಚಕರು ಮಂಗಳಾರತಿ ಎತ್ತುವಾಗ ತಿಮ್ಮಪ್ಪನ ವಿಗ್ರಹದಲ್ಲಿ ಮಂದಹಾಸ ಮೂಡಿದಂತೆ ಕಂಡು ಬಂದಿರುವುದು ಪವಾಡವಲ್ಲದೆ ಮತ್ತೇನು ಅಲ್ವಾ?
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications