Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
100 ವರ್ಷಗಳ ಬಳಿಕ ಸೂಪರ್ಮೂನ್ ದಿನ ಉಂಟಾಗಲಿದೆ ಈ ಯೋಗ: ಕಾರ್ತಿಕ ಹುಣ್ಣಿಮೆ ಬಳಿಕ 3 ರಾಶಿಗಳ ಸಂಪತ್ತು ಹೆಚ್ಚಲಿದೆ
ನವೆಂಬರ್ 15ಕ್ಕೆ ಕಾರ್ತಿಕ ಹುಣ್ಣಿಮೆ, ಅಲ್ಲದೆ ವರ್ಷದ ಕೊನೆಯ ಸೂಪರ್ ಮೂನ್ ಕೂಡ ಇದೇ ದಿನ ಕಂಡು ಬರಲಿದೆ. ಜ್ಯೋತಿಷ್ಯ ದೃಷ್ಟಿಯಿಂದ ಈ ದಿನ ತುಂಬಾನೇ ಮಹತ್ವದ್ದಾಗಿದೆ. ಸೂಪರ್ ಮೂನ್ ಎಂದರೇನು? ಜ್ಯೋತಿಷ್ಯವು ಸೂಪರ್ ಮೂನ್ ಬಳಿಕ ಕೆಲವೊಂದು ರಾಶಿಗಳಿಗೆ ತುಂಬಾನೇಅದ್ಭುತವಾಗಿರಲಿದೆ ಎಂದು ಹೇಳಿದೆ, ಈ ಎಲ್ಲದರ ಬಗ್ಗೆ ಮಾಹಿತಿ ನೋಡೋಣ:

ಮೊದಲಿಗೆ ಸೂಪರ್ ಮೂನ್ ಎಂದರೇನು?
ಸೂಪರ್ಮೂನ್ ದಿನದಂದು ಚಂದ್ರ ದೊಡ್ಡ ಬೃಹದಾಕಾರದಲ್ಲಿ ಗೋಚರಿಸುತ್ತಾನೆ. ಈ ದಿನ ಚಂದ್ರ ಮತ್ತಷ್ಟು ಪ್ರಕಾಶಮಾನವಾಗಿ ಗೋಚರಿಸುತ್ತಾರೆ. ಹುಣ್ಣಿಮೆಯಂದು ಚಂದ್ರನು ಭೂ ಕಕ್ಷೆಯ ಸಮೀಪ ಬರುತ್ತಾನೆ, ಹೀಗಾಗಿ ಚಂದ್ರನ ಗಾತ್ರ ಮತ್ತಷ್ಟು ದೊಡ್ಡದಾಗಿ ಗೋಚರಿಸುವುದು. ಇದನ್ನು ನೀವು ಬರಿಗಣ್ಣಿನಿಂದ ನೋಡಬಹುದು, ಚಂದ್ರ ದೊಡ್ಡ ಆಕಾರದಲ್ಲಿ ಗೋಚರಿಸುತ್ತಾನೆ.
ಕಾರ್ತಿಕ ಪೂರ್ಣಿಮೆಯಂದು ಸೂಪರ್ ಮೂನ್ : ಪ್ರತಿಮಾಸ ಹುಣ್ಣಿಮೆ ಮತ್ತು ಅಮವಾಸ್ಯೆ ಬರುತ್ತದೆ, ಆದರೆ ಕೆಲ ಹುಣ್ಣಿಮೆ, ಕೆಲ ಅಮವಾಸ್ಯೆ ಜ್ಯೋತಿಷ್ಯ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿರುತ್ತದೆ. ನವೆಂಬರ್ನಲ್ಲಿ ಹುಣ್ಣಿಮೆ 15ಕ್ಕೆ ಬಂದಿದೆ, ಈಗ ಕಾರ್ತಿಕ ಮಾಸ ಕೂಡ ಹೌದು, ಕಾರ್ತಿಕ ಮಾಸ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವದ್ದಾಗಿದೆ. ಕಾರ್ತಿಕ ಹುಣ್ಣಿಮೆ ಮಾಡುವ ನದಿ ಸ್ನಾನ, ಕಾರ್ತಿಕ ಹುಣ್ಣಿಮೆಯಂದು ಮಾಡುವ ದಾನ ಎಲ್ಲದಕ್ಕೂ ತುಂಬಾನೇ ಮಹತ್ವವಿದೆ.
ಕಾರ್ತಿಕ ಹುಣ್ಣಿಮೆಯಂದು ಉಂಟಾಗಲಿದೆ ಗಜಕೇಸರಿ ಯೋಗ
ಕಾರ್ತಿಕ ಪೂರ್ಣಿಮೆಯಂದು ರಾತ್ರಿ ಗಜಕೇಸರಿ ಯೋಗ ಉಂಟಾಗಿದೆ, ಇದೇ ದಿನ ಬುಧಾದಿತ್ಯ ರಾಜ ಯೋಗವೂ ಇದೆ, ಈ ಯೋಗ ಕಾರ್ತಿಕ ಪೂರ್ಣಿಮೆಯಂದು ಸುಮಾರು 30 ವರ್ಷಗಳ ಬಳಿಕ ಸಂಭವಿಸಲಿದೆ. ಅಲ್ಲದೆ ಇದೇ ದಿನ ವರಿಯಾನ್ ಯೋಗ ಉಂಟಾಗುತ್ತದೆ, ಈ ಯೋಗ ಸುಮಾರು 100 ವರ್ಷಗಳ ಬಳಿಕ ಈ ವಿಶೇಷ ದಿನ ಇರಲಿದೆ. ಈ ಎಲ್ಲಾ ಯೋಗ ಕೆಲ ರಾಶಿಗಳಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ.
ಈ ವಿಶೇಷ ಯೋಗದಿಂದಾಗಿ ಈ ರಾಶಿಗಳ ಸಂಪತ್ತು ವೃದ್ಧಿಸಲಿದೆ:
ಮೇಷ ರಾಶಿ
ಕಾರ್ತಿಕ ಹುಣ್ಣಿಮೆಯಂದು ಉಂಟಾಗುವ ಶುಭ ಯೋಗದಿಂದಾಗಿ ಮೇಷ ರಾಶಿಯವರ ಬದುಕಿನಲ್ಲಿ ಅದ್ಭುತ ಬೆಳವಣಿಗೆಯಾಗಲಿದೆ. ಶ್ರೀ ವಿಷ್ಣುವಿನ ಕೃಪೆ ನಿಮ್ಮ ಮೇಲಿರಲಿದೆ, ಇದರಿಂದಾಗಿ ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಯೋಗವು ಸಮಾಜದಲ್ಲಿ ನಿಮ್ಮ ಸ್ಥಾನ ಮಾನ ಹೆಚ್ಚಿಸಲಿದೆ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುವಿರಿ, ಲಕ್ಷ್ಮಿ ಕೃಪೆ ನಿಮ್ಮ ಮೇಲೆ ಇರುವುದರಿಂದ ನಿಮ್ಮೆಲ್ಲಾ ಆಸೆ ಈಡೇರಲಿದೆ. ಮನೆ ಕಟ್ಟಬೇಕು, ಆಸ್ತಿ ಖರೀದಿಸಬೇಕು, ವಾಹನ ಖರೀದಿಸಬೇಕು ಈ ಬಗೆಯ ಬಯಕೆ ಇದ್ದರೆ ಈ ಯೋಗದ ಬಲದಿಂದಾಗಿ ನೆರವೇರಲಿದೆ.
ತುಲಾ ರಾಶಿ
ಈ ಎಲ್ಲಾ ಯೋಗಗಳ ಬಲದಿಂದಾಗಿ ತುಲಾ ರಾಶಿಯವರು ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಕುಟುಂಬದಲ್ಲಿ ಪ್ರಗತಿ ಕಂಡು ಬರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಪ್ರಗತಿಯಾಗುವುದರಿಂದ ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಬಡ್ತಿ ಪಡೆಯುತ್ತೀರಿ. ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆಯನ್ನು ಪಡೆಯಲಿದೆ. ನಿಮ್ಮ ಅಂತಸ್ತು ಹೆಚ್ಚಾಗಲಿದೆ.
ಮೀನ ರಾಶಿ
ಈ ಯೋಗ ಮೀನ ರಾಶಿಯವಿರಿಗೂ ವಿಶೇಷ ಆರ್ಥಿಕ ಪ್ರಯೋಜನ ನೀಡಲಿದೆ. ಶನಿ ಸಾಡೇಸಾತಿ ಇದ್ದರೂ ಈ ಯೋಗದ ಬಲದಿಂದಾಗಿ ಹೆಚ್ಚಿನ ಆರ್ಥಿಕ ತೊಂದರೆಗಳು ಉಂಟಾಗುವುದಿಲ್ಲ. ನಿಮ್ಮ ಸಂಪತ್ತು ವೃದ್ಧಿಸಲಿದೆ, ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ದೊರೆಯಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
