Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೂರ್ಯ-ಶನಿ ಯುತಿಯ ಈ ಅವಧಿಯಲ್ಲಿ ಈ 4 ರಾಶಿಯವರು ಜಾಗ್ರತೆ, ಯಾವ ಪರಿಹಾರ ಒಳ್ಳೆಯದು?
ಕುಂಭ ರಾಶಿಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗವಾಗಿದೆ. ಈ ಸಂಯೋಗ ಕೆಲವೊಂದು ರಾಶಿಗಳ ಮೇಲೆ ಅಡ್ಡಪರಿಣಾಮ ಬೀರಿದೆ, ಆ ರಾಶಿಗಳು ಯಾವುವು, ಪರಿಹಾರವೇನು ಎಂದು ನೋಡೋಣ ಬನ್ನಿ:
ಧನು ರಾಶಿ
ಈಗ ಸೂರ್ಯ-ಶನಿ ನಿಮ್ಮ ಮೂರನೇಯ ಮನೆಯಲ್ಲಿದೆ. ಈ ಗ್ರಹಗಳ ಪ್ರಭಾವದಿಂದ ನಿಮ್ಮ ನಡವಳಿಕೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು. ನಿಮ್ಮ ಹಠ-ಕೋಪ ಹೆಚ್ಚಾಗಬಹುದು. ಈ ಸಮಯದಲ್ಲಿ ನೀವು ವೃತ್ತಿಯಲ್ಲಿ ಸವಾಲುಗಳನ್ನು ಎದುರಿಸಬಹುದು. ಈ ಅವಧಿಯಲ್ಲಿ, ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಏರಿಳಿತಗಳನ್ನು ಕಾಣಬಹುದು.

ಮಕರ ರಾಶಿ
ಮಕರ ರಾಶಿಯಲ್ಲಿ ಎರಡನೇ ಮನೆಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗದ ಪರಿಣಾಮವಾಗಿ, ನೀವು ಅನೇಕ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ನೀವು ಆರ್ಥಿಕ ಸಂಕಷ್ಟ ಎದುರಿಸಬಹುದು. ಈ ಸಮಯದಲ್ಲಿ ಹಣವನ್ನು ಉಳಿಸಲು ಕಷ್ಟವಾಗಬಹುದು, ಕೆಲಸದಲ್ಲಿಯೂ ನಿಮ್ಮ ಕೆಲಸ ಪೂರ್ಣಗೊಳಿಸಲು ಅಡೆತಡೆಗಳು ಎದುರಾಗುವುದು. ಸೂರ್ಯ ಮತ್ತು ಶನಿಯ ಸಂಯೋಜನೆಯು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಈ ಸಮಯದಲ್ಲಿ ಆರೋಗ್ಯ ವಿಷಯದಲ್ಲಿ ಜಾಗ್ರತೆವಹಿಸಿ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಮೊದಲ ಮನೆಯಲ್ಲಿ ಸೂರ್ಯ-ಶನಿಯ ಸಂಯೋಗವಾಗಿದೆ. ಅದು ನಿಮ್ಮ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಪರಿಣಾಮವಾಗಿ, ಸಂಬಂಧಗಳನ್ನು ಕಾಪಾಡಿಕೊಳ್ಳಲು ನಿಮಗೆ ಕಷ್ಟವಾಗಬಹುದು. ವೈವಾಹಿಕ ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು, ನಿಮ್ಮ ಸಂಗಾತಿ ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದನಿಸಬಹುದು.
ಮೀನ ರಾಶಿ
ಮೀನ ರಾಶಿಯವರಲ್ಲಿ 12ನೇ ಮನೆಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗವಾಗಲಿದೆ. ಈ ಸಂಯೋಗದ ಪರಿಣಾಮವಾಗಿ ನೀವು ಜೀವನದಲ್ಲಿ ಪ್ರತಿಯೊಂದು ಹಂತದಲ್ಲಿಯೂ ಸವಾಲನ್ನು ಎದುರಿಸಲು ಸಿದ್ಧರಾಗಿರುತ್ತೀರಿ. ಆದರೆ ಈ ಸಂಯೋಗದ ಸಮಯದಲ್ಲಿ ನೀವು ಅಭದ್ರತೆಯ ಭಾವನೆಯನ್ನು ಅನುಭವಿಸಬಹುದು. ನಿಮ್ಮ ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಭಯಪಡುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ಈ ಅವಧಿಯಲ್ಲಿ ಖರ್ಚುಗಳು ಅಧಿಕವಿರಬಹುದು.
ಶನಿ-ಸೂರ್ಯ ಯುತಿಯಿಂದ ಉಂಟಾದ ಕೆಟ್ಟ ಪರಿಣಾಮಗಳೇನು?
ಖಿನ್ನತೆ
ವೃತ್ತಿಯಲ್ಲಿ ಸವಾಲುಗಳು
ಅನಾರೋಗ್ಯ
ಬೇಗನೆ ಕೋಪ ಬರುವುದು
ಅನೈತಿಕ ಸಂಬಂಧ, ತೇಜೋವಧೆ ಉಂಟಾಗುವುದು
ಈ ಬಗೆಯ ಸಮಸ್ಯೆಗಳು ಕಂಡು ಬರುವುದು
ಶನಿಯ ಕೆಟ್ಟ ಪ್ರಭಾವ ಕಡಿಮೆ
ಈ ಶನಿ ಮಂತ್ರ ಪಠಿಸಿ. ಓಂ ಪ್ರಾಂ ಪ್ರೀಂ ಪ್ರೌಂ ಸಃ ಶನೈಶ್ಚರಾಯ ನಮಃ ಓಂ ಐಂಗ್ ಹ್ರಿಂಗ್ ಶ್ರೀಂಗ್ ಶಂಗ್ ಶನೈಶ್ಚರಾಯ ನಮಃ ಓಂ ಓಂ ಹಿಂ ಶಂ ಶನಯೇ ನಮಃ ಓಂ ಶಂ ಶನೈಶ್ಚರಾಯ ನಮಃ
ಈ ಮಂತ್ರ ಪ್ರತಿದಿನ ಪಠಿಸಿ.
ಶನಿವಾರ ಶನಿದೇವಾಲಯಕ್ಕೆ ಹೋಗಿ ಶನಿದೇವರಿಗೆ ಪ್ರಾರ್ಥನೆ ಮಾಡಿ,
ಶನಿ ದೇವರಿಗೆ ಸಾಸಿವೆಯೆಣ್ಣೆ ಅರ್ಪಿಸಿ
ಪ್ರತಿದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರ ಪಠಿಸಿ
ಸೂರ್ಯ ಬೀಜ ಮಂತ್ರ
ಓಂ ಹರಂ ಹ್ರೀ ಹ್ರೌಂ ಸಃ ಸೂರ್ಯಾಯ ನಮಃ
ಸೂರ್ಯ ನಮಸ್ಕಾರ ಮಂತ್ರ :
ಓಂ ಮಿತ್ರಾಯ ನಮಃ
ಓಂ ರವಾಯ್ರೇ ನಮಃ
ಓಂ ಸೂರ್ಯಾಯ ನಮಃ
ಓಂ ಭಾನವೇ ನಮಃ
ಓಂ ಖಗಾಯ ನಮಃ
ಓಂ ಪುಷ್ನೇ ನಮಃ
ಓಂ ಹಿರಣ್ಯಗರ್ಭಾಯ ನಮಃ
ಓಂ ಮರೀಚಯೇ ನಮಃ
ಓಂ ಆದಿತ್ಯಾಯ ನಮಃ
ಓಂ ಸವಿತ್ರೇ ನಮಃ
ಓಂ ಅರ್ಕಾಯ ನಮಃ
ಓಂ ಭಾಸ್ಕರಾಯ ನಮಃ
ಸೂರ್ಯ ಗಾಯತ್ರಿ ಮಂತ್ರ :
ಓಂ ಭಾಸ್ಕರಾಯ ವಿದ್ಮಹೇ ಮಹಾದುತ್ಯಾತಿಕರಾಯ ಧೀಮಹಿ ತಾನಃ ಸೂರ್ಯ ಪ್ರಚೋದಯಾತ್ ಓಂ ಆದಿತ್ಯಾಯ ವಿದ್ಮಹೇ ಮಾರ್ತಾಂಡೇ ಧೀಮಹಿ ತನಃ ಸೂರ್ಯ ಪ್ರಚೋದಯಾತ್ ಓಂ ಸಪ್ತ ತುರಂಗಾಯ ವಿದ್ಮಹೇ ಸಹಸ್ರ ಕೀರ್ಣಯ ಧೀಮಹಿ ತನ್ನೋ ರವಿ ಪ್ರಚೋದಯಾತ್
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications